ಕ್ರೀಡೆ

ಭಾರತದ ಬ್ಯಾಡ್ಮಿಂಟನ್‌ ತಾರೆ ಅಶ್ವಿನಿ ಪೊನ್ನಪ್ಪ ನಿವೃತ್ತಿ

ಪ್ಯಾರಿಸ್: ಪ್ಯಾರಿಸ್‌ ಕ್ರೀಡಾಕೂಟದಲ್ಲಿ 2024ರಲ್ಲಿ ನಿರಾಶದಾಯಕ ಫಲಿತಾಂಶಗಳ ನಂತರ ಐದು ಬಾರಿಯ ಕಾಮನ್‌ವೆಲ್ತ್‌ ಕ್ರೀಡಾಕೂಟದ ಪದಕ ವಿಜೇತೆ ಭಾರತದ ಬ್ಯಾಡ್ಮಿಂಟನ್‌ ತಾರೆ ಅಶ್ವಿನಿ ಪೊನ್ನಪ್ಪ ಅವರು ತಮ್ಮ ಒಲಿಂಪಿಕ್ಸ್‌ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಪ್ಯಾರಿಸ್‌ ಕ್ರೀಡಾಕೂಟದ ಮಹಿಳೆಯರ ಡಬಲ್ಸ್‌ನಲ್ಲಿ ಕನ್ನಡತಿ ಅಶ್ವಿನಿ ಪೊನ್ನಪ್ಪ ಮತ್ತು ತನಿಶಾ ಕ್ರಾಸ್ಟೋ ಸತತ ಮೂರನೇ ಬಾರಿಗೆ ಸೋಲನ್ನು ಎದುರಿಸಬೇಕಾಯಿತು. ನಿನ್ನೆ ನಡೆದ ಸಿ ಗುಂಪಿನ ಅಂತಿಮ ಪಂದ್ಯದಲ್ಲಿ ಅಶ್ವಿನಿ ಮತ್ತು ತನಿಖಾ 15-21, 10-21ರಲ್ಲಿ ಆಸ್ಟ್ರೇಲಿಯಾದ ಸೆಟಿಯಾನಾ ಮಪಾಸಾ ಮತ್ತು ಏಂಜೆಲಾಯು ವಿರುದ್ಧ ಸೋಲು ಅನುಭವಿಸಬೇಕಾಯಿತು.

ಮೂರನೇ ಒಲಿಂಪಿಕ್ಸ್‌ ಆಡುತ್ತಿರುವ 34 ವರ್ಷದ ಅಶ್ವಿನಿ 2028ರ ಲಾಸ್‌ ಏಂಜನೀಸ್‌ ಗೇಮ್ಸ್‌ನಲ್ಲಿ ಆಡಲು ಬಯಸುತ್ತೀರಾ ಎಂದು ಕೇಳಿದಾಗ ಇದು ನನ್ನ ಕೊನೆಯ ಒಲಿಂಪಿಕ್ಸ್‌ ಆಗಿರುತ್ತದೆ. ಆದರೆ ತನಿಖಾ ಇನ್ನೂ ಬಹಳ ದೂರ ಸಾಗಬೇಕಿದೆ ಎಂದು ಹೇಳಿದ್ದಾರೆ.

ಈ ಸೋಲು ಭಾವನಾತ್ಮಕ ಮತ್ತು ಮಾನಸಿಕವಾಗಿ ತುಂಬಾ ಪ್ರಭಾವ ಬೀರಿದೆ. ಇಂತಹ ಪರಿಸ್ಥಿತಿಯನ್ನು ಮತ್ತೆ ನಾನು ಎದುರಿಸಲಾರೆ ಎಂದು ಅಶ್ವಿನಿ ಪೊನ್ನಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಸ್ತೆಗಳ ದಾರುಣತೆ: ಬೇಕಿದೆ ಇಲಾಖೆಗಳ ಸಮನ್ವಯತೆ

ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ,…

3 hours ago

ಕೊಡಗು ‘ಜಿಲ್ಲೆಯಲ್ಲಿ ಜಲ್‌ಜೀವನ್ ಮಿಷನ್ ಯೋಜನೆ ಪ್ರಗತಿ’

ಪುನೀತ್ ಮಡಿಕೇರಿ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣ ಮಡಿಕೇರಿ: ಕುಡಿಯುವ ನೀರಿನ ಗೃಹ ನಳ ನೀರು ಸಂಪರ್ಕ…

3 hours ago

ಪ್ರವಾಸಿಗರ ಆಕರ್ಷಣೆಗೆ ವರುಣ ಕೆರೆಗೆ ನವಸ್ಪರ್ಶ

ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ  ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ…

3 hours ago

ಮೈಸೂರು ಜಿಲ್ಲೆಯಲ್ಲಿ ಪಶು ಪಾಲನೆಗೆ ಪಶು ವೈದ್ಯರ ಬರ

ಹೆಚ್.ಎಸ್. ದಿನೇಶ್‌ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು…

3 hours ago

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

13 hours ago