ಟೀಂ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ಟೀಂ ಇಂಡಿಯಾ ಪರವಾಗಿ ಸಾರ್ವಕಾಲಿಕ ಏಕದಿನ ತಂಡವನ್ನು ಪ್ರಕಟಿಸಿದ್ದಾರೆ.
ಸ್ಪೋರ್ಟ್ಸ್ ವೆಬ್ಸೈಟ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ತಮ್ಮ ತಂಡವನ್ನು ಪ್ರಕಟಿಸಿದ್ದು, ಅಚ್ಚರಿಯಂಬಂತೆ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ಉಲ್ಲೇಖಿಸಿದ್ದಾರೆ. ಆದರೆ ಭಾರತೀಯ ಕ್ರಿಕೆಟ್ಗಾಗಿ ದುಡಿದ ಹಲವು ಲೆಜೆಂಡ್ ಆಟಗಾರರನ್ನೇ ಗೌತಿ ಕೈ ಬಿಟ್ಟಿದ್ದಾರೆ.
ಪ್ರಸಕ್ತ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೆ ಕೋಕ್ ಕೊಟ್ಟಿರುವ ಗೌತಮ್, ತಂಡ ಪರವಾಗಿ ಆರಂಭಿಕರಾಗಿ ತಮ್ಮ ಹೆಸರಿನ ಜೊತೆಗೆ ವಿರೇಂದ್ರ ಸೆಹ್ವಾಗ್ ಅವರ ಹೆಸರನ್ನು ತೆಗೆದುಕೊಂಡಿದ್ದಾರೆ.
ಮೂರನೇ ಕ್ರಮಾಂಕದಲ್ಲಿ ರಾಹುಲ್ ದ್ರಾವಿಡ್ ಹೆಸರಿಸಿದರೆ ನಾಲ್ಕು ಮತ್ತು ಐದನೇ ಕ್ರಮಾಂಕದಲ್ಲಿ ದಿಗ್ಗಜ ಸಚಿನ್ ತೆಂಡುಲ್ಕರ್ ಹಾಗೂ ರನ್ ಮಷಿನ್ ವಿರಾಟ್ ಕೊಹ್ಲಿ ಹೆಸರಿದೆ. ಆರನೇ ಸ್ಥಾನದಲ್ಲಿ ಆಲ್ರೌಂಡರ್ ಯುವರಾಜ್ ಸಿಂಗ್, ಏಳನೇ ಸ್ಥಾನದಲ್ಲಿ ಮಹೇಂದ್ರ ಸಿಂಗ್ ಧೋನಿ, ಉಳಿದಂತೆ ಬೌಲರ್ಗಳಾದ ಅನಿಲ್ ಕುಂಬ್ಳೆ, ಆರ್. ಅಶ್ವಿನ್, ಇರ್ಫಾನ್ ಪಠಾಣ್ ಹಾಗೂ ಜಹೀರ್ ಖಾನ್ ಅವರು ಗೌತಿ ಇಲೆವೆನ್ನಲ್ಲಿ ಸ್ಥಾನ ಪಡೆದಿದ್ದಾರೆ.
ಉಳಿದಂತೆ ಟೀಂ ಇಂಡಿಯಾಗೆ ಮೊದಲು ವಿಶ್ವಕಪ್ ಗೆದ್ದುಕೊಟ್ಟ ಕಪಿಲ್ ದೇವ್, ಮಾಜಿ ನಾಯಕ ಸೌರವ್ ಗಂಗೂಲಿ, ಜಸ್ಪ್ರಿತ್ ಬುಮ್ರಾ, ರವೀಂದ್ರ ಜಡೇಜಾ, ಜವಾಗಲ್ ಶ್ರೀನಾಥ್ ಹಾಗೂ ಹರ್ಭಜನ್ ಸಿಂಗ್ರಂತಹ ಆಟಗಾರರನ್ನು ಕೈಬಿಟ್ಟಿದ್ದಾರೆ.
ಗಂಭೀರ್ ತಂಡ ಇಂತಿದೆ: ಗೌತಮ್ ಗಂಭೀರ್, ವಿರೇಂದ್ರ ಸೆಹ್ವಾಗ್, ರಾಹುಲ್ ದ್ರಾವಿಡ್, ಸಚಿನ್ ತೆಂಡುಲ್ಕರ್, ವಿರಾಟ್ ಕೊಹ್ಲಿ, ಯುವರಾಜ್ ಸಿಂಗ್, ಮಹೇಂದ್ರ ಸಿಂಗ್ ಧೋನಿ (ವಿಕೆಟ್ ಕೀಪರ್), ಅನಿಲ್ ಕುಂಬ್ಳೆ, ಆರ್. ಅಶ್ವಿನ್, ಇರ್ಫಾನ್ ಪಠಾಣ್ ಮತ್ತು ಜಹೀರ್ ಖಾನ್.
ಇದೇ ಸೆಪ್ಟೆಂಬರ್ 19 ರಿಂದ ಬಾಂಗ್ಲಾದೇಶದ ವಿರುದ್ಧ ಭಾರತ ತಂಡ ತನ್ನ ತವರಿನಲ್ಲಿ ಟೆಸ್ಟ್ ಸರಣಿ ಆಡಲಿದೆ.
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…