ಚೆನ್ನೈ : ಏಷ್ಯನ್ ಚಾಂಪಿಯನ್ಸ್ ಟ್ರೋಫಿ-2023 ಫೈನಲ್ ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ ಭಾರತ ರೋಚಕ ಜಯ ಸಾಧಿಸಿದೆ. ಆ ಮೂಲಕ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.
ಚೆನ್ನೈನಲ್ಲಿ ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಭಾರತ 4-3 ಅಂತರದಲ್ಲಿ ಮಲೇಷ್ಯಾ ವಿರುದ್ಧ ವಿರೋಚಿತ ಜಯ ಗಳಿಸಿತು. ಆ ಮೂಲಕ ACT ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.
ರಣರೋಚಕ ಆಟದಲ್ಲಿ ಮೊದಲ ಕ್ವಾರ್ಟರ್ನಲ್ಲಿ ಭಾರತದ ಜುಗರಾಜ್ ಸಿಂಗ್ ಗೋಲು ಗಳಿಸಿ ಭಾರತಕ್ಕೆ ಆರಂಭಿಕ ಮುನ್ನಡೆ ಒದಗಿಸಿದರು. ಆದರೆ ಮಲೇಷ್ಯಾದ ಕಮಲ್ ಅಬು ಅರ್ಜೈ 1-1 ರಿಂದ ಸಮಬಲ ಸಾಧಿಸಿದರು. ನಂತರ ಎರಡನೇ ಕ್ವಾರ್ಟರ್ನಲ್ಲಿ ರಾಝೀ ರಹೀಮ್ ಪೆನಾಲ್ಟಿ ಕಾರ್ನರ್ ಅನ್ನು ಗೋಲಾಗಿ ಪರಿವರ್ತಿಸಿ ಮಲೇಷ್ಯಾಗೆ 2-1 ಗೋಲು ಗಳಿಸಿದರು. ಅಮಿನುದ್ದೀನ್ ಮುಹಮ್ಮದ್ ಎರಡನೇ ಕ್ವಾರ್ಟರ್ನಲ್ಲಿ ಪೆನಾಲ್ಟಿ ಕಾರ್ನರ್ ಮೂಲಕ 3-1 ಗೋಲು ಗಳಿಸಿದರು.
ಈ ವೇಳೆ ಭಾರತ ಮತ್ತೆ ಪುಟಿದೆದ್ದಿತು. ಮೂರನೇ ಕ್ವಾರ್ಟರ್ನಲ್ಲಿ ಹರ್ಮನ್ಪ್ರೀತ್ ಸಿಂಗ್ ಪೆನಾಲ್ಟಿ ಸ್ಟ್ರೋಕ್ ಅನ್ನು 2-3 ಗೆ ಪರಿವರ್ತಿಸಿದರು. ನಂತರ ಗುರ್ಜಂತ್ 3-3 ಮೂಲಕ ಸಮಬಲಕ್ಕೆ ತಂದರು. ಕೊನೆಯದಾಗಿ ಆಕಾಶದೀಪ್ ಗೋಲ್ ನೀಡುವ ಮೂಲಕ ACT ಪ್ರಶಸ್ತಿಯನ್ನು ಭಾರತ ಮುಡಿಗೇರಿಸಿಕೊಳ್ಳಲು ಸಹಾಯ ಮಾಡಿದರು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…