ಕ್ರೀಡೆ

ಟ್ರಿಪಲ್ ಜಂಪ್‌ನಲ್ಲಿ ಚಿನ್ನ, ಬೆಳ್ಳಿ ಪದಕ ಪಡೆದು ಇತಿಹಾಸ ನಿರ್ಮಿಸಿದ ಭಾರತ ಕ್ರೀಡಾಪಟುಗಳು

ಬರ್ಮಿಂಗ್‌ಹ್ಯಾಮ್‌: ಕಾಮನ್‌ವೆಲ್ತ್ ಗೇಮ್ಸ್‌ನ  CWG 2022 ಪುರುಷರರ ಟ್ರಿಪಲ್ ಜಂಪ್‌ನಲ್ಲಿ ಭಾತಕ್ಕೆ ಮೊದಲ ಬಾರಿಗೆ ಚಿನ್ನ ಲಭಿಸಿದೆ.  ಭಾರತದ ಎಲ್ಡೋಸ್ ಪೌಲ್ ದೇಶಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಅದೇ ಸಮಯದಲ್ಲಿ ಭಾರತದ ಅಥ್ಲೀಟ್ ಅಬ್ದುಲ್ಲಾ ಬೆಳ್ಳಿ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾದರು. ಭಾರತದ ಮತ್ತೊಬ್ಬ ಅಥ್ಲೀಟ್ ಪ್ರವೀಣ್ ಕಂಚಿನ ಪದಕದಿಂದ ವಂಚಿತರಾಗಿ ನಾಲ್ಕನೇ ಸ್ಥಾನದಲ್ಲಿದ್ದರು.

ಪೌಲ್ 17.03 ಮೀಟರ್ ಜಿಗಿತದೊಂದಿಗೆ ಮೊದಲ ಸ್ಥಾನವನ್ನು ಪಡೆದರು. ಅದೇ ಸಮಯದಲ್ಲಿ, ಭಾರತದ ಎರಡನೇ ಅಥ್ಲೀಟ್ ಅಬ್ದುಲ್ಲಾ ಅಬೂಬಕರ್ ಕೇವಲ .01 (17.02) ಅಂತರದಿಂದ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.

ಭಾರತ ಎರಡನೇ ಬಾರಿಗೆ ಬೆಳ್ಳಿ ಪದಕ ಗೆದ್ದಿದೆ. ಈ ಹಿಂದೆ ಮೊಹಿಂದರ್ ಸಿಂಗ್ ಗಿಲ್ 1970 ರಲ್ಲಿ ಕಂಚಿನ ಪದಕ ಗೆದ್ದರು. ಇದಾದ ನಂತರ ಮೊಹಿಂದರ್ ಸಿಂಗ್ ಗಿಲ್ 1974 ರಲ್ಲಿ ಬೆಳ್ಳಿ ಪದಕ ಪಡೆದರು. 2010 ರಲ್ಲಿ ರಂಜಿತ್ ಮಹೇಶ್ವರಿ ಮತ್ತು 2014 ರಲ್ಲಿ ಅರ್ಪಿಂದರ್ ಸಿಂಗ್ ಕಂಚಿನ ಪದಕವನ್ನು ಗೆದ್ದರು. ಇದೀಗ ಪಾಲ್ ಚಿನ್ನ ಹಾಗೂ ಅಬ್ದುಲ್ಲಾ ಬೆಳ್ಳಿ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

 

 

andolana

Recent Posts

ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಗೊಂದಲಗಳಿಲ್ಲ: ಸಚಿವ ಎಚ್.ಸಿ.ಮಹದೇವಪ್ಪ

ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ…

1 hour ago

ಬಾಗೇಪಲ್ಲಿ ಶಾಸಕ ಎಸ್.ಎನ್‌.ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್‌ ಆದೇಶ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಹೈಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರ ಚುನಾವಣಾ ಆಯ್ಕೆಯನ್ನು ಪ್ರಶ್ನಿಸಿ…

1 hour ago

ನಾಳೆ ವರ್ಷದ ಮೊದಲ ಕಂಕಣ ಸೂರ್ಯಗ್ರಹಣ: ಎಲ್ಲೆಲ್ಲಿ ಗೋಚರ?

ಬೆಂಗಳೂರು: ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ನಾಳೆ ಸಂಭವಿಸಲಿದೆ.. ಇದನ್ನ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ…

1 hour ago

ಶಬರಿಮಲೆ ವಿವಾದ: ವಿಚಾರಣೆಗೆ ಸಾಂವಿಧಾನಿಕ ಪೀಠ ರಚನೆ

ನವದೆಹಲಿ: ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಿಗೆ ಮಹಿಳೆಯರ ಪ್ರವೇಶದ ವಿರುದ್ಧ ಮತ್ತು ಧರ್ಮಗಳಲ್ಲಿ ಮಹಿಳೆಯರ ಮೇಲಿನ…

2 hours ago

ಗುಂಡ್ಲುಪೇಟೆ| ಕಾಡಿನಿಂದ‌ ದಾರಿ ತಪ್ಪಿ ಮನೆಗೆ ನುಗ್ಗಿದ ಜಿಂಕೆ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಿನಿಂದ ದಾರಿತಪ್ಪಿ ಬಂದು ಮನೆಗೆ ನುಗ್ಗಿದ್ದ ಜಿಂಕೆಯನ್ನು ರಕ್ಷಣೆ ಮಡುವಲ್ಲಿ ಅರಣ್ಯ…

3 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ಬಿಗ್‌ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…

4 hours ago