ನವದೆಹಲಿ: ವೆಸ್ಟ್ ಇಂಡೀಸ್ ಹಾಗೂ ಅಮೇರಿಕಾ ಆತಿಥ್ಯದಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿ ಮುಕ್ತಾಯಗೊಂಡಿದ್ದು, ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಭಾರತ ತಂಡ ಟ್ರೋಫಿ ಎತ್ತಿ ಹಿಡಿದಿದೆ.
ಟೂರ್ನಿ ಮುಗಿದ ಬೆನ್ನಲ್ಲೇ ಐಸಿಸಿ ಟಿ20 ವಿಶ್ವಕಪ್ 2024ರ ಡ್ರೀಮ್ ಟೀಂ ಪ್ರಕಟಗೊಳಿಸಿದೆ. ಈ ತಂಡದಲ್ಲಿ ಟೀಂ ಇಂಡಿಯಾದ ಆರು ಮಂದಿ ಆಟಗಾರರು ಸ್ಥಾನ ಪಡೆದಿದ್ದಾರೆ.
ಅಚ್ಚರಿಯಂಬಂತೆ ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಗೆ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ. ಇದು ವಿರಾಟ್ ಕೊಹ್ಲಿ ಫ್ಯಾನ್ಸ್ಗೆ ಬೇಸರ ಉಂಟುಮಾಡಿದೆ.
ಇನ್ನು ಈ ಡ್ರೀಮ್ ಟೀಂ ನಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಅರ್ಷ್ದೀಪ್ ಸಿಂಗ್ ಮತ್ತು ವೇಗಿ ಬುಮ್ರಾ ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ.
ಇತ್ತ ಈ ಟೂರ್ನಿಯುದ್ದಕ್ಕೂ ಅಚ್ಚರಿಯ ಅಟವಾಡಿದ ರೆಹಮಾನುಲ್ಲಾ ಗುರ್ಬಾಜ್, ಅಫ್ಘನ್ ನಾಯಕ ರಶೀದ್ ಖಾನ್ ಹಾಗೂ ಫಜಲ್ ಫರೂಕಿ ಸ್ಥಾನ ಪಡೆದಿದ್ದಾರೆ. ಉಳಿದಂತೆ ಆಸೀಸ್ ತಂಡದಿಂದ ಸ್ಟೋಯ್ನಿಸ್, ವೆಸ್ಟ್ ಇಂಡೀಸ್ ತಂಡದಿಂದ ನಿಕೊಲಸ್ ಪೂರನ್ ಸ್ಥಾನ ಪಡೆದಿದ್ದಾರೆ. 12 ಆಟಗಾರನಾಗಿ ಎನ್ರಿಚ್ ನೋಕಿಯೋ ಕಾಣಿಸಿಕೊಂಡಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…