ನವದೆಹಲಿ: ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಭಾರತ ತಂಡವು 2-1 ಅಂತರದಿಂದ ಸರಣಿ ಗೆದ್ದುಕೊಂಡಿದೆ. ಇದಕ್ಕೂ ಮುನ್ನ ನಡೆದ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಟೀಮ್ ಇಂಡಿಯಾಗೆ ಸೋಲುಣಿಸಿತ್ತು. ಇನ್ನು 2ನೇ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸುವ ಮೂಲಕ ಟೀಮ್ ಇಂಡಿಯಾ ಸರಣಿಯಲ್ಲಿ ಸಮಬಲ ಸಾಧಿಸಿತ್ತು. ಹೀಗಾಗಿ ಮೂರನೇ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯವಾಗಿತ್ತು.
ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಕೇವಲ 99ರನ್ಗೆ ಆಲೌಟ್ ಆಯಿತು. 100ರನ್ ಟಾರ್ಗೆಟ್ ಪಡೆದ ಟೀಂ ಇಂಡಿಯಾ ನಿರೀಕ್ಷಿತ ಆರಂಭ ನೀಡಲು ಸಾಧ್ಯವಾಗಲಿಲ್ಲ. ನಾಯಕ ಶಿಖರ್ ಧವನ್ 8 ರನ್ ಸಿಡಿಸಿ ರನೌಟ್ಗೆ ಬಲಿಯಾದರು. ಆದರೆ ಶುಭಮನ್ ಗಿಲ್ ಹಾಗೂ ಇಶಾನ್ ಕಿಶನ್ ಜೊತೆಯಾಟದಿಂದ ಟೀಂ ಇಂಡಿಯಾ ಸುಭವಾಗಿ ಗುರಿಯತ್ತ ಸಾಗಿತು.
ಆದರೆ ಇಶಾನ್ ಕಿಶನ್ 10 ರನ್ ಸಿಡಿಸಿ ಔಟಾದರು. ಶುಭಮನ್ ಗಿಲ್ ಹಾಗೂ ಶ್ರೇಯಸ್ ಅಯ್ಯರ್ ಉತ್ತಮ ಜೊತೆಯಾಟ ನೀಡಿದರು. ದಿಟ್ಟ ಹೋರಾಟ ನೀಡಿದ ಗಿಲ್ 49 ರನ್ ಸಿಡಿಸಿ ಔಟಾದರು. ಇತ್ತ ಅಯ್ಯರ್ ಹಾಗೂ ಸಂಜು ಸ್ಯಾಮ್ಸನ್ ಹೋರಾಟದಿಂದ ಟೀಂ ಇಂಡಿಯಾ ಸುಭವಾಗಿ ಗುರಿ ತಲುಪಿತು. ಅಯ್ಯರ್ ಅಜೇಯ 28 ರನ್ ಸಿಡಿಸಿದರೆ, ಸ್ಯಾಮ್ಸನ್ ಅಜೇಯ 2 ರನ್ ಸಿಡಿಸಿದರು. ಈ ಮೂಲಕ ಟೀಂ ಇಂಡಿಯಾ 19.1 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…