ಕ್ರೀಡೆ

ಸಾರ್ವಕಾಲಿಕ ಏಕದಿನ ಇಂಡಿಯಾ ತಂಡ ಪ್ರಕಟಿಸಿದ ಗೌತಿ: ಧೋನಿ ಇನ್‌, ರೋಹಿತ್‌ ಔಟ್‌

ಟೀಂ ಇಂಡಿಯಾ ಮುಖ್ಯ ಕೋಚ್‌ ಗೌತಮ್‌ ಗಂಭೀರ್‌ ಅವರು ಟೀಂ ಇಂಡಿಯಾ ಪರವಾಗಿ ಸಾರ್ವಕಾಲಿಕ ಏಕದಿನ ತಂಡವನ್ನು ಪ್ರಕಟಿಸಿದ್ದಾರೆ.

ಸ್ಪೋರ್ಟ್ಸ್‌ ವೆಬ್‌ಸೈಟ್‌ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ತಮ್ಮ ತಂಡವನ್ನು ಪ್ರಕಟಿಸಿದ್ದು, ಅಚ್ಚರಿಯಂಬಂತೆ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರನ್ನು ಉಲ್ಲೇಖಿಸಿದ್ದಾರೆ. ಆದರೆ ಭಾರತೀಯ ಕ್ರಿಕೆಟ್‌ಗಾಗಿ ದುಡಿದ ಹಲವು ಲೆಜೆಂಡ್‌ ಆಟಗಾರರನ್ನೇ ಗೌತಿ ಕೈ ಬಿಟ್ಟಿದ್ದಾರೆ.

ಪ್ರಸಕ್ತ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಅವರಿಗೆ ಕೋಕ್‌ ಕೊಟ್ಟಿರುವ ಗೌತಮ್‌, ತಂಡ ಪರವಾಗಿ ಆರಂಭಿಕರಾಗಿ ತಮ್ಮ ಹೆಸರಿನ ಜೊತೆಗೆ ವಿರೇಂದ್ರ ಸೆಹ್ವಾಗ್‌ ಅವರ ಹೆಸರನ್ನು ತೆಗೆದುಕೊಂಡಿದ್ದಾರೆ.

ಮೂರನೇ ಕ್ರಮಾಂಕದಲ್ಲಿ ರಾಹುಲ್‌ ದ್ರಾವಿಡ್‌ ಹೆಸರಿಸಿದರೆ ನಾಲ್ಕು ಮತ್ತು ಐದನೇ ಕ್ರಮಾಂಕದಲ್ಲಿ ದಿಗ್ಗಜ ಸಚಿನ್‌ ತೆಂಡುಲ್ಕರ್‌ ಹಾಗೂ ರನ್‌ ಮಷಿನ್‌ ವಿರಾಟ್‌ ಕೊಹ್ಲಿ ಹೆಸರಿದೆ. ಆರನೇ ಸ್ಥಾನದಲ್ಲಿ ಆಲ್‌ರೌಂಡರ್‌ ಯುವರಾಜ್‌ ಸಿಂಗ್‌, ಏಳನೇ ಸ್ಥಾನದಲ್ಲಿ ಮಹೇಂದ್ರ ಸಿಂಗ್‌ ಧೋನಿ, ಉಳಿದಂತೆ ಬೌಲರ್‌ಗಳಾದ ಅನಿಲ್‌ ಕುಂಬ್ಳೆ, ಆರ್‌. ಅಶ್ವಿನ್‌, ಇರ್ಫಾನ್‌ ಪಠಾಣ್‌ ಹಾಗೂ ಜಹೀರ್‌ ಖಾನ್‌ ಅವರು ಗೌತಿ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ.

ಉಳಿದಂತೆ ಟೀಂ ಇಂಡಿಯಾಗೆ ಮೊದಲು ವಿಶ್ವಕಪ್‌ ಗೆದ್ದುಕೊಟ್ಟ ಕಪಿಲ್‌ ದೇವ್‌, ಮಾಜಿ ನಾಯಕ ಸೌರವ್‌ ಗಂಗೂಲಿ, ಜಸ್‌ಪ್ರಿತ್‌ ಬುಮ್ರಾ, ರವೀಂದ್ರ ಜಡೇಜಾ, ಜವಾಗಲ್‌ ಶ್ರೀನಾಥ್‌‌ ಹಾಗೂ ಹರ್ಭಜನ್‌ ಸಿಂಗ್‌ರಂತಹ ಆಟಗಾರರನ್ನು ಕೈಬಿಟ್ಟಿದ್ದಾರೆ.

ಗಂಭೀರ್‌ ತಂಡ ಇಂತಿದೆ: ಗೌತಮ್‌ ಗಂಭೀರ್‌, ವಿರೇಂದ್ರ ಸೆಹ್ವಾಗ್‌, ರಾಹುಲ್‌ ದ್ರಾವಿಡ್‌, ಸಚಿನ್‌ ತೆಂಡುಲ್ಕರ್‌, ವಿರಾಟ್‌ ಕೊಹ್ಲಿ, ಯುವರಾಜ್‌ ಸಿಂಗ್‌, ಮಹೇಂದ್ರ ಸಿಂಗ್‌ ಧೋನಿ (ವಿಕೆಟ್‌ ಕೀಪರ್‌), ಅನಿಲ್‌ ಕುಂಬ್ಳೆ, ಆರ್‌. ಅಶ್ವಿನ್‌, ಇರ್ಫಾನ್‌ ಪಠಾಣ್‌ ಮತ್ತು ಜಹೀರ್‌ ಖಾನ್‌.

ಇದೇ ಸೆಪ್ಟೆಂಬರ್‌ 19 ರಿಂದ ಬಾಂಗ್ಲಾದೇಶದ ವಿರುದ್ಧ ಭಾರತ ತಂಡ ತನ್ನ ತವರಿನಲ್ಲಿ ಟೆಸ್ಟ್‌ ಸರಣಿ ಆಡಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬಂಡೀಪಾಳ್ಯದಲ್ಲಿ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಶೀಘ್ರ ಆರಂಭ

ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…

2 mins ago

ನೂರು ಸಾವಿರದ ಗಡಿ ದಾಟಿದ ಆಂದೋಲನ ಇನ್ ಸ್ಟಾ ಪೇಜ್ ಹಿಂಬಾಲಕರು

‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…

6 mins ago

ದುಸ್ಥಿತಿಯಲ್ಲಿ ಸರ್ಕಾರಿ ಮಹಾರಾಜ ಸಂಸ್ಕೃತ ಪಾಠಶಾಲೆ ಕಟ್ಟಡ

ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…

14 mins ago

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

12 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

12 hours ago