ಕ್ರೀಡೆ

ಮೈದಾನಕ್ಕೇ ಇಳಿಯದೆ ಹೊರ ನಡೆದ ಕ್ರಿಕೆಟಿಗ

ಮಧ್ಯಪ್ರದೇಶದ ವೇಗದ ಬೌಲರ್ ಈಶ್ವರ್ ಪಾಂಡೆ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಕಳೆದ ಕೆಲ ವರ್ಷಗಳಿಂದ ದೇಶೀಯ ಅಂಗಳದಲ್ಲಿ ಮಿಂಚುತ್ತಿದ್ದ ಈಶ್ವರ್​ಗೆ ವರ್ಷಗಳ ಹಿಂದೆಯೇ  ಟೀಮ್ ಇಂಡಿಯಾದ ಬಾಗಿಲು ತೆರೆದಿತ್ತು. ಆದರೆ ಆ ಅದೃಷ್ಟ ಆ ಬಳಿಕ ದುರಾದೃಷ್ಟವಾಗಿದ್ದು ಮಾತ್ರ ವಿಪರ್ಯಾಸ. ಅಂದರೆ ಟೀಮ್ ಇಂಡಿಯಾ ಪರ ಆಯ್ಕೆಯಾಗಿದ್ದರೂ ಒಂದೇ ಒಂದು ಪಂದ್ಯವಾಡುವ ಅವಕಾಶ ಮಾತ್ರ ಸಿಕ್ಕಿರಲಿಲ್ಲ. ಇದೀಗ ತಮ್ಮ 33ನೇ ವಯಸ್ಸಿನಲ್ಲೇ ನಿವೃತ್ತಿಯ ನಿರ್ಧಾರ ತೆಗೆದುಕೊಂಡಿದ್ದಾರೆ.

ದೇಶೀಯ ಅಂಗಳದಲ್ಲಿ ಅತ್ಯುತ್ತಮ ಬಲಗೈ ವೇಗದ ಬೌಲರ್ ಆಗಿ ಕಾಣಿಸಿಕೊಂಡಿದ್ದ ಈಶ್ವರ್ ಪಾಂಡೆ, 75 ಪ್ರಥಮ ದರ್ಜೆ ಪಂದ್ಯಗಳಲ್ಲಿ 263 ವಿಕೆಟ್ ಗಳಿಸುವಲ್ಲಿ ಯಶಸ್ವಿಯಾಗಿದ್ದರು. ಹಾಗೆಯೇ ಲಿಸ್ಟ್ ಎ ನಲ್ಲಿ 63 ಮತ್ತು ಟಿ20 ಕ್ರಿಕೆಟ್‌ನಲ್ಲಿ 71 ವಿಕೆಟ್ ಪಡೆದು ಮಿಂಚಿದ್ದರು. ಪರಿಣಾಮ 2014 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಈಶ್ವರ್ ಪಾಂಡೆ ಆಯ್ಕೆಯಾಗಿದ್ದರು. ಆದರೆ ಕಿವೀಸ್ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗಳಲ್ಲಿ ಕಣಕ್ಕಿಳಿಯಲು ಮಾತ್ರ ಅವಕಾಶ ಸಿಕ್ಕಿರಲಿಲ್ಲ.

2013 ರಲ್ಲಿ ಪುಣೆ ವಾರಿಯರ್ಸ್​ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಐಪಿಎಲ್​ಗೆ ಪದಾರ್ಪಣೆ ಮಾಡಿದ್ದ ಈಶ್ವರ್ ಪಾಂಡೆ, 2015 ರಲ್ಲಿ ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಪರ ಆಡಿದ್ದರು. ಅದರಂತೆ ಐಪಿಎಲ್‌ನಲ್ಲಿ 25 ಪಂದ್ಯಗಳನ್ನು ಆಡಿರುವ ಈಶ್ವರ್ ಪಾಂಡೆ ಒಟ್ಟು 18 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ. ಆದರೆ 2016 ರ ಬಳಿಕ ಮಧ್ಯಮ ಪ್ರದೇಶದ ಈ ವೇಗಿಯನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದರೊಂದಿಗೆ ಐಪಿಎಲ್​ನಿಂದಲೂ ಪಾಂಡೆ ಹೆಸರು ಮರೆಯಾಯಿತು.

ಇದೀಗ ಮತ್ತೆ ಈಶ್ವರ್ ಪಾಂಡೆ ಹೆಸರು ಕೇಳಿ ಬಂದಿರುವುದು 33 ವಯಸ್ಸಿನಲ್ಲಿ ಕ್ರಿಕೆಟ್ ಬದುಕಿಗೆ ವಿದಾಯ ಹೇಳುವ ಮೂಲಕ ಎಂಬುದು ವಿಶೇಷ. ಅಂದರೆ ಟೀಮ್ ಇಂಡಿಯಾ ಪರ ಅವಕಾಶ ಪಡೆದರೂ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳುವ ಭಾಗ್ಯ ಸಿಗದಿರುವ ನೋವು ಕಾಡುತ್ತಿದೆ ಎಂದು ಈಶ್ವರ್ ಪಾಂಡೆ ತಿಳಿಸಿದ್ದಾರೆ.

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

7 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

7 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

8 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

10 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

13 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

13 hours ago