ನವದೆಹಲಿ: ವೆಸ್ಟ್ ಇಂಡೀಸ್ ಹಾಗೂ ಅಮೇರಿಕಾ ಆತಿಥ್ಯದಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿ ಮುಕ್ತಾಯಗೊಂಡಿದ್ದು, ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಭಾರತ ತಂಡ ಟ್ರೋಫಿ ಎತ್ತಿ ಹಿಡಿದಿದೆ.
ಟೂರ್ನಿ ಮುಗಿದ ಬೆನ್ನಲ್ಲೇ ಐಸಿಸಿ ಟಿ20 ವಿಶ್ವಕಪ್ 2024ರ ಡ್ರೀಮ್ ಟೀಂ ಪ್ರಕಟಗೊಳಿಸಿದೆ. ಈ ತಂಡದಲ್ಲಿ ಟೀಂ ಇಂಡಿಯಾದ ಆರು ಮಂದಿ ಆಟಗಾರರು ಸ್ಥಾನ ಪಡೆದಿದ್ದಾರೆ.
ಅಚ್ಚರಿಯಂಬಂತೆ ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಗೆ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ. ಇದು ವಿರಾಟ್ ಕೊಹ್ಲಿ ಫ್ಯಾನ್ಸ್ಗೆ ಬೇಸರ ಉಂಟುಮಾಡಿದೆ.
ಇನ್ನು ಈ ಡ್ರೀಮ್ ಟೀಂ ನಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಅರ್ಷ್ದೀಪ್ ಸಿಂಗ್ ಮತ್ತು ವೇಗಿ ಬುಮ್ರಾ ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ.
ಇತ್ತ ಈ ಟೂರ್ನಿಯುದ್ದಕ್ಕೂ ಅಚ್ಚರಿಯ ಅಟವಾಡಿದ ರೆಹಮಾನುಲ್ಲಾ ಗುರ್ಬಾಜ್, ಅಫ್ಘನ್ ನಾಯಕ ರಶೀದ್ ಖಾನ್ ಹಾಗೂ ಫಜಲ್ ಫರೂಕಿ ಸ್ಥಾನ ಪಡೆದಿದ್ದಾರೆ. ಉಳಿದಂತೆ ಆಸೀಸ್ ತಂಡದಿಂದ ಸ್ಟೋಯ್ನಿಸ್, ವೆಸ್ಟ್ ಇಂಡೀಸ್ ತಂಡದಿಂದ ನಿಕೊಲಸ್ ಪೂರನ್ ಸ್ಥಾನ ಪಡೆದಿದ್ದಾರೆ. 12 ಆಟಗಾರನಾಗಿ ಎನ್ರಿಚ್ ನೋಕಿಯೋ ಕಾಣಿಸಿಕೊಂಡಿದ್ದಾರೆ.
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…
ಗೋವಾ: ಇಲ್ಲಿನ ನೈಟ್ ಕ್ಲಬ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್…
ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…
ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…
ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…