ನವದೆಹಲಿ: ವೆಸ್ಟ್ ಇಂಡೀಸ್ ಹಾಗೂ ಅಮೇರಿಕಾ ಆತಿಥ್ಯದಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿ ಮುಕ್ತಾಯಗೊಂಡಿದ್ದು, ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಭಾರತ ತಂಡ ಟ್ರೋಫಿ ಎತ್ತಿ ಹಿಡಿದಿದೆ.
ಟೂರ್ನಿ ಮುಗಿದ ಬೆನ್ನಲ್ಲೇ ಐಸಿಸಿ ಟಿ20 ವಿಶ್ವಕಪ್ 2024ರ ಡ್ರೀಮ್ ಟೀಂ ಪ್ರಕಟಗೊಳಿಸಿದೆ. ಈ ತಂಡದಲ್ಲಿ ಟೀಂ ಇಂಡಿಯಾದ ಆರು ಮಂದಿ ಆಟಗಾರರು ಸ್ಥಾನ ಪಡೆದಿದ್ದಾರೆ.
ಅಚ್ಚರಿಯಂಬಂತೆ ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಗೆ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ. ಇದು ವಿರಾಟ್ ಕೊಹ್ಲಿ ಫ್ಯಾನ್ಸ್ಗೆ ಬೇಸರ ಉಂಟುಮಾಡಿದೆ.
ಇನ್ನು ಈ ಡ್ರೀಮ್ ಟೀಂ ನಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಅರ್ಷ್ದೀಪ್ ಸಿಂಗ್ ಮತ್ತು ವೇಗಿ ಬುಮ್ರಾ ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ.
ಇತ್ತ ಈ ಟೂರ್ನಿಯುದ್ದಕ್ಕೂ ಅಚ್ಚರಿಯ ಅಟವಾಡಿದ ರೆಹಮಾನುಲ್ಲಾ ಗುರ್ಬಾಜ್, ಅಫ್ಘನ್ ನಾಯಕ ರಶೀದ್ ಖಾನ್ ಹಾಗೂ ಫಜಲ್ ಫರೂಕಿ ಸ್ಥಾನ ಪಡೆದಿದ್ದಾರೆ. ಉಳಿದಂತೆ ಆಸೀಸ್ ತಂಡದಿಂದ ಸ್ಟೋಯ್ನಿಸ್, ವೆಸ್ಟ್ ಇಂಡೀಸ್ ತಂಡದಿಂದ ನಿಕೊಲಸ್ ಪೂರನ್ ಸ್ಥಾನ ಪಡೆದಿದ್ದಾರೆ. 12 ಆಟಗಾರನಾಗಿ ಎನ್ರಿಚ್ ನೋಕಿಯೋ ಕಾಣಿಸಿಕೊಂಡಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ…
ಶಿವಪುರ, ನಾಚನಹಳ್ಳಿಪಾಳ್ಯ, ರೈಲ್ವೆ ವರ್ಕ್ಶಾಪ್ ನಿಲುಗಡೆ ತಾಣದಲ್ಲಿ ನಿಲ್ಲದ ಬಸ್ಗಳು ಕೈ ಸಂಜ್ಞೆಗೂ ಕ್ಯಾರೇ ಎನ್ನದ ಡ್ರೈವರ್ಗಳು; ಮಹಿಳೆಯರು, ವಯೋವೃದ್ಧರು,…
ಕಷ್ಟ-ಸುಖಗಳಿಗೆ ಸ್ಪಂದಿಸುವ ಮನಃಸ್ಥಿತಿ ಕಳೆದುಕೊಂಡ ಜನತೆ ಕೈಯಲ್ಲಿ ಹಿಡಿದಿದ್ದ ದಿನ ಪತ್ರಿಕೆಯ ಮೇಲೆ ಕಣ್ಣು ನೆಟ್ಟಿದ್ದ ಚಿದಾನಂದ ಇದ್ದಕ್ಕಿದ್ದಂತೆ 'ಥೋ'…
ಕಳೆದ ಗುರುವಾರ ಆರಂಭವಾದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಯಥಾವತ್ತು ಓದುವುದಕ್ಕೆ ರಾಜ್ಯಪಾಲರು ನಿರಾಕರಿಸಿದ್ದಲ್ಲದೆ, ತಾವೇ…
ಜಾಗೃತಿ ಕಾರ್ಯಕ್ರಮಗಳು ಮತ್ತಷ್ಟು ಪರಿಣಾಮಕಾರಿ ಆಗಲಿ ಡಾ.ಡಿ.ಜೆ.ಶಶಿಕುಮಾರ್ ದೇಶದ ಐಕ್ಯತೆ, ಭದ್ರತೆ ಮತ್ತು ಪ್ರಗತಿಗೆ ಕಾರಣವಾಗಿರುವ ಭಾರತದ ಸಂವಿಧಾನ ರಚನೆಯಾಗಿ…
ಹೊಸದಿಲ್ಲಿ : ಇಲ್ಲಿನ ಕೆಂಪುಕೋಟೆಯಲ್ಲಿ ಇಂದು ನಡೆಯುವ ಗಣರಾಜ್ಯೋತ್ಸವಕ್ಕೆ ಸಂತೇಮರಹಳ್ಳಿ ಹೋಬಳಿ ವ್ಯಾಪ್ತಿಯ ಇಬ್ಬರು ಮಹಿಳೆಯರು ವಿಶೇಷ ಆಹ್ವಾನಿತರಾಗಿ ಆಯ್ಕೆಯಾಗಿದ್ದಾರೆ.…