ಕ್ರೀಡೆ

ಟ್ರಿಪಲ್ ಜಂಪ್‌ನಲ್ಲಿ ಚಿನ್ನ, ಬೆಳ್ಳಿ ಪದಕ ಪಡೆದು ಇತಿಹಾಸ ನಿರ್ಮಿಸಿದ ಭಾರತ ಕ್ರೀಡಾಪಟುಗಳು

ಬರ್ಮಿಂಗ್‌ಹ್ಯಾಮ್‌: ಕಾಮನ್‌ವೆಲ್ತ್ ಗೇಮ್ಸ್‌ನ  CWG 2022 ಪುರುಷರರ ಟ್ರಿಪಲ್ ಜಂಪ್‌ನಲ್ಲಿ ಭಾತಕ್ಕೆ ಮೊದಲ ಬಾರಿಗೆ ಚಿನ್ನ ಲಭಿಸಿದೆ.  ಭಾರತದ ಎಲ್ಡೋಸ್ ಪೌಲ್ ದೇಶಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಅದೇ ಸಮಯದಲ್ಲಿ ಭಾರತದ ಅಥ್ಲೀಟ್ ಅಬ್ದುಲ್ಲಾ ಬೆಳ್ಳಿ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾದರು. ಭಾರತದ ಮತ್ತೊಬ್ಬ ಅಥ್ಲೀಟ್ ಪ್ರವೀಣ್ ಕಂಚಿನ ಪದಕದಿಂದ ವಂಚಿತರಾಗಿ ನಾಲ್ಕನೇ ಸ್ಥಾನದಲ್ಲಿದ್ದರು.

ಪೌಲ್ 17.03 ಮೀಟರ್ ಜಿಗಿತದೊಂದಿಗೆ ಮೊದಲ ಸ್ಥಾನವನ್ನು ಪಡೆದರು. ಅದೇ ಸಮಯದಲ್ಲಿ, ಭಾರತದ ಎರಡನೇ ಅಥ್ಲೀಟ್ ಅಬ್ದುಲ್ಲಾ ಅಬೂಬಕರ್ ಕೇವಲ .01 (17.02) ಅಂತರದಿಂದ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.

ಭಾರತ ಎರಡನೇ ಬಾರಿಗೆ ಬೆಳ್ಳಿ ಪದಕ ಗೆದ್ದಿದೆ. ಈ ಹಿಂದೆ ಮೊಹಿಂದರ್ ಸಿಂಗ್ ಗಿಲ್ 1970 ರಲ್ಲಿ ಕಂಚಿನ ಪದಕ ಗೆದ್ದರು. ಇದಾದ ನಂತರ ಮೊಹಿಂದರ್ ಸಿಂಗ್ ಗಿಲ್ 1974 ರಲ್ಲಿ ಬೆಳ್ಳಿ ಪದಕ ಪಡೆದರು. 2010 ರಲ್ಲಿ ರಂಜಿತ್ ಮಹೇಶ್ವರಿ ಮತ್ತು 2014 ರಲ್ಲಿ ಅರ್ಪಿಂದರ್ ಸಿಂಗ್ ಕಂಚಿನ ಪದಕವನ್ನು ಗೆದ್ದರು. ಇದೀಗ ಪಾಲ್ ಚಿನ್ನ ಹಾಗೂ ಅಬ್ದುಲ್ಲಾ ಬೆಳ್ಳಿ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

 

 

andolana

Recent Posts

ಜನವರಿಯಿಂದ ಇಂದಿರಾ ಕಿಟ್‌ ವಿತರಣೆ

ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್‍ಗಳನ್ನು ವಿತರಣೆ ಮಾಡಲಾಗುವುದು ಎಂದು…

4 mins ago

ಲ್ಯಾಂಡ್‌ ಲಾರ್ಡ್‌ ಚಿತ್ರದ ಟೀಸರ್‌ ರಿಲೀಸ್‌

ಬೆಂಗಳೂರು: ನಟ ದುನಿಯಾ ವಿಜಯ್‌ ಅಭಿನಯದ ಲ್ಯಾಂಡ್‌ ಲಾರ್ಡ್‌ ಚಿತ್ರದಲ್ಲಿ ನಟ ರಾಜ್‌ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…

17 mins ago

ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಬಗ್ಗೆ ಸಚಿವ ಮಧು ಬಂಗಾರಪ್ಪ ಹೇಳಿದ್ದಿಷ್ಟು.!

ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…

49 mins ago

ಮಂಡ್ಯಕ್ಕೆ ನನ್ನ ಕೊಡುಗೆ ಹೇಳುತ್ತೇನೆ, ನಿಮ್ಮ ಕೊಡುಗೆ ಪಟ್ಟಿ ಕೊಡಿ: ಸಿಎಂ ಸಿದ್ದುಗೆ ಎಚ್‌ಡಿಕೆ ಸವಾಲು

ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ…

1 hour ago

ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ: ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸಿ ಎಂದ ಸಿ.ಟಿ.ರವಿ

ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸುವಂತೆ ಎಂಎಲ್‌ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು…

2 hours ago

ಸ್ವಾತಂತ್ರ್ಯ ಚಳುವಳಿಗೆ ವಂದೇ ಮಾತರಂ ಶಕ್ತಿ ತುಂಬಿತು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…

3 hours ago