ಕ್ರೀಡೆ

ಭಾರತದ ಬ್ಯಾಡ್ಮಿಂಟನ್‌ ತಾರೆ ಅಶ್ವಿನಿ ಪೊನ್ನಪ್ಪ ನಿವೃತ್ತಿ

ಪ್ಯಾರಿಸ್: ಪ್ಯಾರಿಸ್‌ ಕ್ರೀಡಾಕೂಟದಲ್ಲಿ 2024ರಲ್ಲಿ ನಿರಾಶದಾಯಕ ಫಲಿತಾಂಶಗಳ ನಂತರ ಐದು ಬಾರಿಯ ಕಾಮನ್‌ವೆಲ್ತ್‌ ಕ್ರೀಡಾಕೂಟದ ಪದಕ ವಿಜೇತೆ ಭಾರತದ ಬ್ಯಾಡ್ಮಿಂಟನ್‌ ತಾರೆ ಅಶ್ವಿನಿ ಪೊನ್ನಪ್ಪ ಅವರು ತಮ್ಮ ಒಲಿಂಪಿಕ್ಸ್‌ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಪ್ಯಾರಿಸ್‌ ಕ್ರೀಡಾಕೂಟದ ಮಹಿಳೆಯರ ಡಬಲ್ಸ್‌ನಲ್ಲಿ ಕನ್ನಡತಿ ಅಶ್ವಿನಿ ಪೊನ್ನಪ್ಪ ಮತ್ತು ತನಿಶಾ ಕ್ರಾಸ್ಟೋ ಸತತ ಮೂರನೇ ಬಾರಿಗೆ ಸೋಲನ್ನು ಎದುರಿಸಬೇಕಾಯಿತು. ನಿನ್ನೆ ನಡೆದ ಸಿ ಗುಂಪಿನ ಅಂತಿಮ ಪಂದ್ಯದಲ್ಲಿ ಅಶ್ವಿನಿ ಮತ್ತು ತನಿಖಾ 15-21, 10-21ರಲ್ಲಿ ಆಸ್ಟ್ರೇಲಿಯಾದ ಸೆಟಿಯಾನಾ ಮಪಾಸಾ ಮತ್ತು ಏಂಜೆಲಾಯು ವಿರುದ್ಧ ಸೋಲು ಅನುಭವಿಸಬೇಕಾಯಿತು.

ಮೂರನೇ ಒಲಿಂಪಿಕ್ಸ್‌ ಆಡುತ್ತಿರುವ 34 ವರ್ಷದ ಅಶ್ವಿನಿ 2028ರ ಲಾಸ್‌ ಏಂಜನೀಸ್‌ ಗೇಮ್ಸ್‌ನಲ್ಲಿ ಆಡಲು ಬಯಸುತ್ತೀರಾ ಎಂದು ಕೇಳಿದಾಗ ಇದು ನನ್ನ ಕೊನೆಯ ಒಲಿಂಪಿಕ್ಸ್‌ ಆಗಿರುತ್ತದೆ. ಆದರೆ ತನಿಖಾ ಇನ್ನೂ ಬಹಳ ದೂರ ಸಾಗಬೇಕಿದೆ ಎಂದು ಹೇಳಿದ್ದಾರೆ.

ಈ ಸೋಲು ಭಾವನಾತ್ಮಕ ಮತ್ತು ಮಾನಸಿಕವಾಗಿ ತುಂಬಾ ಪ್ರಭಾವ ಬೀರಿದೆ. ಇಂತಹ ಪರಿಸ್ಥಿತಿಯನ್ನು ಮತ್ತೆ ನಾನು ಎದುರಿಸಲಾರೆ ಎಂದು ಅಶ್ವಿನಿ ಪೊನ್ನಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹುಲಿ ದಾಳಿಗೆ ಅರಣ್ಯ ಸಿಬ್ಬಂದಿ ಬಲಿ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಅರಣ್ಯ ಇಲಾಖೆಯ ಮರಳಳ್ಳ ಕ್ಯಾಂಪ್ ಬಳಿ ಕರ್ತವ್ಯ ನಿರ್ವಹಿಸುತಿದ್ದ ಸಣ್ಣಹೈದ( ೫೫) ಹುಲಿ ದಾಳಿಗೆ…

1 min ago

ಕಾರವಾರದ ಕದಂಬ ನೌಕನೆಲೆಗೆ ರಾಷ್ಟ್ರಪತಿ ಭೇಟಿ ನಾಳೆ

ಬೆಂಗಳೂರು‌ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಏಷ್ಯಾದ ಅತಿದೊಡ್ಡ ನೌಕಾನೆಲೆ ಐಎನ್…

35 mins ago

ಲೋಕ್ ಅದಾಲತ್‌ನಲ್ಲಿ 14,850 ಪ್ರಕರಣ ಇತ್ಯರ್ಥ : ಒಂದಾದ ಕೌಟುಂಬಿಕ ಕಲಹದಿಂದ ಬೇರ್ಪಟ್ಟಿದ್ದ 6 ದಂಪತಿಗಳು

ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ನಡೆದ ಲೋಕ್ ಅದಾಲತ್‌ನಲ್ಲಿ ಒಟ್ಟು 14,850 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ,…

54 mins ago

ಜ.5ರಿಂದ ಉದ್ಯೋಗ ಖಾತ್ರಿ ಯೋಜನೆ ಬಚಾವ್‌ ಆಂದೋಲನ : ಸಿಎಂ

ಹೊಸದಿಲ್ಲಿ : ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ_ ಜಿ ರಾಮ್ _ ಜಿ ಎಂದು…

2 hours ago

ಇನ್ಮುಂದೆ ಭೀಮನ ಹತ್ತಿರ ಹೋಗಿ ವೀಡಿಯೋ, ಫೋಟೋ ತೆಗೆದರೆ ಬೀಳುತ್ತೆ ಕೇಸ್‌

ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದ ಗ್ರಾಮಗಳಿಗೆ ಕಾಡಾನೆ ಭೀಮು ಎಂಟ್ರಿ ಕೊಡುತ್ತಿದೆ. ಶಾಂತ ಸ್ವಭಾವದ ಭೀಮನನ್ನು ನೋಡಲು ಜನರು…

3 hours ago

ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು

ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್‌ ಕಾಲೋನಿ ಹಾಗೂ ವಸೀಮ್‌ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್‌…

3 hours ago