ಕ್ರೀಡೆ

ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಗೆದ್ದ ಭಾರತ : ಮಲೇಷ್ಯಾ ವಿರುದ್ಧ 4-3 ಅಂತರದ ರೋಚಕ ಜಯ

ಚೆನ್ನೈ : ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ-2023 ಫೈನಲ್‌ ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ ಭಾರತ ರೋಚಕ ಜಯ ಸಾಧಿಸಿದೆ. ಆ ಮೂಲಕ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.

ಚೆನ್ನೈನಲ್ಲಿ ಶನಿವಾರ ನಡೆದ ಫೈನಲ್‌ ಪಂದ್ಯದಲ್ಲಿ ಭಾರತ 4-3 ಅಂತರದಲ್ಲಿ ಮಲೇಷ್ಯಾ ವಿರುದ್ಧ ವಿರೋಚಿತ ಜಯ ಗಳಿಸಿತು. ಆ ಮೂಲಕ ACT ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.

ರಣರೋಚಕ ಆಟದಲ್ಲಿ ಮೊದಲ ಕ್ವಾರ್ಟರ್‌ನಲ್ಲಿ ಭಾರತದ ಜುಗರಾಜ್ ಸಿಂಗ್ ಗೋಲು ಗಳಿಸಿ ಭಾರತಕ್ಕೆ ಆರಂಭಿಕ ಮುನ್ನಡೆ ಒದಗಿಸಿದರು. ಆದರೆ ಮಲೇಷ್ಯಾದ ಕಮಲ್ ಅಬು ಅರ್ಜೈ 1-1 ರಿಂದ ಸಮಬಲ ಸಾಧಿಸಿದರು. ನಂತರ ಎರಡನೇ ಕ್ವಾರ್ಟರ್‌ನಲ್ಲಿ ರಾಝೀ ರಹೀಮ್ ಪೆನಾಲ್ಟಿ ಕಾರ್ನರ್ ಅನ್ನು ಗೋಲಾಗಿ ಪರಿವರ್ತಿಸಿ ಮಲೇಷ್ಯಾಗೆ 2-1 ಗೋಲು ಗಳಿಸಿದರು. ಅಮಿನುದ್ದೀನ್ ಮುಹಮ್ಮದ್ ಎರಡನೇ ಕ್ವಾರ್ಟರ್‌ನಲ್ಲಿ ಪೆನಾಲ್ಟಿ ಕಾರ್ನರ್ ಮೂಲಕ 3-1 ಗೋಲು ಗಳಿಸಿದರು.

ಈ ವೇಳೆ ಭಾರತ ಮತ್ತೆ ಪುಟಿದೆದ್ದಿತು. ಮೂರನೇ ಕ್ವಾರ್ಟರ್‌ನಲ್ಲಿ ಹರ್ಮನ್‌ಪ್ರೀತ್ ಸಿಂಗ್ ಪೆನಾಲ್ಟಿ ಸ್ಟ್ರೋಕ್ ಅನ್ನು 2-3 ಗೆ ಪರಿವರ್ತಿಸಿದರು. ನಂತರ ಗುರ್ಜಂತ್ 3-3 ಮೂಲಕ ಸಮಬಲಕ್ಕೆ ತಂದರು. ಕೊನೆಯದಾಗಿ ಆಕಾಶದೀಪ್ ಗೋಲ್‌ ನೀಡುವ ಮೂಲಕ ACT ಪ್ರಶಸ್ತಿಯನ್ನು ಭಾರತ ಮುಡಿಗೇರಿಸಿಕೊಳ್ಳಲು ಸಹಾಯ ಮಾಡಿದರು.

lokesh

Recent Posts

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

6 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

7 hours ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

7 hours ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

8 hours ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

8 hours ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

9 hours ago