ಮಧ್ಯಪ್ರದೇಶದ ವೇಗದ ಬೌಲರ್ ಈಶ್ವರ್ ಪಾಂಡೆ ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಕಳೆದ ಕೆಲ ವರ್ಷಗಳಿಂದ ದೇಶೀಯ ಅಂಗಳದಲ್ಲಿ ಮಿಂಚುತ್ತಿದ್ದ ಈಶ್ವರ್ಗೆ ವರ್ಷಗಳ ಹಿಂದೆಯೇ ಟೀಮ್ ಇಂಡಿಯಾದ ಬಾಗಿಲು ತೆರೆದಿತ್ತು. ಆದರೆ ಆ ಅದೃಷ್ಟ ಆ ಬಳಿಕ ದುರಾದೃಷ್ಟವಾಗಿದ್ದು ಮಾತ್ರ ವಿಪರ್ಯಾಸ. ಅಂದರೆ ಟೀಮ್ ಇಂಡಿಯಾ ಪರ ಆಯ್ಕೆಯಾಗಿದ್ದರೂ ಒಂದೇ ಒಂದು ಪಂದ್ಯವಾಡುವ ಅವಕಾಶ ಮಾತ್ರ ಸಿಕ್ಕಿರಲಿಲ್ಲ. ಇದೀಗ ತಮ್ಮ 33ನೇ ವಯಸ್ಸಿನಲ್ಲೇ ನಿವೃತ್ತಿಯ ನಿರ್ಧಾರ ತೆಗೆದುಕೊಂಡಿದ್ದಾರೆ.
ದೇಶೀಯ ಅಂಗಳದಲ್ಲಿ ಅತ್ಯುತ್ತಮ ಬಲಗೈ ವೇಗದ ಬೌಲರ್ ಆಗಿ ಕಾಣಿಸಿಕೊಂಡಿದ್ದ ಈಶ್ವರ್ ಪಾಂಡೆ, 75 ಪ್ರಥಮ ದರ್ಜೆ ಪಂದ್ಯಗಳಲ್ಲಿ 263 ವಿಕೆಟ್ ಗಳಿಸುವಲ್ಲಿ ಯಶಸ್ವಿಯಾಗಿದ್ದರು. ಹಾಗೆಯೇ ಲಿಸ್ಟ್ ಎ ನಲ್ಲಿ 63 ಮತ್ತು ಟಿ20 ಕ್ರಿಕೆಟ್ನಲ್ಲಿ 71 ವಿಕೆಟ್ ಪಡೆದು ಮಿಂಚಿದ್ದರು. ಪರಿಣಾಮ 2014 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಈಶ್ವರ್ ಪಾಂಡೆ ಆಯ್ಕೆಯಾಗಿದ್ದರು. ಆದರೆ ಕಿವೀಸ್ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗಳಲ್ಲಿ ಕಣಕ್ಕಿಳಿಯಲು ಮಾತ್ರ ಅವಕಾಶ ಸಿಕ್ಕಿರಲಿಲ್ಲ.
2013 ರಲ್ಲಿ ಪುಣೆ ವಾರಿಯರ್ಸ್ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಐಪಿಎಲ್ಗೆ ಪದಾರ್ಪಣೆ ಮಾಡಿದ್ದ ಈಶ್ವರ್ ಪಾಂಡೆ, 2015 ರಲ್ಲಿ ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದರು. ಅದರಂತೆ ಐಪಿಎಲ್ನಲ್ಲಿ 25 ಪಂದ್ಯಗಳನ್ನು ಆಡಿರುವ ಈಶ್ವರ್ ಪಾಂಡೆ ಒಟ್ಟು 18 ವಿಕೆಟ್ಗಳನ್ನು ಕೂಡ ಕಬಳಿಸಿದ್ದಾರೆ. ಆದರೆ 2016 ರ ಬಳಿಕ ಮಧ್ಯಮ ಪ್ರದೇಶದ ಈ ವೇಗಿಯನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದರೊಂದಿಗೆ ಐಪಿಎಲ್ನಿಂದಲೂ ಪಾಂಡೆ ಹೆಸರು ಮರೆಯಾಯಿತು.
ಇದೀಗ ಮತ್ತೆ ಈಶ್ವರ್ ಪಾಂಡೆ ಹೆಸರು ಕೇಳಿ ಬಂದಿರುವುದು 33 ವಯಸ್ಸಿನಲ್ಲಿ ಕ್ರಿಕೆಟ್ ಬದುಕಿಗೆ ವಿದಾಯ ಹೇಳುವ ಮೂಲಕ ಎಂಬುದು ವಿಶೇಷ. ಅಂದರೆ ಟೀಮ್ ಇಂಡಿಯಾ ಪರ ಅವಕಾಶ ಪಡೆದರೂ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಳ್ಳುವ ಭಾಗ್ಯ ಸಿಗದಿರುವ ನೋವು ಕಾಡುತ್ತಿದೆ ಎಂದು ಈಶ್ವರ್ ಪಾಂಡೆ ತಿಳಿಸಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…