ಕ್ರೀಡೆ

ಭಾರತ ಸೋಲುವ ಮೂಲಕ ಕ್ರಿಕೆಟ್‌ ಗೆದ್ದಿದೆ: ಅಬ್ದುಲ್‌ ರಝಾಕ್

ನವದೆಹಲಿ : ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯುದ್ದಕ್ಕೂ ಭಾರತ ವಿರೋದ್ಧ ಹಲವಾರು ಗಂಭೀರ ಆರೋಪಗಳನ್ನು ಪಾಕಿಸ್ತಾನ ಮಾಡುತ್ತಾ ಬರುತ್ತಿದೆ.

ಭಾರತ ಆತಿಥ್ಯ ವಹಿಸಿದ್ದ ಏಕದಿನ ವಿಶ್ವಕಪ್‌ 2023 ರಲ್ಲಿ ನೀರಸ ಪ್ರದರ್ಶನ ತೋರಿದ ಪಾಕಿಸ್ತಾನ ಲೀಗ್‌ ಹಂತದಲ್ಲಿ ಟೂರ್ನಿಯಿಂದ ಹೊರ ನಡೆದಿತ್ತು. ಇದರಿಂದ ಅಸಮಧಾನಗೊಂಡಿದ್ದ ಪಾಕ್‌ ಮಾಜಿ ಆಟಗಾರರು ಭಾರತ ವಿರುದ್ಧ ಒಂದಲ್ಲಾ ಒಂದು ಆರೋಪ ಮಾಡುತ್ತಲೇ ಬರುತ್ತಿದ್ದಾರೆ.

ಪಾಕ್‌ ಆಟಗಾರ ಹಸನ್‌ ರಾಜಾ ಭಾರತ ಆಟಗಾರರಿಗೆ ಬೇರೆ ಚೆಂಡು ನೀಡಲಾಗುತ್ತಿದೆ ಎಂದು ಆರೋಪಿಸಿದ್ದರು. ಬಾಲಿವುಡ್‌ ನಟಿ ಐಶ್ವರ್ಯ ರೈನ್ನು ಮದುವೆಯಾಗಿ ಸುಂದರವಾದ ಮಗುವನ್ನು ಅವರಿಂದ ನಿರೀಕ್ಷಿಸಲು ಸಾಧ್ಯವೇ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಪಾಕ್‌ ಆಲ್‌ರೌಂಡರ್‌ ಅಬ್ದುಲ್‌ ರಝಾಕ್‌ ಇದೀಗ ಭಾರತ ವಿಶ್ವಕಪ್‌ ಸೋತಿದ್ದಕ್ಕೆ ಮತ್ತೊಮ್ಮೆ ಗಂಭೀರ ಆರೋಪ ಮಾಡಿದ್ದಾರೆ.

ಭಾರತ ವಿಶ್ವಕಪ್‌ ಆಡಲು ತಮಗೆ ಬೇಕಾದ ಹಾಗೆ ಪಿಚ್‌ ಕಂಡಿಷನ್‌ ಅನ್ನು ಬದಲಾಯಿಸಿಕೊಂಡಿದೆ. ಇದು ಭಾರತಕ್ಕೆ ಅನುಕೂಲವಾಗಿತ್ತು ಎಂದು ಅವರು ಆರೋಪಿಸಿದ್ದಾರೆ.

ಜೊತೆಗೆ ಭಾರತ ತಂಡ ಏಕದಿನ ವಿಶ್ವಕಪ್‌ ಫೈನಲ್‌ ನಲ್ಲಿ ಸೋತಿದ್ದು ಒಳ್ಳೆಯದು. ಭಾರತ ಸೋತಿದ್ದಕ್ಕೆ ಕ್ರಿಕೆಟ್‌ ಗೆದ್ದಿತು ಎಂದು ಅವರು ಅಭಿಪ್ರಾಯಪಟ್ಟದ್ದಾರೆ. ಬ್ಯಾಟಿಂಗ್‌ ಬೌಲಿಂಗ್‌ ಎರಡರಲ್ಲಿಯೂ ಹೀನಾಯ ಪ್ರದರ್ಶನ ತೋರಿದ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ೬ ವಿಕೆಟ್‌ಗಳ ಸೋಲು ಅನುಭವಿಸಿತ್ತು. ೧೨ ವರ್ಷಗಳ ಕಪ್‌ ಗೆಲ್ಲುವ ಕನಸು ಕನಸಾಗಿಯೇ ಉಳಿಯಿತು. ಇತ್ತ ಅತ್ಯುತ್ತಮ ಪ್ರದರ್ಶನ ತೋರಿದ ಆಸೀಸ್‌ ತವರು ನೆಲದಲ್ಲಿ ಭಾರತವನ್ನು ಮಣಿಸಿ ೬ನೇ ಬಾರಿಗೆ ಚಾಂಪಿಯನ್‌ ಆಗಿ ಹೊರಹೊಮ್ಮಿತು.

ರಝಾಕ್‌ ಹೇಳಿದೇನು? : ಪಾಕ್‌ ನ ಖಾಸಗಿ ಟಿವಿ ಶೋ ಒಂದರಲ್ಲಿ ಮಾತನಾಡಿದ್ದ ರಝಾಕ್‌, ಪ್ರಾಮಾಣಿಕವಾಗಿ ಹೇಳಬೇಕೆಂದರೆ ಭಾರತ ಸೋಲಿನೊಂದಿಗೆ ಕ್ರಿಕೆಟ್‌ ಗೆದ್ದಿದೆ, ಏಕೆಂದರೆ ಭಾರತ ಅವರಿಗೆ ಬೇಕಾದ ಹಾಗೆ, ಅವರ ಅನುಕೂಲಕ್ಕೆ ತಕ್ಕಂತೆ ಮಾಡಿಕೊಂಡಿದ್ದರು. ಒಂದು ವೇಳೆ ಅವರು ಈ ಟೂರ್ನಿಯಲ್ಲಿ ಭಾರತ ಗೆದ್ದಿದ್ದರೇ ಕ್ರಿಕೆಟ್‌ ಮೇಲೆ ಅವರು ಪ್ರಾಬಲ್ಯ ಸಾಧಿಸುತ್ತಿದ್ದರು. ಭಾರತ ತಂಡ ಫೈನಲ್‌ ನಲ್ಲಿ ಗೆದ್ದಿದ್ದರೇ ನನಗೆ ನಿಜವಾಗಿಯೂ ಬೇಸವಾಗುತ್ತಿತ್ತು. ಕ್ರಿಕೆಟ್‌ ಧೈರ್ಯ ಮತ್ತು ಮಾನಸಿಕವಾಗಿ ಸದೃಡವಾಗಿರುವ ತಂಡಕ್ಕೆ ನೆರವಾಗುತ್ತದೆ ಎಂಬುದು ಸ್ಪಷ್ಟವಾಗಿದೆ ಎಂದಿದ್ದಾರೆ.

ಭಾರತ ಗೆದ್ದಿದ್ದರೆ ನಿಜವಾಗಿಯೂ ನಾವು ಪಶ್ಚಾತಾಪ ಪಡುತ್ತಿದ್ದೆವು. ಅವರಿಗೆ ಬೇಕಾದ ಹಾಗೆ ಕಂಡಿಷನ್‌ ನ್ನು ಸಂಪೂರ್ಣವಾಗಿ ಬಳಸಕೊಂಡಿದ್ದಾರೆ. ಸೆಮಿಸ್‌ ನಲ್ಲಿ ಬೃಹತ್‌ ಮೊತ್ತ ಕಲೆಹಾಕಿ, ಫೈನಲ್‌ನಲ್ಲಿ ನಿಧಾನಗತಿಯಿಂದ ಪಿಚ್‌ ಕೂಡಿತ್ತು. ಇಲ್ಲಿ ಒಂದು ತಪ್ಪು ನಡೆದಿದೆ ಎಂದು ನನಗನಿಸುತ್ತಿದೆ. ಪಿಚ್‌ಗಳು, ಅವುಗಳ ವಾತಾವರಣ ಎರಡು ತಂಡಗಳಿಗೆ ಸಮತೋಲನದಿಂದ ಕೂಡಿರಬೇಕು. ಕೊಹ್ಲಿ ಶತಕ ಸಿಡಿಸಿದ್ದರೆ ಭಾರತ ಅದರ ಲಾಭ ಟೀಂ ಇಂಡಿಯಾ ಪಡೆಯುತ್ತಿತ್ತು. ಆ ಮೂಲಕ ಕಪ್‌ ಗೆಲ್ಲುತ್ತಿದ್ದರು ಎಂದು ಅವರು ದೂರಿದ್ದಾರೆ.

ವಿಶ್ವಕಪ್‌ ಟೂರ್ನಿ ವೇಳೆ ಭಾರತದ ಮೇಲೆ ವಿಭಿನ್ನ ಚೆಂಡು ಬಳಕೆ, ಡಿಆರ್‌ಎಸ್‌, ಪಿಚ್‌ ಸೇರಿದಂತೆ ಹಲವಾರು ಆರೋಪಗಳನ್ನು ಮಾಡಲಾಗಿತ್ತು.

andolanait

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

4 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

4 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

4 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

5 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

5 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

5 hours ago