ಕ್ರೀಡೆ

ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಗೆದ್ದ ಭಾರತ : ಮಲೇಷ್ಯಾ ವಿರುದ್ಧ 4-3 ಅಂತರದ ರೋಚಕ ಜಯ

ಚೆನ್ನೈ : ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ-2023 ಫೈನಲ್‌ ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ ಭಾರತ ರೋಚಕ ಜಯ ಸಾಧಿಸಿದೆ. ಆ ಮೂಲಕ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.

ಚೆನ್ನೈನಲ್ಲಿ ಶನಿವಾರ ನಡೆದ ಫೈನಲ್‌ ಪಂದ್ಯದಲ್ಲಿ ಭಾರತ 4-3 ಅಂತರದಲ್ಲಿ ಮಲೇಷ್ಯಾ ವಿರುದ್ಧ ವಿರೋಚಿತ ಜಯ ಗಳಿಸಿತು. ಆ ಮೂಲಕ ACT ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.

ರಣರೋಚಕ ಆಟದಲ್ಲಿ ಮೊದಲ ಕ್ವಾರ್ಟರ್‌ನಲ್ಲಿ ಭಾರತದ ಜುಗರಾಜ್ ಸಿಂಗ್ ಗೋಲು ಗಳಿಸಿ ಭಾರತಕ್ಕೆ ಆರಂಭಿಕ ಮುನ್ನಡೆ ಒದಗಿಸಿದರು. ಆದರೆ ಮಲೇಷ್ಯಾದ ಕಮಲ್ ಅಬು ಅರ್ಜೈ 1-1 ರಿಂದ ಸಮಬಲ ಸಾಧಿಸಿದರು. ನಂತರ ಎರಡನೇ ಕ್ವಾರ್ಟರ್‌ನಲ್ಲಿ ರಾಝೀ ರಹೀಮ್ ಪೆನಾಲ್ಟಿ ಕಾರ್ನರ್ ಅನ್ನು ಗೋಲಾಗಿ ಪರಿವರ್ತಿಸಿ ಮಲೇಷ್ಯಾಗೆ 2-1 ಗೋಲು ಗಳಿಸಿದರು. ಅಮಿನುದ್ದೀನ್ ಮುಹಮ್ಮದ್ ಎರಡನೇ ಕ್ವಾರ್ಟರ್‌ನಲ್ಲಿ ಪೆನಾಲ್ಟಿ ಕಾರ್ನರ್ ಮೂಲಕ 3-1 ಗೋಲು ಗಳಿಸಿದರು.

ಈ ವೇಳೆ ಭಾರತ ಮತ್ತೆ ಪುಟಿದೆದ್ದಿತು. ಮೂರನೇ ಕ್ವಾರ್ಟರ್‌ನಲ್ಲಿ ಹರ್ಮನ್‌ಪ್ರೀತ್ ಸಿಂಗ್ ಪೆನಾಲ್ಟಿ ಸ್ಟ್ರೋಕ್ ಅನ್ನು 2-3 ಗೆ ಪರಿವರ್ತಿಸಿದರು. ನಂತರ ಗುರ್ಜಂತ್ 3-3 ಮೂಲಕ ಸಮಬಲಕ್ಕೆ ತಂದರು. ಕೊನೆಯದಾಗಿ ಆಕಾಶದೀಪ್ ಗೋಲ್‌ ನೀಡುವ ಮೂಲಕ ACT ಪ್ರಶಸ್ತಿಯನ್ನು ಭಾರತ ಮುಡಿಗೇರಿಸಿಕೊಳ್ಳಲು ಸಹಾಯ ಮಾಡಿದರು.

lokesh

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

56 mins ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

60 mins ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

1 hour ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

1 hour ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

1 hour ago