ಕ್ರೀಡೆ

ಮೈದಾನಕ್ಕೇ ಇಳಿಯದೆ ಹೊರ ನಡೆದ ಕ್ರಿಕೆಟಿಗ

ಮಧ್ಯಪ್ರದೇಶದ ವೇಗದ ಬೌಲರ್ ಈಶ್ವರ್ ಪಾಂಡೆ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಕಳೆದ ಕೆಲ ವರ್ಷಗಳಿಂದ ದೇಶೀಯ ಅಂಗಳದಲ್ಲಿ ಮಿಂಚುತ್ತಿದ್ದ ಈಶ್ವರ್​ಗೆ ವರ್ಷಗಳ ಹಿಂದೆಯೇ  ಟೀಮ್ ಇಂಡಿಯಾದ ಬಾಗಿಲು ತೆರೆದಿತ್ತು. ಆದರೆ ಆ ಅದೃಷ್ಟ ಆ ಬಳಿಕ ದುರಾದೃಷ್ಟವಾಗಿದ್ದು ಮಾತ್ರ ವಿಪರ್ಯಾಸ. ಅಂದರೆ ಟೀಮ್ ಇಂಡಿಯಾ ಪರ ಆಯ್ಕೆಯಾಗಿದ್ದರೂ ಒಂದೇ ಒಂದು ಪಂದ್ಯವಾಡುವ ಅವಕಾಶ ಮಾತ್ರ ಸಿಕ್ಕಿರಲಿಲ್ಲ. ಇದೀಗ ತಮ್ಮ 33ನೇ ವಯಸ್ಸಿನಲ್ಲೇ ನಿವೃತ್ತಿಯ ನಿರ್ಧಾರ ತೆಗೆದುಕೊಂಡಿದ್ದಾರೆ.

ದೇಶೀಯ ಅಂಗಳದಲ್ಲಿ ಅತ್ಯುತ್ತಮ ಬಲಗೈ ವೇಗದ ಬೌಲರ್ ಆಗಿ ಕಾಣಿಸಿಕೊಂಡಿದ್ದ ಈಶ್ವರ್ ಪಾಂಡೆ, 75 ಪ್ರಥಮ ದರ್ಜೆ ಪಂದ್ಯಗಳಲ್ಲಿ 263 ವಿಕೆಟ್ ಗಳಿಸುವಲ್ಲಿ ಯಶಸ್ವಿಯಾಗಿದ್ದರು. ಹಾಗೆಯೇ ಲಿಸ್ಟ್ ಎ ನಲ್ಲಿ 63 ಮತ್ತು ಟಿ20 ಕ್ರಿಕೆಟ್‌ನಲ್ಲಿ 71 ವಿಕೆಟ್ ಪಡೆದು ಮಿಂಚಿದ್ದರು. ಪರಿಣಾಮ 2014 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಈಶ್ವರ್ ಪಾಂಡೆ ಆಯ್ಕೆಯಾಗಿದ್ದರು. ಆದರೆ ಕಿವೀಸ್ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗಳಲ್ಲಿ ಕಣಕ್ಕಿಳಿಯಲು ಮಾತ್ರ ಅವಕಾಶ ಸಿಕ್ಕಿರಲಿಲ್ಲ.

2013 ರಲ್ಲಿ ಪುಣೆ ವಾರಿಯರ್ಸ್​ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಐಪಿಎಲ್​ಗೆ ಪದಾರ್ಪಣೆ ಮಾಡಿದ್ದ ಈಶ್ವರ್ ಪಾಂಡೆ, 2015 ರಲ್ಲಿ ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಪರ ಆಡಿದ್ದರು. ಅದರಂತೆ ಐಪಿಎಲ್‌ನಲ್ಲಿ 25 ಪಂದ್ಯಗಳನ್ನು ಆಡಿರುವ ಈಶ್ವರ್ ಪಾಂಡೆ ಒಟ್ಟು 18 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ. ಆದರೆ 2016 ರ ಬಳಿಕ ಮಧ್ಯಮ ಪ್ರದೇಶದ ಈ ವೇಗಿಯನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದರೊಂದಿಗೆ ಐಪಿಎಲ್​ನಿಂದಲೂ ಪಾಂಡೆ ಹೆಸರು ಮರೆಯಾಯಿತು.

ಇದೀಗ ಮತ್ತೆ ಈಶ್ವರ್ ಪಾಂಡೆ ಹೆಸರು ಕೇಳಿ ಬಂದಿರುವುದು 33 ವಯಸ್ಸಿನಲ್ಲಿ ಕ್ರಿಕೆಟ್ ಬದುಕಿಗೆ ವಿದಾಯ ಹೇಳುವ ಮೂಲಕ ಎಂಬುದು ವಿಶೇಷ. ಅಂದರೆ ಟೀಮ್ ಇಂಡಿಯಾ ಪರ ಅವಕಾಶ ಪಡೆದರೂ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳುವ ಭಾಗ್ಯ ಸಿಗದಿರುವ ನೋವು ಕಾಡುತ್ತಿದೆ ಎಂದು ಈಶ್ವರ್ ಪಾಂಡೆ ತಿಳಿಸಿದ್ದಾರೆ.

andolana

Recent Posts

2 ತಿಂಗಳಿಂದ ಆಡಳಿತಾಧಿಕಾರಿಯಿಲ್ಲದೆ ಜನರ ಅಲೆದಾಟ

ಮಂಜು ಕೋಟೆ ಕೋಟೆ ಪುರಸಭೆಯಲ್ಲಿ ಇ-ಸ್ವತ್ತು ಸಿಗದೆ ಸಮಸ್ಯೆ; ವಾರ್ಡುಗಳಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಹೈರಾಣಾದ ಜನತೆ ಎಚ್.ಡಿ.ಕೋಟೆ: ಪುರಸಭೆಯಲ್ಲಿ…

2 mins ago

ಜಿಪಂ, ತಾಪಂ ಕ್ಷೇತ್ರಗಳ ಮೀಸಲಾತಿಯತ್ತ ಆಕಾಂಕ್ಷಿಗಳ ಚಿತ್ತ

ಕೆ.ಬಿ.ರಮೇಶನಾಯಕ ಮೈಸೂರು: ಜನಪ್ರತಿನಿಧಿಗಳಿಲ್ಲದೆ ಆಡಳಿತಾಧಿಕಾರಿಗಳ ಅಧಿಕಾರದಲ್ಲೇ ಮುಂದಿನ ಏಪ್ರಿಲ್ ತಿಂಗಳಲ್ಲಿ ಐದು ವರ್ಷಗಳನ್ನು ಪೂರೈಸುತ್ತಿರುವ ಜಿಲ್ಲಾ, ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ…

8 mins ago

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

11 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

11 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

11 hours ago