ಕ್ರೀಡೆ

ಏಕದಿನ ಪಂದ್ಯ : ಸೌತ್‌ ಆಫ್ರಿಕಾ ವಿರುದ್ಧ ಸರಣಿಗೆದ್ದ ಭಾರತ.!

ನವದೆಹಲಿ:  ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಭಾರತ ತಂಡವು 2-1 ಅಂತರದಿಂದ ಸರಣಿ ಗೆದ್ದುಕೊಂಡಿದೆ. ಇದಕ್ಕೂ ಮುನ್ನ ನಡೆದ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಟೀಮ್ ಇಂಡಿಯಾಗೆ ಸೋಲುಣಿಸಿತ್ತು. ಇನ್ನು 2ನೇ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸುವ ಮೂಲಕ ಟೀಮ್ ಇಂಡಿಯಾ ಸರಣಿಯಲ್ಲಿ ಸಮಬಲ ಸಾಧಿಸಿತ್ತು. ಹೀಗಾಗಿ ಮೂರನೇ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯವಾಗಿತ್ತು.

ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಕೇವಲ 99ರನ್‌ಗೆ ಆಲೌಟ್ ಆಯಿತು. 100ರನ್ ಟಾರ್ಗೆಟ್ ಪಡೆದ ಟೀಂ ಇಂಡಿಯಾ ನಿರೀಕ್ಷಿತ ಆರಂಭ ನೀಡಲು ಸಾಧ್ಯವಾಗಲಿಲ್ಲ. ನಾಯಕ ಶಿಖರ್ ಧವನ್ 8 ರನ್ ಸಿಡಿಸಿ ರನೌಟ್‌ಗೆ ಬಲಿಯಾದರು. ಆದರೆ ಶುಭಮನ್ ಗಿಲ್ ಹಾಗೂ ಇಶಾನ್ ಕಿಶನ್ ಜೊತೆಯಾಟದಿಂದ ಟೀಂ ಇಂಡಿಯಾ ಸುಭವಾಗಿ ಗುರಿಯತ್ತ ಸಾಗಿತು.

ಆದರೆ ಇಶಾನ್ ಕಿಶನ್ 10 ರನ್ ಸಿಡಿಸಿ ಔಟಾದರು. ಶುಭಮನ್ ಗಿಲ್ ಹಾಗೂ ಶ್ರೇಯಸ್ ಅಯ್ಯರ್ ಉತ್ತಮ ಜೊತೆಯಾಟ ನೀಡಿದರು.  ದಿಟ್ಟ ಹೋರಾಟ ನೀಡಿದ ಗಿಲ್ 49 ರನ್ ಸಿಡಿಸಿ ಔಟಾದರು. ಇತ್ತ ಅಯ್ಯರ್ ಹಾಗೂ ಸಂಜು ಸ್ಯಾಮ್ಸನ್ ಹೋರಾಟದಿಂದ ಟೀಂ ಇಂಡಿಯಾ ಸುಭವಾಗಿ ಗುರಿ ತಲುಪಿತು. ಅಯ್ಯರ್ ಅಜೇಯ 28 ರನ್ ಸಿಡಿಸಿದರೆ, ಸ್ಯಾಮ್ಸನ್ ಅಜೇಯ 2 ರನ್ ಸಿಡಿಸಿದರು. ಈ ಮೂಲಕ ಟೀಂ ಇಂಡಿಯಾ 19.1 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

 

andolana

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

6 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

9 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

9 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

11 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

12 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

13 hours ago