ಕ್ರೀಡೆ

ಕೆನಡಾ ಓಪನ್‌ ಮುಡಿಗೇರಿಸಿಕೊಂಡ ಭಾರತದ ಲಕ್ಷ್ಯಸೇನ್‌!

ನವದೆಹಲಿ: ಭಾರತೀಯ ಬ್ಯಾಡ್ಮಿಂಟನ್ ತಾರೆ ಹಾಗೂ ಕಾಮನ್‌ವೆಲ್ತ್‌ ಗೇಮ್ಸ್ ಚಾಂಪಿಯನ್ ಲಕ್ಷ್ಯಸೇನ್ ಅವರು ಕೆನಾಡ ಓಪನ್‌ ಮುಡಿಗೇರಿಸಿಕೊಂಡಿದ್ದಾರೆ. ಕೆನಡಾ ಓಪನ್ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಆಲ್ ಇಂಗ್ಲೆಂಡ್ ಚಾಂಪಿಯನ್ ಚೀನಾದ ಶಿ ಫೆಂಗ್ ವಿರುದ್ಧ 21-18 ಹಾಗೂ 22-20 ಅಂತರದಲ್ಲಿ ನೇರ ಗೇಮ್‌ಗಳಿಂದ ಭರ್ಜರಿ ಗೆಲುವು ದಾಖಲಿಸಿದರು. ಇದು ಲಕ್ಷ್ಯಸೇನ್ ಅವರ ಎರಡನೇ ಬಿಡಬ್ಲ್ಯುಎಫ್‌ ಸೂಪರ್ 500 ಪ್ರಶಸ್ತಿಯಾಗಿದೆ.

ವಿಶ್ವ ಶ್ರೇಯಾಂಕದಲ್ಲಿ 19ನೇ ಸ್ಥಾನದಲ್ಲಿರುವ ಲಕ್ಷ್ಯಸೇನ್ ವಿಶ್ವದ 10ನೇ ಸ್ಥಾನದಲ್ಲಿರುವ ಶಿ ಫೆಂಗ್ ವಿರುದ್ಧ ಅಸಾಧಾರಣ ಪ್ರದರ್ಶನ ತೋರಿದರು. ಇದರ ಫಲವಾಗಿ ಕೆನಡಾ ಓಪನ್ ಪ್ರಶಸ್ತಿ ಗೆದ್ದುಕೊಂಡರು. ಈ ಪಂದ್ಯವನ್ನು ಗೆಲ್ಲುವ ಮೂಲಕ ಅವರು ತಮ್ಮ ದಾಖಲೆಯನ್ನು 4-2 ರಿಂದ 5-2ರೊಂದಿಗೆ ಉತ್ತಮ ಪಡಿಸಿಕೊಂಡರು.

ಕೆನಾಡ ಓಪನ್‌ ಫೈನಲ್‌ ಪಂದ್ಯಕ್ಕೂ ಮುನ್ನ ಶಿ ಫೆಂಗ್ ಅವರನ್ನು ಆರು ಬಾರಿ ಎದುರಿಸಿದ್ದ ಲಕ್ಷ್ಯಸೇನ್ 4 ಬಾರಿ ಗೆದ್ದಿದ್ದರು. ಈ ಪಂದ್ಯದ ಗೆಲುವಿನೊಂದಿಗೆ ತಮ್ಮ ಮುನ್ನಡೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಪ್ರಸಕ್ತ ವರ್ಷದಲ್ಲಿ21ರ ಹರೆಯದ ಲಕ್ಷ್ಯ ಸೇನ್‌ಗೆ ಇದು ಮೊದಲ ಪ್ರಶಸ್ತಿ ಎಂಬುದು ಗಮನಾರ್ಹ ಸಂಗತಿ.

2022ರ ಜನವರಿಯಲ್ಲಿ ಇಂಡಿಯಾ ಓಪನ್ ಗೆದ್ದ ನಂತರ ಲಕ್ಷ್ಯಸೇನ್‌ಗೆ ಇದು ಎರಡನೇ ಬಿಡಬ್ಲ್ಯುಎಫ್‌ ವರ್ಲ್ಡ್ ಟೂರ್ ಪ್ರಶಸ್ತಿಯಾಗಿದೆ. ತೀವ್ರ ಒತ್ತಡದಲ್ಲೂ ಲಕ್ಷ್ಯಸೇನ್ ಅದ್ಭುತ ಪ್ರದರ್ಶನ ತೋರಿದ್ದಾರೆ. ಫೈನಲ್‌ನಲ್ಲಿ ಅಸಾಮಾನ್ಯ ಪ್ರದರ್ಶನ ತೋರಿ ಚಾಂಪಿಯನ್‌ ಆಗಿ ಹೊರ ಹೊಮ್ಮಿದ್ದಾರೆ.

ಈ ಟೂರ್ನಿಯಲ್ಲಿ ಲಕ್ಷ್ಯಸೇನ್ ಅದ್ಭುತ ಆಟದ ಶೈಲಿಯನ್ನು ಪ್ರದರ್ಶಿಸಿದರು. ನಾಲ್ಕನೇ ಶ್ರೇಯಾಂಕದ ಆಟಗಾರ ಕುನ್ಲಾವುಡ್ ವಿಟಿಡ್ಸರ್ನ್ ಅವರನ್ನು ಸೋಲಿಸುವ ಮೂಲಕ ಲಕ್ಷ್ಯಸೇನ್‌ ಟೂರ್ನಿಯಲ್ಲಿ ಶುಭಾರಂಭ ಕಂಡಿದ್ದರು. ಸೆಮಿಫೈನಲ್‌ ಪಂದ್ಯದಲ್ಲಿ ತಮಗಿಂತ ಮೇಲಿನ ಶ್ರೇಯಾಂಕದ ಜಪಾನ್‌ನ ನಿಶಿಮೊಟೊ ಅವರನ್ನು ಸೋಲಿಸಿದರು. ಅವರು ಕೇವಲ 44 ನಿಮಿಷಗಳಲ್ಲಿ 21-17, 21-14 ನೇರ ಗೇಮ್‌ಗಳಿಂದ ಜಪಾನ್‌ ಆಟಗಾರನನ್ನು ಮಣಿಸಿದ್ದರು.

ಸೆಮಿಫೈನಲ್‌ನಲ್ಲಿ ಪಿವಿ ಸಿಂಧೂಗೆ ಸೋಲು

ಇನ್ನು ಒಲಿಂಪಿಕ್ಸ್ ಪದಕ ವಿಜೇತ ಹಾಗೂ ಭಾರತದ ಸ್ಟಾರ್‌ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿವಿ ಸಿಂಧೂ ಅವರು ಮಹಿಳೆಯರ ಸಿಂಗಲ್ಸ್ ಸೆಮಿಫೈನಲ್ ಪಂದ್ಯದಲ್ಲಿ ಜಪಾನ್‌ನ ಅಕನೆ ಯಮಗುಚಿ ವಿರುದ್ದ 14-21 ಹಾಗೂ 15-21 ನೇರ ಗೇಮ್‌ಗಳಿಂದ ಸೋತಿದ್ದರು. ಆ ಮೂಲಕ ನಾಲ್ಕರ ಘಟ್ಟದಲ್ಲಿಯೇ ತಮ್ಮ ಅಭಿಯಾನವನ್ನು ಮುಗಿಸಿ ಹೊರಬಂದರು.

andolanait

Recent Posts

ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿ: ತುರ್ತು ಪರಿಸ್ಥಿತಿ ಘೋಷಿಸಿದ WHO

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…

22 mins ago

ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…

2 hours ago

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

2 hours ago

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…

2 hours ago

ಕೇರಳ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕಾರ

ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.‌ವಿ.ಅರ್ಲೇಕರ್‌ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್‌ ಜೊತೆಗೆ ಅವರ…

2 hours ago

ಕೋಚಿಂಗ್ ಮಾಫಿಯಾಕ್ಕೆ NEET ಬಲಿ…!

ಭಾರತದಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…

4 hours ago