ಚೆನ್ನೈ : ಏಷ್ಯನ್ ಚಾಂಪಿಯನ್ಸ್ ಟ್ರೋಫಿ-2023 ಫೈನಲ್ ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ ಭಾರತ ರೋಚಕ ಜಯ ಸಾಧಿಸಿದೆ. ಆ ಮೂಲಕ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.
ಚೆನ್ನೈನಲ್ಲಿ ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಭಾರತ 4-3 ಅಂತರದಲ್ಲಿ ಮಲೇಷ್ಯಾ ವಿರುದ್ಧ ವಿರೋಚಿತ ಜಯ ಗಳಿಸಿತು. ಆ ಮೂಲಕ ACT ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.
ರಣರೋಚಕ ಆಟದಲ್ಲಿ ಮೊದಲ ಕ್ವಾರ್ಟರ್ನಲ್ಲಿ ಭಾರತದ ಜುಗರಾಜ್ ಸಿಂಗ್ ಗೋಲು ಗಳಿಸಿ ಭಾರತಕ್ಕೆ ಆರಂಭಿಕ ಮುನ್ನಡೆ ಒದಗಿಸಿದರು. ಆದರೆ ಮಲೇಷ್ಯಾದ ಕಮಲ್ ಅಬು ಅರ್ಜೈ 1-1 ರಿಂದ ಸಮಬಲ ಸಾಧಿಸಿದರು. ನಂತರ ಎರಡನೇ ಕ್ವಾರ್ಟರ್ನಲ್ಲಿ ರಾಝೀ ರಹೀಮ್ ಪೆನಾಲ್ಟಿ ಕಾರ್ನರ್ ಅನ್ನು ಗೋಲಾಗಿ ಪರಿವರ್ತಿಸಿ ಮಲೇಷ್ಯಾಗೆ 2-1 ಗೋಲು ಗಳಿಸಿದರು. ಅಮಿನುದ್ದೀನ್ ಮುಹಮ್ಮದ್ ಎರಡನೇ ಕ್ವಾರ್ಟರ್ನಲ್ಲಿ ಪೆನಾಲ್ಟಿ ಕಾರ್ನರ್ ಮೂಲಕ 3-1 ಗೋಲು ಗಳಿಸಿದರು.
ಈ ವೇಳೆ ಭಾರತ ಮತ್ತೆ ಪುಟಿದೆದ್ದಿತು. ಮೂರನೇ ಕ್ವಾರ್ಟರ್ನಲ್ಲಿ ಹರ್ಮನ್ಪ್ರೀತ್ ಸಿಂಗ್ ಪೆನಾಲ್ಟಿ ಸ್ಟ್ರೋಕ್ ಅನ್ನು 2-3 ಗೆ ಪರಿವರ್ತಿಸಿದರು. ನಂತರ ಗುರ್ಜಂತ್ 3-3 ಮೂಲಕ ಸಮಬಲಕ್ಕೆ ತಂದರು. ಕೊನೆಯದಾಗಿ ಆಕಾಶದೀಪ್ ಗೋಲ್ ನೀಡುವ ಮೂಲಕ ACT ಪ್ರಶಸ್ತಿಯನ್ನು ಭಾರತ ಮುಡಿಗೇರಿಸಿಕೊಳ್ಳಲು ಸಹಾಯ ಮಾಡಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…