ಪ್ಯಾರಿಸ್: ಪ್ಯಾರಿಸ್ ಕ್ರೀಡಾಕೂಟದಲ್ಲಿ 2024ರಲ್ಲಿ ನಿರಾಶದಾಯಕ ಫಲಿತಾಂಶಗಳ ನಂತರ ಐದು ಬಾರಿಯ ಕಾಮನ್ವೆಲ್ತ್ ಕ್ರೀಡಾಕೂಟದ ಪದಕ ವಿಜೇತೆ ಭಾರತದ ಬ್ಯಾಡ್ಮಿಂಟನ್ ತಾರೆ ಅಶ್ವಿನಿ ಪೊನ್ನಪ್ಪ ಅವರು ತಮ್ಮ ಒಲಿಂಪಿಕ್ಸ್ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಪ್ಯಾರಿಸ್ ಕ್ರೀಡಾಕೂಟದ ಮಹಿಳೆಯರ ಡಬಲ್ಸ್ನಲ್ಲಿ ಕನ್ನಡತಿ ಅಶ್ವಿನಿ ಪೊನ್ನಪ್ಪ ಮತ್ತು ತನಿಶಾ ಕ್ರಾಸ್ಟೋ ಸತತ ಮೂರನೇ ಬಾರಿಗೆ ಸೋಲನ್ನು ಎದುರಿಸಬೇಕಾಯಿತು. ನಿನ್ನೆ ನಡೆದ ಸಿ ಗುಂಪಿನ ಅಂತಿಮ ಪಂದ್ಯದಲ್ಲಿ ಅಶ್ವಿನಿ ಮತ್ತು ತನಿಖಾ 15-21, 10-21ರಲ್ಲಿ ಆಸ್ಟ್ರೇಲಿಯಾದ ಸೆಟಿಯಾನಾ ಮಪಾಸಾ ಮತ್ತು ಏಂಜೆಲಾಯು ವಿರುದ್ಧ ಸೋಲು ಅನುಭವಿಸಬೇಕಾಯಿತು.
ಮೂರನೇ ಒಲಿಂಪಿಕ್ಸ್ ಆಡುತ್ತಿರುವ 34 ವರ್ಷದ ಅಶ್ವಿನಿ 2028ರ ಲಾಸ್ ಏಂಜನೀಸ್ ಗೇಮ್ಸ್ನಲ್ಲಿ ಆಡಲು ಬಯಸುತ್ತೀರಾ ಎಂದು ಕೇಳಿದಾಗ ಇದು ನನ್ನ ಕೊನೆಯ ಒಲಿಂಪಿಕ್ಸ್ ಆಗಿರುತ್ತದೆ. ಆದರೆ ತನಿಖಾ ಇನ್ನೂ ಬಹಳ ದೂರ ಸಾಗಬೇಕಿದೆ ಎಂದು ಹೇಳಿದ್ದಾರೆ.
ಈ ಸೋಲು ಭಾವನಾತ್ಮಕ ಮತ್ತು ಮಾನಸಿಕವಾಗಿ ತುಂಬಾ ಪ್ರಭಾವ ಬೀರಿದೆ. ಇಂತಹ ಪರಿಸ್ಥಿತಿಯನ್ನು ಮತ್ತೆ ನಾನು ಎದುರಿಸಲಾರೆ ಎಂದು ಅಶ್ವಿನಿ ಪೊನ್ನಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…