ನವದೆಹಲಿ: ಭಾರತೀಯ ಬ್ಯಾಡ್ಮಿಂಟನ್ ತಾರೆ ಹಾಗೂ ಕಾಮನ್ವೆಲ್ತ್ ಗೇಮ್ಸ್ ಚಾಂಪಿಯನ್ ಲಕ್ಷ್ಯಸೇನ್ ಅವರು ಕೆನಾಡ ಓಪನ್ ಮುಡಿಗೇರಿಸಿಕೊಂಡಿದ್ದಾರೆ. ಕೆನಡಾ ಓಪನ್ ಪುರುಷರ ಸಿಂಗಲ್ಸ್ ಫೈನಲ್ನಲ್ಲಿ ಆಲ್ ಇಂಗ್ಲೆಂಡ್ ಚಾಂಪಿಯನ್ ಚೀನಾದ ಶಿ ಫೆಂಗ್ ವಿರುದ್ಧ 21-18 ಹಾಗೂ 22-20 ಅಂತರದಲ್ಲಿ ನೇರ ಗೇಮ್ಗಳಿಂದ ಭರ್ಜರಿ ಗೆಲುವು ದಾಖಲಿಸಿದರು. ಇದು ಲಕ್ಷ್ಯಸೇನ್ ಅವರ ಎರಡನೇ ಬಿಡಬ್ಲ್ಯುಎಫ್ ಸೂಪರ್ 500 ಪ್ರಶಸ್ತಿಯಾಗಿದೆ.
ವಿಶ್ವ ಶ್ರೇಯಾಂಕದಲ್ಲಿ 19ನೇ ಸ್ಥಾನದಲ್ಲಿರುವ ಲಕ್ಷ್ಯಸೇನ್ ವಿಶ್ವದ 10ನೇ ಸ್ಥಾನದಲ್ಲಿರುವ ಶಿ ಫೆಂಗ್ ವಿರುದ್ಧ ಅಸಾಧಾರಣ ಪ್ರದರ್ಶನ ತೋರಿದರು. ಇದರ ಫಲವಾಗಿ ಕೆನಡಾ ಓಪನ್ ಪ್ರಶಸ್ತಿ ಗೆದ್ದುಕೊಂಡರು. ಈ ಪಂದ್ಯವನ್ನು ಗೆಲ್ಲುವ ಮೂಲಕ ಅವರು ತಮ್ಮ ದಾಖಲೆಯನ್ನು 4-2 ರಿಂದ 5-2ರೊಂದಿಗೆ ಉತ್ತಮ ಪಡಿಸಿಕೊಂಡರು.
ಕೆನಾಡ ಓಪನ್ ಫೈನಲ್ ಪಂದ್ಯಕ್ಕೂ ಮುನ್ನ ಶಿ ಫೆಂಗ್ ಅವರನ್ನು ಆರು ಬಾರಿ ಎದುರಿಸಿದ್ದ ಲಕ್ಷ್ಯಸೇನ್ 4 ಬಾರಿ ಗೆದ್ದಿದ್ದರು. ಈ ಪಂದ್ಯದ ಗೆಲುವಿನೊಂದಿಗೆ ತಮ್ಮ ಮುನ್ನಡೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಪ್ರಸಕ್ತ ವರ್ಷದಲ್ಲಿ21ರ ಹರೆಯದ ಲಕ್ಷ್ಯ ಸೇನ್ಗೆ ಇದು ಮೊದಲ ಪ್ರಶಸ್ತಿ ಎಂಬುದು ಗಮನಾರ್ಹ ಸಂಗತಿ.
2022ರ ಜನವರಿಯಲ್ಲಿ ಇಂಡಿಯಾ ಓಪನ್ ಗೆದ್ದ ನಂತರ ಲಕ್ಷ್ಯಸೇನ್ಗೆ ಇದು ಎರಡನೇ ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಪ್ರಶಸ್ತಿಯಾಗಿದೆ. ತೀವ್ರ ಒತ್ತಡದಲ್ಲೂ ಲಕ್ಷ್ಯಸೇನ್ ಅದ್ಭುತ ಪ್ರದರ್ಶನ ತೋರಿದ್ದಾರೆ. ಫೈನಲ್ನಲ್ಲಿ ಅಸಾಮಾನ್ಯ ಪ್ರದರ್ಶನ ತೋರಿ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ.
ಈ ಟೂರ್ನಿಯಲ್ಲಿ ಲಕ್ಷ್ಯಸೇನ್ ಅದ್ಭುತ ಆಟದ ಶೈಲಿಯನ್ನು ಪ್ರದರ್ಶಿಸಿದರು. ನಾಲ್ಕನೇ ಶ್ರೇಯಾಂಕದ ಆಟಗಾರ ಕುನ್ಲಾವುಡ್ ವಿಟಿಡ್ಸರ್ನ್ ಅವರನ್ನು ಸೋಲಿಸುವ ಮೂಲಕ ಲಕ್ಷ್ಯಸೇನ್ ಟೂರ್ನಿಯಲ್ಲಿ ಶುಭಾರಂಭ ಕಂಡಿದ್ದರು. ಸೆಮಿಫೈನಲ್ ಪಂದ್ಯದಲ್ಲಿ ತಮಗಿಂತ ಮೇಲಿನ ಶ್ರೇಯಾಂಕದ ಜಪಾನ್ನ ನಿಶಿಮೊಟೊ ಅವರನ್ನು ಸೋಲಿಸಿದರು. ಅವರು ಕೇವಲ 44 ನಿಮಿಷಗಳಲ್ಲಿ 21-17, 21-14 ನೇರ ಗೇಮ್ಗಳಿಂದ ಜಪಾನ್ ಆಟಗಾರನನ್ನು ಮಣಿಸಿದ್ದರು.
ಇನ್ನು ಒಲಿಂಪಿಕ್ಸ್ ಪದಕ ವಿಜೇತ ಹಾಗೂ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧೂ ಅವರು ಮಹಿಳೆಯರ ಸಿಂಗಲ್ಸ್ ಸೆಮಿಫೈನಲ್ ಪಂದ್ಯದಲ್ಲಿ ಜಪಾನ್ನ ಅಕನೆ ಯಮಗುಚಿ ವಿರುದ್ದ 14-21 ಹಾಗೂ 15-21 ನೇರ ಗೇಮ್ಗಳಿಂದ ಸೋತಿದ್ದರು. ಆ ಮೂಲಕ ನಾಲ್ಕರ ಘಟ್ಟದಲ್ಲಿಯೇ ತಮ್ಮ ಅಭಿಯಾನವನ್ನು ಮುಗಿಸಿ ಹೊರಬಂದರು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…