ಕ್ರೀಡೆ

ಏಷ್ಯನ್ ಪ್ಯಾರಾ ಗೇಮ್ಸ್‌ ನಲ್ಲಿ 100ಕ್ಕೂ ಹೆಚ್ಚು ಪದಕ ಗೆದ್ದು ಇತಿಹಾಸ ಬರೆದ ಭಾರತ : ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ : ಇತ್ತೀಚಿಗೆ ಅಂತ್ಯಗೊಂಡಿದ್ದ ಏಷ್ಯನ್ ಗೇಮ್ಸ್‌ನಲ್ಲಿ ಭಾರತ 100ಕ್ಕೂ ಹೆಚ್ಚು ಪದಕ ಗೆದ್ದು ಹೊಸ ಇತಿಹಾಸ ಬರೆದಿತ್ತು. ಇದೀಗ ಚೀನಾದಲ್ಲಿ ನಡೆದ 4ನೇ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ 100 ಪದಕಗಳ ಗೆದ್ದು ಇತಿಹಾಸ ಬರೆದಿದ್ದಾರೆ.

ಪುರುಷರ 400 ಮೀಟರ್ ಟಿ47 ಸ್ಪರ್ಧೆಯಲ್ಲಿ ದಿಲೀಪ್ ಮಹಾದು ಗವಿತ್ 49.48 ಸೆಕೆಂಡುಗಳಲ್ಲಿ ಓಟವನ್ನು ಪೂರ್ಣಗೊಳಿಸುವ ಮೂಲಕ ಚಿನ್ನದ ಪದಕ ಗೆದ್ದು, ಭಾರತದ 100ನೇ ಪದಕ ಸಾಧನೆಗೆ ಕಾರಣರಾದರು. ಭಾರತದ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ 100 ಪದಕಗಳು! ಅಪೂರ್ವ ಆನಂದದ ಕ್ಷಣ. ಈ ಯಶಸ್ಸು ನಮ್ಮ ಅಥ್ಲೀಟ್‌ಗಳ ಸಂಪೂರ್ಣ ಪ್ರತಿಭೆ, ಕಠಿಣ ಪರಿಶ್ರಮ ಮತ್ತು ದೃಢಸಂಕಲ್ಪದ ಫಲವಾಗಿದೆ. ನಮ್ಮ ಯುವಕರಿಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದನ್ನು ಇವರು ನೆನಪಿಸುತ್ತಾರೆ ಎಂದಿದ್ದಾರೆ.

ಈ ಮೊದಲು 2018ರಲ್ಲಿ ಜಕಾರ್ತದಲ್ಲಿ ನಡೆದಿದ್ದ ಪ್ಯಾರಾ ಏಷ್ಯನ್ ಗೇಮ್ಸ್‌ನಲ್ಲಿ ಭಾರತ 72 ಪದಕ ಗೆದ್ದು ಸಾಧನೆ ಮಾಡಿತ್ತು. ಇದು ಈವರೆಗಿನ ಅತೀ ಹೆಚ್ಚು ಪದಕ ಗೆದ್ದ ಸಂಖ್ಯೆಯಾಗಿತ್ತು. ಆದರೆ ಈಗ ಈ ಪಟ್ಟಿ 100ಕ್ಕೆ ಏರಿದೆ. ಪ್ರಸ್ತುತ ಭಾರತ 29 ಚಿನ್ನ, 31 ಬೆಳ್ಳಿ ಹಾಗೂ 51 ಕಂಚಿನ ಪದಕ ಸೇರಿ ಒಟ್ಟು 111 ಪದಕ ಗೆದ್ದು ಕೊಂಡಿದೆ. ಈ ಮೂಲಕ ಪದಕ ವಿಜೇತರ ಪಟ್ಟಿಯಲ್ಲಿ ಭಾರತ 5ನೇ ಸ್ಥಾನದಲ್ಲಿದೆ. ಒಟ್ಟು 521 ಪದಕಗಳೊಂದಿಗೆ ಚೀನಾ ಮೊದಲ ಸ್ಥಾನದಲ್ಲಿದೆ.

https://x.com/narendramodi/status/1718103347364843860?s=20

lokesh

Recent Posts

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

2 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

3 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

3 hours ago

ತಮಿಳುನಾಡಿನಲ್ಲಿ ಟಿವಿಕೆಗೆ ಮುನ್ನಡೆ: ವಿಜಯ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್‌ಗೆ ಸಿಎಂ…

4 hours ago

ಬಾಗಲಕೋಟೆ ಉಪಚುನಾವಣೆ : ‘ಉಮೇಶ್‌ ಮೇಟಿಗೆ ಜಯ ; ಇಲ್ಲಿವೆ ಗೆಲುವಿನ ಅಂಶಗಳು….

ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…

5 hours ago

ಕೇರಳದಲ್ಲಿ ಯುಡಿಎಫ್‌ ಅಭೂತಪೂರ್ವ ಸಾಧನೆ

ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…

6 hours ago