ಕ್ರೀಡೆ

ಕಾಮನ್‌ವೆಲ್ತ್‌ : ಚಿನ್ನದ ಬೇಟೆಯಾಡಿದ ಭಾರತದ ಬಾಕ್ಸರ್ಸ್‌

ಬರ್ಮಿಂಗ್‌ಹ್ಯಾಮ್‌ : ಕಾಮನ್‌ವೆಲ್ತ್‌ ಗೇಮ್ಸ್‌ ಕ್ರೀಡಾಕೂಟದಲ್ಲಿ ಭಾರತದ ಬಾಕ್ಸರ್‌ಗಳು ಚಿನ್ನದ ಬೇಟೆಯಾಡಿದ್ದಾರೆ. ಮಹಿಳಾ ವಿಭಾಗದಲ್ಲಿ ನೀತೂ ಗಂಗಾ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದರೇ, ದೇಶದ ನಂ.1 ಬಾಕ್ಸಿಂಗ್ ಪಟು ಅಮಿತ್ ಪಂಘಾಲ್ ಚೊಚ್ಚಲ ಕಾಮನ್‌ವೆಲ್ತ್‌ ಗೇಮ್ಸ್‌ ಚಿನ್ನದ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಭಾರತದ ಪದಕದ ಬೇಟೆ ಭರ್ಜರಿಯಾಗಿಯೇ ಮುಂದುವರೆದಿದೆ.

21 ವರ್ಷದ ಹರ್ಯಾಣ ಮೂಲದ ಬಾಕ್ಸರ್ ನೀತೂ ಗಂಗಾ, ಮಹಿಳೆಯರ 48 ಕೆಜಿ ವಿಭಾಗದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಇಂಗ್ಲೆಂಡ್‌ನ ಡೇಮಿ ಜೇಡ್ ರೆಸ್ಡಾನ್ ಎದುರು 5-0 ಅಂತರದಲ್ಲಿ ಗೆಲುವು ದಾಖಲಿಸುವ ಮೂಲಕ ದೇಶದ ಕೀರ್ತಿ ಪತಾಕೆ ಹಾರಿಸಿದ್ದಾರೆ.

ಇನ್ನು ಪುರುಷರ 51 ಕೆಜಿ ವಿಭಾಗದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಅಮಿತ್ ಪಂಘಾಲ್ ಚಿನ್ನದ ಪದಕಕ್ಕೆ ಮುತ್ತಿಕ್ಕುವಲ್ಲಿ ಯಶಸ್ವಿಯಾಗಿದ್ದಾರೆ.  ಇದು ಅಮಿತ್ ಪಂಘಾಲ್ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಗೆದ್ದ ಮೊದಲ ಚಿನ್ನದ ಪದಕ ಎನಿಸಿಕೊಂಡಿದೆ. ಈ ಮೊದಲು ಅಮಿತ್ 2018ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಜಯಿಸಿದ್ದರು.

ಏಕಪಕ್ಷೀಯವಾಗಿ ನಡೆದ ಬಾಕ್ಸಿಂಗ್ ಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್ ಬಾಕ್ಸರ್‌ ಕೀರನ್ ಮೆಕ್‌ಡೊನಾಲ್ಡ್ ಎದುರು ಭರ್ಜರಿ ಗೆಲುವು ಸಾಧಿಸುವ ಮೂಲಕ ಚಿನ್ನದ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಈ ಬಾರಿಯ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪಾಲಾದ 15ನೇ ಚಿನ್ನದ ಪದಕ ಎನಿಸಿಕೊಂಡಿತು.

andolana

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

4 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

14 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

18 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

19 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

19 hours ago