ಕ್ರೀಡೆ

ಮೈದಾನಕ್ಕೇ ಇಳಿಯದೆ ಹೊರ ನಡೆದ ಕ್ರಿಕೆಟಿಗ

ಮಧ್ಯಪ್ರದೇಶದ ವೇಗದ ಬೌಲರ್ ಈಶ್ವರ್ ಪಾಂಡೆ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಕಳೆದ ಕೆಲ ವರ್ಷಗಳಿಂದ ದೇಶೀಯ ಅಂಗಳದಲ್ಲಿ ಮಿಂಚುತ್ತಿದ್ದ ಈಶ್ವರ್​ಗೆ ವರ್ಷಗಳ ಹಿಂದೆಯೇ  ಟೀಮ್ ಇಂಡಿಯಾದ ಬಾಗಿಲು ತೆರೆದಿತ್ತು. ಆದರೆ ಆ ಅದೃಷ್ಟ ಆ ಬಳಿಕ ದುರಾದೃಷ್ಟವಾಗಿದ್ದು ಮಾತ್ರ ವಿಪರ್ಯಾಸ. ಅಂದರೆ ಟೀಮ್ ಇಂಡಿಯಾ ಪರ ಆಯ್ಕೆಯಾಗಿದ್ದರೂ ಒಂದೇ ಒಂದು ಪಂದ್ಯವಾಡುವ ಅವಕಾಶ ಮಾತ್ರ ಸಿಕ್ಕಿರಲಿಲ್ಲ. ಇದೀಗ ತಮ್ಮ 33ನೇ ವಯಸ್ಸಿನಲ್ಲೇ ನಿವೃತ್ತಿಯ ನಿರ್ಧಾರ ತೆಗೆದುಕೊಂಡಿದ್ದಾರೆ.

ದೇಶೀಯ ಅಂಗಳದಲ್ಲಿ ಅತ್ಯುತ್ತಮ ಬಲಗೈ ವೇಗದ ಬೌಲರ್ ಆಗಿ ಕಾಣಿಸಿಕೊಂಡಿದ್ದ ಈಶ್ವರ್ ಪಾಂಡೆ, 75 ಪ್ರಥಮ ದರ್ಜೆ ಪಂದ್ಯಗಳಲ್ಲಿ 263 ವಿಕೆಟ್ ಗಳಿಸುವಲ್ಲಿ ಯಶಸ್ವಿಯಾಗಿದ್ದರು. ಹಾಗೆಯೇ ಲಿಸ್ಟ್ ಎ ನಲ್ಲಿ 63 ಮತ್ತು ಟಿ20 ಕ್ರಿಕೆಟ್‌ನಲ್ಲಿ 71 ವಿಕೆಟ್ ಪಡೆದು ಮಿಂಚಿದ್ದರು. ಪರಿಣಾಮ 2014 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಈಶ್ವರ್ ಪಾಂಡೆ ಆಯ್ಕೆಯಾಗಿದ್ದರು. ಆದರೆ ಕಿವೀಸ್ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗಳಲ್ಲಿ ಕಣಕ್ಕಿಳಿಯಲು ಮಾತ್ರ ಅವಕಾಶ ಸಿಕ್ಕಿರಲಿಲ್ಲ.

2013 ರಲ್ಲಿ ಪುಣೆ ವಾರಿಯರ್ಸ್​ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಐಪಿಎಲ್​ಗೆ ಪದಾರ್ಪಣೆ ಮಾಡಿದ್ದ ಈಶ್ವರ್ ಪಾಂಡೆ, 2015 ರಲ್ಲಿ ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಪರ ಆಡಿದ್ದರು. ಅದರಂತೆ ಐಪಿಎಲ್‌ನಲ್ಲಿ 25 ಪಂದ್ಯಗಳನ್ನು ಆಡಿರುವ ಈಶ್ವರ್ ಪಾಂಡೆ ಒಟ್ಟು 18 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ. ಆದರೆ 2016 ರ ಬಳಿಕ ಮಧ್ಯಮ ಪ್ರದೇಶದ ಈ ವೇಗಿಯನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದರೊಂದಿಗೆ ಐಪಿಎಲ್​ನಿಂದಲೂ ಪಾಂಡೆ ಹೆಸರು ಮರೆಯಾಯಿತು.

ಇದೀಗ ಮತ್ತೆ ಈಶ್ವರ್ ಪಾಂಡೆ ಹೆಸರು ಕೇಳಿ ಬಂದಿರುವುದು 33 ವಯಸ್ಸಿನಲ್ಲಿ ಕ್ರಿಕೆಟ್ ಬದುಕಿಗೆ ವಿದಾಯ ಹೇಳುವ ಮೂಲಕ ಎಂಬುದು ವಿಶೇಷ. ಅಂದರೆ ಟೀಮ್ ಇಂಡಿಯಾ ಪರ ಅವಕಾಶ ಪಡೆದರೂ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳುವ ಭಾಗ್ಯ ಸಿಗದಿರುವ ನೋವು ಕಾಡುತ್ತಿದೆ ಎಂದು ಈಶ್ವರ್ ಪಾಂಡೆ ತಿಳಿಸಿದ್ದಾರೆ.

andolana

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

3 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

8 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

12 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

12 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

12 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

15 hours ago