ಕ್ರೀಡೆ

ಕೆನಡಾ ಓಪನ್‌ ಮುಡಿಗೇರಿಸಿಕೊಂಡ ಭಾರತದ ಲಕ್ಷ್ಯಸೇನ್‌!

ನವದೆಹಲಿ: ಭಾರತೀಯ ಬ್ಯಾಡ್ಮಿಂಟನ್ ತಾರೆ ಹಾಗೂ ಕಾಮನ್‌ವೆಲ್ತ್‌ ಗೇಮ್ಸ್ ಚಾಂಪಿಯನ್ ಲಕ್ಷ್ಯಸೇನ್ ಅವರು ಕೆನಾಡ ಓಪನ್‌ ಮುಡಿಗೇರಿಸಿಕೊಂಡಿದ್ದಾರೆ. ಕೆನಡಾ ಓಪನ್ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಆಲ್ ಇಂಗ್ಲೆಂಡ್ ಚಾಂಪಿಯನ್ ಚೀನಾದ ಶಿ ಫೆಂಗ್ ವಿರುದ್ಧ 21-18 ಹಾಗೂ 22-20 ಅಂತರದಲ್ಲಿ ನೇರ ಗೇಮ್‌ಗಳಿಂದ ಭರ್ಜರಿ ಗೆಲುವು ದಾಖಲಿಸಿದರು. ಇದು ಲಕ್ಷ್ಯಸೇನ್ ಅವರ ಎರಡನೇ ಬಿಡಬ್ಲ್ಯುಎಫ್‌ ಸೂಪರ್ 500 ಪ್ರಶಸ್ತಿಯಾಗಿದೆ.

ವಿಶ್ವ ಶ್ರೇಯಾಂಕದಲ್ಲಿ 19ನೇ ಸ್ಥಾನದಲ್ಲಿರುವ ಲಕ್ಷ್ಯಸೇನ್ ವಿಶ್ವದ 10ನೇ ಸ್ಥಾನದಲ್ಲಿರುವ ಶಿ ಫೆಂಗ್ ವಿರುದ್ಧ ಅಸಾಧಾರಣ ಪ್ರದರ್ಶನ ತೋರಿದರು. ಇದರ ಫಲವಾಗಿ ಕೆನಡಾ ಓಪನ್ ಪ್ರಶಸ್ತಿ ಗೆದ್ದುಕೊಂಡರು. ಈ ಪಂದ್ಯವನ್ನು ಗೆಲ್ಲುವ ಮೂಲಕ ಅವರು ತಮ್ಮ ದಾಖಲೆಯನ್ನು 4-2 ರಿಂದ 5-2ರೊಂದಿಗೆ ಉತ್ತಮ ಪಡಿಸಿಕೊಂಡರು.

ಕೆನಾಡ ಓಪನ್‌ ಫೈನಲ್‌ ಪಂದ್ಯಕ್ಕೂ ಮುನ್ನ ಶಿ ಫೆಂಗ್ ಅವರನ್ನು ಆರು ಬಾರಿ ಎದುರಿಸಿದ್ದ ಲಕ್ಷ್ಯಸೇನ್ 4 ಬಾರಿ ಗೆದ್ದಿದ್ದರು. ಈ ಪಂದ್ಯದ ಗೆಲುವಿನೊಂದಿಗೆ ತಮ್ಮ ಮುನ್ನಡೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಪ್ರಸಕ್ತ ವರ್ಷದಲ್ಲಿ21ರ ಹರೆಯದ ಲಕ್ಷ್ಯ ಸೇನ್‌ಗೆ ಇದು ಮೊದಲ ಪ್ರಶಸ್ತಿ ಎಂಬುದು ಗಮನಾರ್ಹ ಸಂಗತಿ.

2022ರ ಜನವರಿಯಲ್ಲಿ ಇಂಡಿಯಾ ಓಪನ್ ಗೆದ್ದ ನಂತರ ಲಕ್ಷ್ಯಸೇನ್‌ಗೆ ಇದು ಎರಡನೇ ಬಿಡಬ್ಲ್ಯುಎಫ್‌ ವರ್ಲ್ಡ್ ಟೂರ್ ಪ್ರಶಸ್ತಿಯಾಗಿದೆ. ತೀವ್ರ ಒತ್ತಡದಲ್ಲೂ ಲಕ್ಷ್ಯಸೇನ್ ಅದ್ಭುತ ಪ್ರದರ್ಶನ ತೋರಿದ್ದಾರೆ. ಫೈನಲ್‌ನಲ್ಲಿ ಅಸಾಮಾನ್ಯ ಪ್ರದರ್ಶನ ತೋರಿ ಚಾಂಪಿಯನ್‌ ಆಗಿ ಹೊರ ಹೊಮ್ಮಿದ್ದಾರೆ.

ಈ ಟೂರ್ನಿಯಲ್ಲಿ ಲಕ್ಷ್ಯಸೇನ್ ಅದ್ಭುತ ಆಟದ ಶೈಲಿಯನ್ನು ಪ್ರದರ್ಶಿಸಿದರು. ನಾಲ್ಕನೇ ಶ್ರೇಯಾಂಕದ ಆಟಗಾರ ಕುನ್ಲಾವುಡ್ ವಿಟಿಡ್ಸರ್ನ್ ಅವರನ್ನು ಸೋಲಿಸುವ ಮೂಲಕ ಲಕ್ಷ್ಯಸೇನ್‌ ಟೂರ್ನಿಯಲ್ಲಿ ಶುಭಾರಂಭ ಕಂಡಿದ್ದರು. ಸೆಮಿಫೈನಲ್‌ ಪಂದ್ಯದಲ್ಲಿ ತಮಗಿಂತ ಮೇಲಿನ ಶ್ರೇಯಾಂಕದ ಜಪಾನ್‌ನ ನಿಶಿಮೊಟೊ ಅವರನ್ನು ಸೋಲಿಸಿದರು. ಅವರು ಕೇವಲ 44 ನಿಮಿಷಗಳಲ್ಲಿ 21-17, 21-14 ನೇರ ಗೇಮ್‌ಗಳಿಂದ ಜಪಾನ್‌ ಆಟಗಾರನನ್ನು ಮಣಿಸಿದ್ದರು.

ಸೆಮಿಫೈನಲ್‌ನಲ್ಲಿ ಪಿವಿ ಸಿಂಧೂಗೆ ಸೋಲು

ಇನ್ನು ಒಲಿಂಪಿಕ್ಸ್ ಪದಕ ವಿಜೇತ ಹಾಗೂ ಭಾರತದ ಸ್ಟಾರ್‌ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿವಿ ಸಿಂಧೂ ಅವರು ಮಹಿಳೆಯರ ಸಿಂಗಲ್ಸ್ ಸೆಮಿಫೈನಲ್ ಪಂದ್ಯದಲ್ಲಿ ಜಪಾನ್‌ನ ಅಕನೆ ಯಮಗುಚಿ ವಿರುದ್ದ 14-21 ಹಾಗೂ 15-21 ನೇರ ಗೇಮ್‌ಗಳಿಂದ ಸೋತಿದ್ದರು. ಆ ಮೂಲಕ ನಾಲ್ಕರ ಘಟ್ಟದಲ್ಲಿಯೇ ತಮ್ಮ ಅಭಿಯಾನವನ್ನು ಮುಗಿಸಿ ಹೊರಬಂದರು.

andolanait

Recent Posts

2026ರ ಐಪಿಎಲ್‌ ಬೆಂಗಳೂರಿನಲ್ಲೇ ಫಿಕ್ಸ್: ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ

ಬೆಂಗಳೂರು: 2026ರ ಐಪಿಎಲ್‌ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಎಸ್‌ಸಿಎ ಚುನಾವಣೆ ಮತದಾನದ ವೇಳೆ…

10 mins ago

ದೆಹಲಿ: ಇಂದು 108 ಇಂಡಿಗೋ ವಿಮಾನಗಳ ಹಾರಾಟ ರದ್ದು

ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ…

21 mins ago

ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…

2 hours ago

ನಾಳೆಯಿಂದ ಬೆಳಗಾವಿಯ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ

ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…

2 hours ago

ಗೋವಾದಲ್ಲಿ 25 ಮಂದಿ ಸಜೀವ ದಹನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್‌ ಬಳಿಯ ಅರ್ಪೊರಾದ ನೈಟ್‌ಕ್ಲಬ್‌ ಬೀರ್ಚ್‌ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…

2 hours ago

ಮೈಸೂರು| ಕಣ್ಣಿಗೆ ಕಾರದಪುಡಿ ಎರಚಿ ಹಲ್ಲೆ ಬಳಿಕ ಅಪಹರಣ

ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…

3 hours ago