ಕ್ರೀಡೆ

ಸಾರ್ವಕಾಲಿಕ ಏಕದಿನ ಇಂಡಿಯಾ ತಂಡ ಪ್ರಕಟಿಸಿದ ಗೌತಿ: ಧೋನಿ ಇನ್‌, ರೋಹಿತ್‌ ಔಟ್‌

ಟೀಂ ಇಂಡಿಯಾ ಮುಖ್ಯ ಕೋಚ್‌ ಗೌತಮ್‌ ಗಂಭೀರ್‌ ಅವರು ಟೀಂ ಇಂಡಿಯಾ ಪರವಾಗಿ ಸಾರ್ವಕಾಲಿಕ ಏಕದಿನ ತಂಡವನ್ನು ಪ್ರಕಟಿಸಿದ್ದಾರೆ.

ಸ್ಪೋರ್ಟ್ಸ್‌ ವೆಬ್‌ಸೈಟ್‌ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ತಮ್ಮ ತಂಡವನ್ನು ಪ್ರಕಟಿಸಿದ್ದು, ಅಚ್ಚರಿಯಂಬಂತೆ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರನ್ನು ಉಲ್ಲೇಖಿಸಿದ್ದಾರೆ. ಆದರೆ ಭಾರತೀಯ ಕ್ರಿಕೆಟ್‌ಗಾಗಿ ದುಡಿದ ಹಲವು ಲೆಜೆಂಡ್‌ ಆಟಗಾರರನ್ನೇ ಗೌತಿ ಕೈ ಬಿಟ್ಟಿದ್ದಾರೆ.

ಪ್ರಸಕ್ತ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಅವರಿಗೆ ಕೋಕ್‌ ಕೊಟ್ಟಿರುವ ಗೌತಮ್‌, ತಂಡ ಪರವಾಗಿ ಆರಂಭಿಕರಾಗಿ ತಮ್ಮ ಹೆಸರಿನ ಜೊತೆಗೆ ವಿರೇಂದ್ರ ಸೆಹ್ವಾಗ್‌ ಅವರ ಹೆಸರನ್ನು ತೆಗೆದುಕೊಂಡಿದ್ದಾರೆ.

ಮೂರನೇ ಕ್ರಮಾಂಕದಲ್ಲಿ ರಾಹುಲ್‌ ದ್ರಾವಿಡ್‌ ಹೆಸರಿಸಿದರೆ ನಾಲ್ಕು ಮತ್ತು ಐದನೇ ಕ್ರಮಾಂಕದಲ್ಲಿ ದಿಗ್ಗಜ ಸಚಿನ್‌ ತೆಂಡುಲ್ಕರ್‌ ಹಾಗೂ ರನ್‌ ಮಷಿನ್‌ ವಿರಾಟ್‌ ಕೊಹ್ಲಿ ಹೆಸರಿದೆ. ಆರನೇ ಸ್ಥಾನದಲ್ಲಿ ಆಲ್‌ರೌಂಡರ್‌ ಯುವರಾಜ್‌ ಸಿಂಗ್‌, ಏಳನೇ ಸ್ಥಾನದಲ್ಲಿ ಮಹೇಂದ್ರ ಸಿಂಗ್‌ ಧೋನಿ, ಉಳಿದಂತೆ ಬೌಲರ್‌ಗಳಾದ ಅನಿಲ್‌ ಕುಂಬ್ಳೆ, ಆರ್‌. ಅಶ್ವಿನ್‌, ಇರ್ಫಾನ್‌ ಪಠಾಣ್‌ ಹಾಗೂ ಜಹೀರ್‌ ಖಾನ್‌ ಅವರು ಗೌತಿ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ.

ಉಳಿದಂತೆ ಟೀಂ ಇಂಡಿಯಾಗೆ ಮೊದಲು ವಿಶ್ವಕಪ್‌ ಗೆದ್ದುಕೊಟ್ಟ ಕಪಿಲ್‌ ದೇವ್‌, ಮಾಜಿ ನಾಯಕ ಸೌರವ್‌ ಗಂಗೂಲಿ, ಜಸ್‌ಪ್ರಿತ್‌ ಬುಮ್ರಾ, ರವೀಂದ್ರ ಜಡೇಜಾ, ಜವಾಗಲ್‌ ಶ್ರೀನಾಥ್‌‌ ಹಾಗೂ ಹರ್ಭಜನ್‌ ಸಿಂಗ್‌ರಂತಹ ಆಟಗಾರರನ್ನು ಕೈಬಿಟ್ಟಿದ್ದಾರೆ.

ಗಂಭೀರ್‌ ತಂಡ ಇಂತಿದೆ: ಗೌತಮ್‌ ಗಂಭೀರ್‌, ವಿರೇಂದ್ರ ಸೆಹ್ವಾಗ್‌, ರಾಹುಲ್‌ ದ್ರಾವಿಡ್‌, ಸಚಿನ್‌ ತೆಂಡುಲ್ಕರ್‌, ವಿರಾಟ್‌ ಕೊಹ್ಲಿ, ಯುವರಾಜ್‌ ಸಿಂಗ್‌, ಮಹೇಂದ್ರ ಸಿಂಗ್‌ ಧೋನಿ (ವಿಕೆಟ್‌ ಕೀಪರ್‌), ಅನಿಲ್‌ ಕುಂಬ್ಳೆ, ಆರ್‌. ಅಶ್ವಿನ್‌, ಇರ್ಫಾನ್‌ ಪಠಾಣ್‌ ಮತ್ತು ಜಹೀರ್‌ ಖಾನ್‌.

ಇದೇ ಸೆಪ್ಟೆಂಬರ್‌ 19 ರಿಂದ ಬಾಂಗ್ಲಾದೇಶದ ವಿರುದ್ಧ ಭಾರತ ತಂಡ ತನ್ನ ತವರಿನಲ್ಲಿ ಟೆಸ್ಟ್‌ ಸರಣಿ ಆಡಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

12 mins ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

2 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

2 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

2 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

2 hours ago

ಋತುಚಕ್ರದ ರಜೆ : ತನ್ನದೆ ತಡೆಯಾಜ್ಞೆ ಹಿಂಪಡೆದ ನ್ಯಾಯಮೂರ್ತಿ…!

ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…

2 hours ago