ಕ್ರೀಡೆ

ಏಕದಿನ ವಿಶ್ವಕಪ್‌ನಲ್ಲಿ ಭಾರತದ ನೂತನ ಮೈಲಿಗಲ್ಲುಗಳು

ಬೆಂಗಳೂರು : ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ತಂಡ ತನ್ನ ಅಮೊಘ ಪ್ರದರ್ಶನ ತೋರುವ ಮೂಲಕ ಹಲವಾರು ದಾಖಲೆಗಳನ್ನು ನಿರ್ಮಿಸಿದೆ.

ತವರು ನೆಲದಲ್ಲಿ ಟೂರ್ನಿ ಆಯೋಜಿಸಿರುವ ಭಾರತ ಅಂದುಕೊಂಡಂತೆ ಅತ್ಯತ್ತಮ ಪ್ರದರ್ಶನ ತೋರುವಲ್ಲಿ ಸಫಲವಾಗಿದೆ. ದೈತ್ಯ ಬ್ಯಾಟಿಂಗ್‌ ಹಾಗೂ ಮಾರಕ ಬೌಲಿಂಗ್‌ ವಿಭಾಗ ಹೊಂದಿದ್ದು, ವಿಶ್ವ ಶ್ರೇಷ್ಠ ತಂಡಗಳನ್ನೇ ಮಣ್ಣು ಮುಕ್ಕಿಸುವಲ್ಲಿ ಭಾರತ ಯಶಸ್ವಿಯಾಗಿದೆ.

ಈ ಟೂರ್ನಿಯಲ್ಲಿ ಲೀಗ್‌ನಲ್ಲಿ ತಾನಾಡಿದ ಎಲ್ಲಾ 9 ಪಂದ್ಯಗಳನ್ನು ಗೆಲ್ಲುವ ಮೂಲಕ ನೂತನ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.

ರನ್‌ ಮೆಷಿನ್‌ ಕಿಂಗ್‌ ಕೊಹ್ಲಿ 594 ರನ್‌ ಕಲೆಹಾಕಿ ಟೂರ್ನಿಯಲ್ಲಿ ಅತ್ಯಧಿಕ ರನ್‌ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ಇನ್ನು ವರ್ಲ್ಡ್‌ ಕಪ್‌ ಒಂದರಲ್ಲಿ ಸತತ ಎರಡು ಬಾರಿ 5 ವಿಕೆಟ್‌ ಪಡೆದ ಮೊದಲ ಬೌಲರ್‌ ಎಂಬ ಖ್ಯಾತಿಗೆ ಶಮಿ ಭಾಜನರಾಗಿದ್ದಾರೆ. ಇದನ್ನೊರತು ಪಡಿಸಿ ಈ ಬಾರಿಯ ವರ್ಲ್ಡ್‌ ಕಪ್‌ನಲ್ಲಿ ಭಾರತದ ಕೆಲವೊಂದು ದಾಖಲೆಗಳ ಚಿತ್ರನ ಇಲ್ಲಿದೆ.

ವಿಶ್ವಕಪ್‌ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಮೊದಲ ಐದು ಬ್ಯಾಟ್ಸ್‌ಮನ್‌ಗಳು 50+ ರನ್‌ ಬಾರಿಸಿದ್ದಾರೆ

ಬೆಸ್ಟ್‌ ಬ್ಯಾಟಿಂಗ್‌ ಲೈನ್ ಅಪ್‌
ವಿರಾಟ್‌ ಕೊಹ್ಲಿ – 594 ರನ್‌ಗಳು
ರೋಹಿತ್‌ ಶರ್ಮಾ – 503 ರನ್‌ಗಳು
ಶ್ರೇಯಸ್‌ ಐಯ್ಯರ್‌ – 421 ರನ್‌ಗಳು
ಕೆಎಲ್‌ ರಾಹುಲ್‌ – 347 ರನ್‌ಗಳು
ಶುಬ್ಮನ್‌ ಗಿಲ್‌ – 270 ರನ್‌ಗಳು

ಕೆಎಲ್‌ ರಾಹುಲ್‌ ವಿಶ್ವಕಪ್‌ ಇತಿಹಾಸದಲ್ಲಿ ಶತಕ ಬಾರಿಸಿದ ಭಾರತದ ಎರಡನೇ ವಿಕೆಟ್‌ ಕೀಪರ್‌ ಎಂಬ ದಾಖಲೆ ಬರೆದಿದ್ದಾರೆ. ಈ ಹಿಂದೆ ರಾಹುಲ್‌ ದ್ರಾವಿಡ್‌ ವಿಶ್ವಕಪ್‌ ಶತಕ ಬಾರಿಸಿದ್ದರು. ಈ ಮೂಲಕ ಈ ದಾಖಲೆ ಕನ್ನಡಿಗರ ಹೆಸರಿನಲ್ಲಿ ಮಾತ್ರ ಇದೆ.

ಕೆಎಲ್‌ ರಾಹುಲ್‌ 62 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ವಿಶ್ವಕಪ್‌ ಇತಿಹಾಸದಲ್ಲಿ ಅತಿ ವೇಗವಾಗಿ ಶತಕ ಬಾರಿಸಿದ ಭಾರತೀಯ ಬ್ಯಾಟ್ಸ್‌ಮನ್‌ ಎಂಬ ದಾಖಲೆ ಬರೆದಿದ್ದಾರೆ

ರೋಹಿತ್‌ ಶರ್ಮಾ ಈ ವರ್ಷ 60 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ವರ್ಷವೊಂದರಲ್ಲಿ ಅತಿಹೆಚ್ಚು ಸಿಕ್ಸರ್‌ ಬಾರಿಸಿದ ಬ್ಯಾಟ್ಸ್‌ಮನ್‌ ಎಂಬ ವಿಶ್ವ ದಾಖಲೆ ಬರೆದಿದ್ದಾರೆ. ಈ ಹಿಂದೆ ಎಬಿ ಡಿವಿಲಿಯರ್ಸ್‌ ವರ್ಷವೊಂದರಲ್ಲಿ 58 ಸಿಕ್ಸರ್‌ ಬಾರಿಸಿದ ದಾಖಲೆ ಬರೆದಿದ್ದರು

ವಿಶ್ವಕಪ್‌ನಲ್ಲಿ ಭಾರತದ ಪರ ಅತಿಹೆಚ್ಚು ರನ್‌ ಬಾರಿಸಿದ ವಿಕೆಟ್‌ ಕೀಪರ್‌ ಎಂಬ ದಾಖಲೆ ಬರೆದ ಕೆಎಲ್‌ ರಾಹುಲ್‌.

ನೆದರ್‌ಲ್ಯಾಂಡ್‌ ವಿರುದ್ಧದ ಪಂದ್ಯದಲ್ಲಿ ಮತ್ತೊಂದು ಶತಕ ಬಾರಿಸಿರುವ ಹಿಟ್‌ ಮ್ಯಾನ್‌ ವರ್ಲ್ಡ್‌ ಕಪ್‌ ಟೂರ್ನಿಯೊಂದರಲ್ಲಿ ಸತತ ಎರಡು ಬಾರಿ 500ರನ್‌ ದಾಖಲಿಸಿದ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಈ ದಾಖಲೆಯನ್ನು ರೋಹಿತ್‌ ಶರ್ಮಾ 2019 ಮತ್ತು 2023 ರಲ್ಲಿ 500+ ರನ್‌ ಬಾರಿಸಿದ್ದಾರೆ.  ಈ ಹಿಂದೆ ಸಚಿನ್‌ ತೆಂಡುಲ್ಕರ್‌ ಅವರು 1996 ಮತ್ತು 2003 ರಲ್ಲಿ 500ಕ್ಕೂ ಅಧಿಕ ರನ್‌ ಬಾರಿಸಿದ್ದು ಈವರೆಗಿನ ದಾಖಲೆಯಾಗಿತ್ತು.

andolanait

Recent Posts

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

3 hours ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

3 hours ago

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…

3 hours ago

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…

3 hours ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ : ಉನ್ನತ ಶಿಕ್ಷಣದಲ್ಲಿ ಬದಲಾವಣೆಗೆ ಕೇಂದ್ರದ ಮುನ್ನುಡಿ

ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…

3 hours ago

ಬೈಕ್‌ಗೆ ಲಾರಿ ಡಿಕ್ಕಿ : ಸವಾರ ಸಾವು, ಮತ್ತೊರ್ವ ಗಂಭೀರ

ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…

3 hours ago