ಕ್ರೀಡೆ

ಏಷ್ಯನ್ ಪ್ಯಾರಾ ಗೇಮ್ಸ್‌ ನಲ್ಲಿ 100ಕ್ಕೂ ಹೆಚ್ಚು ಪದಕ ಗೆದ್ದು ಇತಿಹಾಸ ಬರೆದ ಭಾರತ : ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ : ಇತ್ತೀಚಿಗೆ ಅಂತ್ಯಗೊಂಡಿದ್ದ ಏಷ್ಯನ್ ಗೇಮ್ಸ್‌ನಲ್ಲಿ ಭಾರತ 100ಕ್ಕೂ ಹೆಚ್ಚು ಪದಕ ಗೆದ್ದು ಹೊಸ ಇತಿಹಾಸ ಬರೆದಿತ್ತು. ಇದೀಗ ಚೀನಾದಲ್ಲಿ ನಡೆದ 4ನೇ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ 100 ಪದಕಗಳ ಗೆದ್ದು ಇತಿಹಾಸ ಬರೆದಿದ್ದಾರೆ.

ಪುರುಷರ 400 ಮೀಟರ್ ಟಿ47 ಸ್ಪರ್ಧೆಯಲ್ಲಿ ದಿಲೀಪ್ ಮಹಾದು ಗವಿತ್ 49.48 ಸೆಕೆಂಡುಗಳಲ್ಲಿ ಓಟವನ್ನು ಪೂರ್ಣಗೊಳಿಸುವ ಮೂಲಕ ಚಿನ್ನದ ಪದಕ ಗೆದ್ದು, ಭಾರತದ 100ನೇ ಪದಕ ಸಾಧನೆಗೆ ಕಾರಣರಾದರು. ಭಾರತದ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ 100 ಪದಕಗಳು! ಅಪೂರ್ವ ಆನಂದದ ಕ್ಷಣ. ಈ ಯಶಸ್ಸು ನಮ್ಮ ಅಥ್ಲೀಟ್‌ಗಳ ಸಂಪೂರ್ಣ ಪ್ರತಿಭೆ, ಕಠಿಣ ಪರಿಶ್ರಮ ಮತ್ತು ದೃಢಸಂಕಲ್ಪದ ಫಲವಾಗಿದೆ. ನಮ್ಮ ಯುವಕರಿಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದನ್ನು ಇವರು ನೆನಪಿಸುತ್ತಾರೆ ಎಂದಿದ್ದಾರೆ.

ಈ ಮೊದಲು 2018ರಲ್ಲಿ ಜಕಾರ್ತದಲ್ಲಿ ನಡೆದಿದ್ದ ಪ್ಯಾರಾ ಏಷ್ಯನ್ ಗೇಮ್ಸ್‌ನಲ್ಲಿ ಭಾರತ 72 ಪದಕ ಗೆದ್ದು ಸಾಧನೆ ಮಾಡಿತ್ತು. ಇದು ಈವರೆಗಿನ ಅತೀ ಹೆಚ್ಚು ಪದಕ ಗೆದ್ದ ಸಂಖ್ಯೆಯಾಗಿತ್ತು. ಆದರೆ ಈಗ ಈ ಪಟ್ಟಿ 100ಕ್ಕೆ ಏರಿದೆ. ಪ್ರಸ್ತುತ ಭಾರತ 29 ಚಿನ್ನ, 31 ಬೆಳ್ಳಿ ಹಾಗೂ 51 ಕಂಚಿನ ಪದಕ ಸೇರಿ ಒಟ್ಟು 111 ಪದಕ ಗೆದ್ದು ಕೊಂಡಿದೆ. ಈ ಮೂಲಕ ಪದಕ ವಿಜೇತರ ಪಟ್ಟಿಯಲ್ಲಿ ಭಾರತ 5ನೇ ಸ್ಥಾನದಲ್ಲಿದೆ. ಒಟ್ಟು 521 ಪದಕಗಳೊಂದಿಗೆ ಚೀನಾ ಮೊದಲ ಸ್ಥಾನದಲ್ಲಿದೆ.

https://x.com/narendramodi/status/1718103347364843860?s=20

lokesh

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

6 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

9 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

10 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

11 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

12 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

16 hours ago