ಕ್ರೀಡೆ

ಮೈದಾನಕ್ಕೇ ಇಳಿಯದೆ ಹೊರ ನಡೆದ ಕ್ರಿಕೆಟಿಗ

ಮಧ್ಯಪ್ರದೇಶದ ವೇಗದ ಬೌಲರ್ ಈಶ್ವರ್ ಪಾಂಡೆ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಕಳೆದ ಕೆಲ ವರ್ಷಗಳಿಂದ ದೇಶೀಯ ಅಂಗಳದಲ್ಲಿ ಮಿಂಚುತ್ತಿದ್ದ ಈಶ್ವರ್​ಗೆ ವರ್ಷಗಳ ಹಿಂದೆಯೇ  ಟೀಮ್ ಇಂಡಿಯಾದ ಬಾಗಿಲು ತೆರೆದಿತ್ತು. ಆದರೆ ಆ ಅದೃಷ್ಟ ಆ ಬಳಿಕ ದುರಾದೃಷ್ಟವಾಗಿದ್ದು ಮಾತ್ರ ವಿಪರ್ಯಾಸ. ಅಂದರೆ ಟೀಮ್ ಇಂಡಿಯಾ ಪರ ಆಯ್ಕೆಯಾಗಿದ್ದರೂ ಒಂದೇ ಒಂದು ಪಂದ್ಯವಾಡುವ ಅವಕಾಶ ಮಾತ್ರ ಸಿಕ್ಕಿರಲಿಲ್ಲ. ಇದೀಗ ತಮ್ಮ 33ನೇ ವಯಸ್ಸಿನಲ್ಲೇ ನಿವೃತ್ತಿಯ ನಿರ್ಧಾರ ತೆಗೆದುಕೊಂಡಿದ್ದಾರೆ.

ದೇಶೀಯ ಅಂಗಳದಲ್ಲಿ ಅತ್ಯುತ್ತಮ ಬಲಗೈ ವೇಗದ ಬೌಲರ್ ಆಗಿ ಕಾಣಿಸಿಕೊಂಡಿದ್ದ ಈಶ್ವರ್ ಪಾಂಡೆ, 75 ಪ್ರಥಮ ದರ್ಜೆ ಪಂದ್ಯಗಳಲ್ಲಿ 263 ವಿಕೆಟ್ ಗಳಿಸುವಲ್ಲಿ ಯಶಸ್ವಿಯಾಗಿದ್ದರು. ಹಾಗೆಯೇ ಲಿಸ್ಟ್ ಎ ನಲ್ಲಿ 63 ಮತ್ತು ಟಿ20 ಕ್ರಿಕೆಟ್‌ನಲ್ಲಿ 71 ವಿಕೆಟ್ ಪಡೆದು ಮಿಂಚಿದ್ದರು. ಪರಿಣಾಮ 2014 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಈಶ್ವರ್ ಪಾಂಡೆ ಆಯ್ಕೆಯಾಗಿದ್ದರು. ಆದರೆ ಕಿವೀಸ್ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗಳಲ್ಲಿ ಕಣಕ್ಕಿಳಿಯಲು ಮಾತ್ರ ಅವಕಾಶ ಸಿಕ್ಕಿರಲಿಲ್ಲ.

2013 ರಲ್ಲಿ ಪುಣೆ ವಾರಿಯರ್ಸ್​ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಐಪಿಎಲ್​ಗೆ ಪದಾರ್ಪಣೆ ಮಾಡಿದ್ದ ಈಶ್ವರ್ ಪಾಂಡೆ, 2015 ರಲ್ಲಿ ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಪರ ಆಡಿದ್ದರು. ಅದರಂತೆ ಐಪಿಎಲ್‌ನಲ್ಲಿ 25 ಪಂದ್ಯಗಳನ್ನು ಆಡಿರುವ ಈಶ್ವರ್ ಪಾಂಡೆ ಒಟ್ಟು 18 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ. ಆದರೆ 2016 ರ ಬಳಿಕ ಮಧ್ಯಮ ಪ್ರದೇಶದ ಈ ವೇಗಿಯನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದರೊಂದಿಗೆ ಐಪಿಎಲ್​ನಿಂದಲೂ ಪಾಂಡೆ ಹೆಸರು ಮರೆಯಾಯಿತು.

ಇದೀಗ ಮತ್ತೆ ಈಶ್ವರ್ ಪಾಂಡೆ ಹೆಸರು ಕೇಳಿ ಬಂದಿರುವುದು 33 ವಯಸ್ಸಿನಲ್ಲಿ ಕ್ರಿಕೆಟ್ ಬದುಕಿಗೆ ವಿದಾಯ ಹೇಳುವ ಮೂಲಕ ಎಂಬುದು ವಿಶೇಷ. ಅಂದರೆ ಟೀಮ್ ಇಂಡಿಯಾ ಪರ ಅವಕಾಶ ಪಡೆದರೂ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳುವ ಭಾಗ್ಯ ಸಿಗದಿರುವ ನೋವು ಕಾಡುತ್ತಿದೆ ಎಂದು ಈಶ್ವರ್ ಪಾಂಡೆ ತಿಳಿಸಿದ್ದಾರೆ.

andolana

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

9 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

9 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

10 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

11 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

12 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

13 hours ago