ಕ್ರೀಡೆ

ಟ್ರಿಪಲ್ ಜಂಪ್‌ನಲ್ಲಿ ಚಿನ್ನ, ಬೆಳ್ಳಿ ಪದಕ ಪಡೆದು ಇತಿಹಾಸ ನಿರ್ಮಿಸಿದ ಭಾರತ ಕ್ರೀಡಾಪಟುಗಳು

ಬರ್ಮಿಂಗ್‌ಹ್ಯಾಮ್‌: ಕಾಮನ್‌ವೆಲ್ತ್ ಗೇಮ್ಸ್‌ನ  CWG 2022 ಪುರುಷರರ ಟ್ರಿಪಲ್ ಜಂಪ್‌ನಲ್ಲಿ ಭಾತಕ್ಕೆ ಮೊದಲ ಬಾರಿಗೆ ಚಿನ್ನ ಲಭಿಸಿದೆ.  ಭಾರತದ ಎಲ್ಡೋಸ್ ಪೌಲ್ ದೇಶಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಅದೇ ಸಮಯದಲ್ಲಿ ಭಾರತದ ಅಥ್ಲೀಟ್ ಅಬ್ದುಲ್ಲಾ ಬೆಳ್ಳಿ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾದರು. ಭಾರತದ ಮತ್ತೊಬ್ಬ ಅಥ್ಲೀಟ್ ಪ್ರವೀಣ್ ಕಂಚಿನ ಪದಕದಿಂದ ವಂಚಿತರಾಗಿ ನಾಲ್ಕನೇ ಸ್ಥಾನದಲ್ಲಿದ್ದರು.

ಪೌಲ್ 17.03 ಮೀಟರ್ ಜಿಗಿತದೊಂದಿಗೆ ಮೊದಲ ಸ್ಥಾನವನ್ನು ಪಡೆದರು. ಅದೇ ಸಮಯದಲ್ಲಿ, ಭಾರತದ ಎರಡನೇ ಅಥ್ಲೀಟ್ ಅಬ್ದುಲ್ಲಾ ಅಬೂಬಕರ್ ಕೇವಲ .01 (17.02) ಅಂತರದಿಂದ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.

ಭಾರತ ಎರಡನೇ ಬಾರಿಗೆ ಬೆಳ್ಳಿ ಪದಕ ಗೆದ್ದಿದೆ. ಈ ಹಿಂದೆ ಮೊಹಿಂದರ್ ಸಿಂಗ್ ಗಿಲ್ 1970 ರಲ್ಲಿ ಕಂಚಿನ ಪದಕ ಗೆದ್ದರು. ಇದಾದ ನಂತರ ಮೊಹಿಂದರ್ ಸಿಂಗ್ ಗಿಲ್ 1974 ರಲ್ಲಿ ಬೆಳ್ಳಿ ಪದಕ ಪಡೆದರು. 2010 ರಲ್ಲಿ ರಂಜಿತ್ ಮಹೇಶ್ವರಿ ಮತ್ತು 2014 ರಲ್ಲಿ ಅರ್ಪಿಂದರ್ ಸಿಂಗ್ ಕಂಚಿನ ಪದಕವನ್ನು ಗೆದ್ದರು. ಇದೀಗ ಪಾಲ್ ಚಿನ್ನ ಹಾಗೂ ಅಬ್ದುಲ್ಲಾ ಬೆಳ್ಳಿ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

 

 

andolana

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

6 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

6 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

6 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

6 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

6 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

6 hours ago