ಕ್ರೀಡೆ

ಏಷ್ಯನ್ ಪ್ಯಾರಾ ಗೇಮ್ಸ್‌ ನಲ್ಲಿ 100ಕ್ಕೂ ಹೆಚ್ಚು ಪದಕ ಗೆದ್ದು ಇತಿಹಾಸ ಬರೆದ ಭಾರತ : ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ : ಇತ್ತೀಚಿಗೆ ಅಂತ್ಯಗೊಂಡಿದ್ದ ಏಷ್ಯನ್ ಗೇಮ್ಸ್‌ನಲ್ಲಿ ಭಾರತ 100ಕ್ಕೂ ಹೆಚ್ಚು ಪದಕ ಗೆದ್ದು ಹೊಸ ಇತಿಹಾಸ ಬರೆದಿತ್ತು. ಇದೀಗ ಚೀನಾದಲ್ಲಿ ನಡೆದ 4ನೇ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ 100 ಪದಕಗಳ ಗೆದ್ದು ಇತಿಹಾಸ ಬರೆದಿದ್ದಾರೆ.

ಪುರುಷರ 400 ಮೀಟರ್ ಟಿ47 ಸ್ಪರ್ಧೆಯಲ್ಲಿ ದಿಲೀಪ್ ಮಹಾದು ಗವಿತ್ 49.48 ಸೆಕೆಂಡುಗಳಲ್ಲಿ ಓಟವನ್ನು ಪೂರ್ಣಗೊಳಿಸುವ ಮೂಲಕ ಚಿನ್ನದ ಪದಕ ಗೆದ್ದು, ಭಾರತದ 100ನೇ ಪದಕ ಸಾಧನೆಗೆ ಕಾರಣರಾದರು. ಭಾರತದ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ 100 ಪದಕಗಳು! ಅಪೂರ್ವ ಆನಂದದ ಕ್ಷಣ. ಈ ಯಶಸ್ಸು ನಮ್ಮ ಅಥ್ಲೀಟ್‌ಗಳ ಸಂಪೂರ್ಣ ಪ್ರತಿಭೆ, ಕಠಿಣ ಪರಿಶ್ರಮ ಮತ್ತು ದೃಢಸಂಕಲ್ಪದ ಫಲವಾಗಿದೆ. ನಮ್ಮ ಯುವಕರಿಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದನ್ನು ಇವರು ನೆನಪಿಸುತ್ತಾರೆ ಎಂದಿದ್ದಾರೆ.

ಈ ಮೊದಲು 2018ರಲ್ಲಿ ಜಕಾರ್ತದಲ್ಲಿ ನಡೆದಿದ್ದ ಪ್ಯಾರಾ ಏಷ್ಯನ್ ಗೇಮ್ಸ್‌ನಲ್ಲಿ ಭಾರತ 72 ಪದಕ ಗೆದ್ದು ಸಾಧನೆ ಮಾಡಿತ್ತು. ಇದು ಈವರೆಗಿನ ಅತೀ ಹೆಚ್ಚು ಪದಕ ಗೆದ್ದ ಸಂಖ್ಯೆಯಾಗಿತ್ತು. ಆದರೆ ಈಗ ಈ ಪಟ್ಟಿ 100ಕ್ಕೆ ಏರಿದೆ. ಪ್ರಸ್ತುತ ಭಾರತ 29 ಚಿನ್ನ, 31 ಬೆಳ್ಳಿ ಹಾಗೂ 51 ಕಂಚಿನ ಪದಕ ಸೇರಿ ಒಟ್ಟು 111 ಪದಕ ಗೆದ್ದು ಕೊಂಡಿದೆ. ಈ ಮೂಲಕ ಪದಕ ವಿಜೇತರ ಪಟ್ಟಿಯಲ್ಲಿ ಭಾರತ 5ನೇ ಸ್ಥಾನದಲ್ಲಿದೆ. ಒಟ್ಟು 521 ಪದಕಗಳೊಂದಿಗೆ ಚೀನಾ ಮೊದಲ ಸ್ಥಾನದಲ್ಲಿದೆ.

https://x.com/narendramodi/status/1718103347364843860?s=20

lokesh

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

3 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

3 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

3 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

3 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

3 hours ago