ಕ್ರೀಡೆ

ಕೆನಡಾ ಓಪನ್‌ ಮುಡಿಗೇರಿಸಿಕೊಂಡ ಭಾರತದ ಲಕ್ಷ್ಯಸೇನ್‌!

ನವದೆಹಲಿ: ಭಾರತೀಯ ಬ್ಯಾಡ್ಮಿಂಟನ್ ತಾರೆ ಹಾಗೂ ಕಾಮನ್‌ವೆಲ್ತ್‌ ಗೇಮ್ಸ್ ಚಾಂಪಿಯನ್ ಲಕ್ಷ್ಯಸೇನ್ ಅವರು ಕೆನಾಡ ಓಪನ್‌ ಮುಡಿಗೇರಿಸಿಕೊಂಡಿದ್ದಾರೆ. ಕೆನಡಾ ಓಪನ್ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಆಲ್ ಇಂಗ್ಲೆಂಡ್ ಚಾಂಪಿಯನ್ ಚೀನಾದ ಶಿ ಫೆಂಗ್ ವಿರುದ್ಧ 21-18 ಹಾಗೂ 22-20 ಅಂತರದಲ್ಲಿ ನೇರ ಗೇಮ್‌ಗಳಿಂದ ಭರ್ಜರಿ ಗೆಲುವು ದಾಖಲಿಸಿದರು. ಇದು ಲಕ್ಷ್ಯಸೇನ್ ಅವರ ಎರಡನೇ ಬಿಡಬ್ಲ್ಯುಎಫ್‌ ಸೂಪರ್ 500 ಪ್ರಶಸ್ತಿಯಾಗಿದೆ.

ವಿಶ್ವ ಶ್ರೇಯಾಂಕದಲ್ಲಿ 19ನೇ ಸ್ಥಾನದಲ್ಲಿರುವ ಲಕ್ಷ್ಯಸೇನ್ ವಿಶ್ವದ 10ನೇ ಸ್ಥಾನದಲ್ಲಿರುವ ಶಿ ಫೆಂಗ್ ವಿರುದ್ಧ ಅಸಾಧಾರಣ ಪ್ರದರ್ಶನ ತೋರಿದರು. ಇದರ ಫಲವಾಗಿ ಕೆನಡಾ ಓಪನ್ ಪ್ರಶಸ್ತಿ ಗೆದ್ದುಕೊಂಡರು. ಈ ಪಂದ್ಯವನ್ನು ಗೆಲ್ಲುವ ಮೂಲಕ ಅವರು ತಮ್ಮ ದಾಖಲೆಯನ್ನು 4-2 ರಿಂದ 5-2ರೊಂದಿಗೆ ಉತ್ತಮ ಪಡಿಸಿಕೊಂಡರು.

ಕೆನಾಡ ಓಪನ್‌ ಫೈನಲ್‌ ಪಂದ್ಯಕ್ಕೂ ಮುನ್ನ ಶಿ ಫೆಂಗ್ ಅವರನ್ನು ಆರು ಬಾರಿ ಎದುರಿಸಿದ್ದ ಲಕ್ಷ್ಯಸೇನ್ 4 ಬಾರಿ ಗೆದ್ದಿದ್ದರು. ಈ ಪಂದ್ಯದ ಗೆಲುವಿನೊಂದಿಗೆ ತಮ್ಮ ಮುನ್ನಡೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಪ್ರಸಕ್ತ ವರ್ಷದಲ್ಲಿ21ರ ಹರೆಯದ ಲಕ್ಷ್ಯ ಸೇನ್‌ಗೆ ಇದು ಮೊದಲ ಪ್ರಶಸ್ತಿ ಎಂಬುದು ಗಮನಾರ್ಹ ಸಂಗತಿ.

2022ರ ಜನವರಿಯಲ್ಲಿ ಇಂಡಿಯಾ ಓಪನ್ ಗೆದ್ದ ನಂತರ ಲಕ್ಷ್ಯಸೇನ್‌ಗೆ ಇದು ಎರಡನೇ ಬಿಡಬ್ಲ್ಯುಎಫ್‌ ವರ್ಲ್ಡ್ ಟೂರ್ ಪ್ರಶಸ್ತಿಯಾಗಿದೆ. ತೀವ್ರ ಒತ್ತಡದಲ್ಲೂ ಲಕ್ಷ್ಯಸೇನ್ ಅದ್ಭುತ ಪ್ರದರ್ಶನ ತೋರಿದ್ದಾರೆ. ಫೈನಲ್‌ನಲ್ಲಿ ಅಸಾಮಾನ್ಯ ಪ್ರದರ್ಶನ ತೋರಿ ಚಾಂಪಿಯನ್‌ ಆಗಿ ಹೊರ ಹೊಮ್ಮಿದ್ದಾರೆ.

ಈ ಟೂರ್ನಿಯಲ್ಲಿ ಲಕ್ಷ್ಯಸೇನ್ ಅದ್ಭುತ ಆಟದ ಶೈಲಿಯನ್ನು ಪ್ರದರ್ಶಿಸಿದರು. ನಾಲ್ಕನೇ ಶ್ರೇಯಾಂಕದ ಆಟಗಾರ ಕುನ್ಲಾವುಡ್ ವಿಟಿಡ್ಸರ್ನ್ ಅವರನ್ನು ಸೋಲಿಸುವ ಮೂಲಕ ಲಕ್ಷ್ಯಸೇನ್‌ ಟೂರ್ನಿಯಲ್ಲಿ ಶುಭಾರಂಭ ಕಂಡಿದ್ದರು. ಸೆಮಿಫೈನಲ್‌ ಪಂದ್ಯದಲ್ಲಿ ತಮಗಿಂತ ಮೇಲಿನ ಶ್ರೇಯಾಂಕದ ಜಪಾನ್‌ನ ನಿಶಿಮೊಟೊ ಅವರನ್ನು ಸೋಲಿಸಿದರು. ಅವರು ಕೇವಲ 44 ನಿಮಿಷಗಳಲ್ಲಿ 21-17, 21-14 ನೇರ ಗೇಮ್‌ಗಳಿಂದ ಜಪಾನ್‌ ಆಟಗಾರನನ್ನು ಮಣಿಸಿದ್ದರು.

ಸೆಮಿಫೈನಲ್‌ನಲ್ಲಿ ಪಿವಿ ಸಿಂಧೂಗೆ ಸೋಲು

ಇನ್ನು ಒಲಿಂಪಿಕ್ಸ್ ಪದಕ ವಿಜೇತ ಹಾಗೂ ಭಾರತದ ಸ್ಟಾರ್‌ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿವಿ ಸಿಂಧೂ ಅವರು ಮಹಿಳೆಯರ ಸಿಂಗಲ್ಸ್ ಸೆಮಿಫೈನಲ್ ಪಂದ್ಯದಲ್ಲಿ ಜಪಾನ್‌ನ ಅಕನೆ ಯಮಗುಚಿ ವಿರುದ್ದ 14-21 ಹಾಗೂ 15-21 ನೇರ ಗೇಮ್‌ಗಳಿಂದ ಸೋತಿದ್ದರು. ಆ ಮೂಲಕ ನಾಲ್ಕರ ಘಟ್ಟದಲ್ಲಿಯೇ ತಮ್ಮ ಅಭಿಯಾನವನ್ನು ಮುಗಿಸಿ ಹೊರಬಂದರು.

andolanait

Recent Posts

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ : ಯತೀಂದ್ರ ಸಿದ್ದರಾಮಯ್ಯ

ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲವಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರಲಿದ್ದಾರೆ ಎಂದು ಎಂಎಲ್‌ಸಿ…

52 mins ago

ನಟ, ರಾಜಕಾರಣಿ ವಿಜಯ್‌ಗೆ 1.5ಕೋಟಿ ದಂಡ : ರಿಟ್‌ ಅರ್ಜಿ ವಜಾಗೊಳಿಸಿದ ಹೈ ಕೋರ್ಟ್‌

ಚೆನ್ನೈ : ಆದಾಯ ತೆರಿಗೆ ಇಲಾಖೆ 1.50 ಕೋಟಿ ರೂಪಾಯಿ ದಂಡ ಪಾವತಿಸುವಂತೆ ನಿರ್ದೇಶಿಸಿದ್ದ ಆದೇಶವನ್ನು ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ…

59 mins ago

ಡ್ರಗ್ಸ್‌ ಸಮೇತ ಸಿಕ್ಕಿಬಿದ್ದ ನಟಿ ಅಂಜುಕೃಷ್ಣ : 8 ಮಂದಿ ಬಂಧನ

ಚೆನ್ನೈ : ತಮಿಳು ಚಿತ್ರರಂಗದ ಒಬ್ಬ ನಟಿ ಮತ್ತು ಸಹಾಯಕ ನಿರ್ದೇಶಕಿ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಡ್ರಗ್ಸ್ ಸಮೇತ…

1 hour ago

ಪರೀಕ್ಷಾ ಪೇ ಚರ್ಚಾ | ಇಂಟರ್‌ನೆಟ್‌ನಲ್ಲಿ ಸಮಯ ಕಳೆಯಬೇಡಿ : ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಸಲಹೆ

ಹೊಸದಿಲ್ಲಿ : ದೇಶದಲ್ಲಿ ಡೇಟಾ ಅಗ್ಗವಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಇಂಟರ್ನೆಟ್‍ನಲ್ಲಿ ಸಮಯ ವ್ಯರ್ಥ ಮಾಡಬೇಡಿ ಮತ್ತು ಅವರ ಜೀವನ…

2 hours ago

ರಾಜ್ಯದ ಜನತೆಗೆ ಮತ್ತೊಂದು ಶಾಕ್‌ : ವಿದ್ಯುತ್‌ ದರ ಏರಿಕೆ ಸಾಧ್ಯತೆ

ಬೆಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆ ದಿನದಿಂದ ದಿನಕ್ಕೆ ಹೆಚ್ಚಾಗಿ ಹೈರಾಣಾಗಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು,…

2 hours ago

ಬೆಳ್ಳಂಬೆಳಗ್ಗೆ JCB ಘರ್ಜನೆ ; ಸರ್ಕಾರಿ ಜಾಗ ಅಕ್ರಮ ತೆರವು

ಮೈಸೂರು : ಮೈಸೂರು ನಗರದಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜನೆ ಕೇಳಿ ಬಂದಿದ್ದು, ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ಸರ್ಕಾರದ…

3 hours ago