ಕ್ರೀಡೆ

ಏಕದಿನ ವಿಶ್ವಕಪ್‌ನಲ್ಲಿ ಭಾರತದ ನೂತನ ಮೈಲಿಗಲ್ಲುಗಳು

ಬೆಂಗಳೂರು : ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ತಂಡ ತನ್ನ ಅಮೊಘ ಪ್ರದರ್ಶನ ತೋರುವ ಮೂಲಕ ಹಲವಾರು ದಾಖಲೆಗಳನ್ನು ನಿರ್ಮಿಸಿದೆ.

ತವರು ನೆಲದಲ್ಲಿ ಟೂರ್ನಿ ಆಯೋಜಿಸಿರುವ ಭಾರತ ಅಂದುಕೊಂಡಂತೆ ಅತ್ಯತ್ತಮ ಪ್ರದರ್ಶನ ತೋರುವಲ್ಲಿ ಸಫಲವಾಗಿದೆ. ದೈತ್ಯ ಬ್ಯಾಟಿಂಗ್‌ ಹಾಗೂ ಮಾರಕ ಬೌಲಿಂಗ್‌ ವಿಭಾಗ ಹೊಂದಿದ್ದು, ವಿಶ್ವ ಶ್ರೇಷ್ಠ ತಂಡಗಳನ್ನೇ ಮಣ್ಣು ಮುಕ್ಕಿಸುವಲ್ಲಿ ಭಾರತ ಯಶಸ್ವಿಯಾಗಿದೆ.

ಈ ಟೂರ್ನಿಯಲ್ಲಿ ಲೀಗ್‌ನಲ್ಲಿ ತಾನಾಡಿದ ಎಲ್ಲಾ 9 ಪಂದ್ಯಗಳನ್ನು ಗೆಲ್ಲುವ ಮೂಲಕ ನೂತನ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.

ರನ್‌ ಮೆಷಿನ್‌ ಕಿಂಗ್‌ ಕೊಹ್ಲಿ 594 ರನ್‌ ಕಲೆಹಾಕಿ ಟೂರ್ನಿಯಲ್ಲಿ ಅತ್ಯಧಿಕ ರನ್‌ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ಇನ್ನು ವರ್ಲ್ಡ್‌ ಕಪ್‌ ಒಂದರಲ್ಲಿ ಸತತ ಎರಡು ಬಾರಿ 5 ವಿಕೆಟ್‌ ಪಡೆದ ಮೊದಲ ಬೌಲರ್‌ ಎಂಬ ಖ್ಯಾತಿಗೆ ಶಮಿ ಭಾಜನರಾಗಿದ್ದಾರೆ. ಇದನ್ನೊರತು ಪಡಿಸಿ ಈ ಬಾರಿಯ ವರ್ಲ್ಡ್‌ ಕಪ್‌ನಲ್ಲಿ ಭಾರತದ ಕೆಲವೊಂದು ದಾಖಲೆಗಳ ಚಿತ್ರನ ಇಲ್ಲಿದೆ.

ವಿಶ್ವಕಪ್‌ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಮೊದಲ ಐದು ಬ್ಯಾಟ್ಸ್‌ಮನ್‌ಗಳು 50+ ರನ್‌ ಬಾರಿಸಿದ್ದಾರೆ

ಬೆಸ್ಟ್‌ ಬ್ಯಾಟಿಂಗ್‌ ಲೈನ್ ಅಪ್‌
ವಿರಾಟ್‌ ಕೊಹ್ಲಿ – 594 ರನ್‌ಗಳು
ರೋಹಿತ್‌ ಶರ್ಮಾ – 503 ರನ್‌ಗಳು
ಶ್ರೇಯಸ್‌ ಐಯ್ಯರ್‌ – 421 ರನ್‌ಗಳು
ಕೆಎಲ್‌ ರಾಹುಲ್‌ – 347 ರನ್‌ಗಳು
ಶುಬ್ಮನ್‌ ಗಿಲ್‌ – 270 ರನ್‌ಗಳು

ಕೆಎಲ್‌ ರಾಹುಲ್‌ ವಿಶ್ವಕಪ್‌ ಇತಿಹಾಸದಲ್ಲಿ ಶತಕ ಬಾರಿಸಿದ ಭಾರತದ ಎರಡನೇ ವಿಕೆಟ್‌ ಕೀಪರ್‌ ಎಂಬ ದಾಖಲೆ ಬರೆದಿದ್ದಾರೆ. ಈ ಹಿಂದೆ ರಾಹುಲ್‌ ದ್ರಾವಿಡ್‌ ವಿಶ್ವಕಪ್‌ ಶತಕ ಬಾರಿಸಿದ್ದರು. ಈ ಮೂಲಕ ಈ ದಾಖಲೆ ಕನ್ನಡಿಗರ ಹೆಸರಿನಲ್ಲಿ ಮಾತ್ರ ಇದೆ.

ಕೆಎಲ್‌ ರಾಹುಲ್‌ 62 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ವಿಶ್ವಕಪ್‌ ಇತಿಹಾಸದಲ್ಲಿ ಅತಿ ವೇಗವಾಗಿ ಶತಕ ಬಾರಿಸಿದ ಭಾರತೀಯ ಬ್ಯಾಟ್ಸ್‌ಮನ್‌ ಎಂಬ ದಾಖಲೆ ಬರೆದಿದ್ದಾರೆ

ರೋಹಿತ್‌ ಶರ್ಮಾ ಈ ವರ್ಷ 60 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ವರ್ಷವೊಂದರಲ್ಲಿ ಅತಿಹೆಚ್ಚು ಸಿಕ್ಸರ್‌ ಬಾರಿಸಿದ ಬ್ಯಾಟ್ಸ್‌ಮನ್‌ ಎಂಬ ವಿಶ್ವ ದಾಖಲೆ ಬರೆದಿದ್ದಾರೆ. ಈ ಹಿಂದೆ ಎಬಿ ಡಿವಿಲಿಯರ್ಸ್‌ ವರ್ಷವೊಂದರಲ್ಲಿ 58 ಸಿಕ್ಸರ್‌ ಬಾರಿಸಿದ ದಾಖಲೆ ಬರೆದಿದ್ದರು

ವಿಶ್ವಕಪ್‌ನಲ್ಲಿ ಭಾರತದ ಪರ ಅತಿಹೆಚ್ಚು ರನ್‌ ಬಾರಿಸಿದ ವಿಕೆಟ್‌ ಕೀಪರ್‌ ಎಂಬ ದಾಖಲೆ ಬರೆದ ಕೆಎಲ್‌ ರಾಹುಲ್‌.

ನೆದರ್‌ಲ್ಯಾಂಡ್‌ ವಿರುದ್ಧದ ಪಂದ್ಯದಲ್ಲಿ ಮತ್ತೊಂದು ಶತಕ ಬಾರಿಸಿರುವ ಹಿಟ್‌ ಮ್ಯಾನ್‌ ವರ್ಲ್ಡ್‌ ಕಪ್‌ ಟೂರ್ನಿಯೊಂದರಲ್ಲಿ ಸತತ ಎರಡು ಬಾರಿ 500ರನ್‌ ದಾಖಲಿಸಿದ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಈ ದಾಖಲೆಯನ್ನು ರೋಹಿತ್‌ ಶರ್ಮಾ 2019 ಮತ್ತು 2023 ರಲ್ಲಿ 500+ ರನ್‌ ಬಾರಿಸಿದ್ದಾರೆ.  ಈ ಹಿಂದೆ ಸಚಿನ್‌ ತೆಂಡುಲ್ಕರ್‌ ಅವರು 1996 ಮತ್ತು 2003 ರಲ್ಲಿ 500ಕ್ಕೂ ಅಧಿಕ ರನ್‌ ಬಾರಿಸಿದ್ದು ಈವರೆಗಿನ ದಾಖಲೆಯಾಗಿತ್ತು.

andolanait

Recent Posts

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

2 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

2 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಮೂಳೆಗಳು ಮುರಿಯುತ್ತಿದ್ದರೂ ಬದುಕು ಕಟ್ಟಿಕೊಂಡ ರಾಧಿಕಾ

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…

2 hours ago

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

2 hours ago