ಕ್ರೀಡೆ

ಬಾಜ್’ಬಾಲ್ ಗೆ ಭಾರತದ ಹೊಸ ಅಸ್ತ್ರ: ದಾಖಲೆ ಬರೆದ ಟೀಂ ಇಂಡಿಯಾ

ಪೋರ್ಟ್ ಆಫ್ ಸ್ಪೇನ್: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಸಂಪೂರ್ಣ ಹಿಡಿತ ಸಾಧಿಸಿರುವ ಟೀಂ ಇಂಡಿಯಾ ಹೊಸ ಬ್ಯಾಟಿಂಗ್ ದಾಖಲೆ ಬರೆದಿದೆ.

ಎರಡನೇ ಇನ್ನಿಂಗ್ಸ್ ನಲ್ಲಿ ವೇಗವಾಗಿ ಬ್ಯಾಟಿಂಗ್ ಬೀಸಿದ ಭಾರತ ತಂಡ ಟೆಸ್ಟ್ ಕ್ರಿಕೆಟ್ ನಲ್ಲಿ ನೂತನ ಸಾಧನೆ ಮಾಡಿದೆ.ಕನಿಷ್ಠ 20 ಓವರ್‌ ಗಳ ಟೆಸ್ಟ್ ಇನ್ನಿಂಗ್ಸ್‌ ನಲ್ಲಿ ಅತಿ ಹೆಚ್ಚು ತಂಡದ ರನ್-ರೇಟ್ ಹೊಂದಿರುವ ತಂಡ ಎಂಬ ದಾಖಲೆಗೆ ಟೀಂ ಇಂಡಿಯಾ ಪಾತ್ರವಾಯಿತು.

ಕನಿಷ್ಠ 20 ಓವರ್‌ ಗಳ ಟೆಸ್ಟ್ ಇನ್ನಿಂಗ್ಸ್‌ ನಲ್ಲಿ ಅತಿ ಹೆಚ್ಚು ತಂಡದ ರನ್-ರೇಟ್ ಹೊಂದಿರುವ ತಂಡ ಎಂಬ ದಾಖಲೆಗೆ ಟೀಂ ಇಂಡಿಯಾ ಪಾತ್ರವಾಯಿತು.

ಆಕ್ರಮಣಕಾರಿ ಆಟದಿಂದ ಹೊಸ ‘ಬಾಜ್‌ಬಾಲ್’ ಕ್ರಿಕೆಟ್ ಆರಂಭಿಸಿರುವ ಇಂಗ್ಲೆಂಡ್ ಸದ್ಯ ಕ್ರಿಕೆಟ್ ಪ್ರಿಯರನ್ನು ಸೆಳೆಯುತ್ತಿದ್ದರೆ, ಭಾರತೀಯ ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ಅವರ ‘ದ್ರಾವ್‌ಬಾಲ್’ ನ ಮೊದಲ ಪ್ರದರ್ಶನ ಭಾರತೀಯ ಕ್ರಿಕೆಟ್ ಗೆ ಹೊಸ ಸಾಧ್ಯತೆಗಳನ್ನು ತೆರೆದಿದೆ.

ಎರಡನೇ ಇನ್ನಿಂಗ್ಸ್ ಆಟವನ್ನು ಟಿ20 ಮಾದರಿಯಲ್ಲಿ ಆಡಲಾರಂಭಿಸಿದ ಟೀಂ ಇಂಡಿಯಾ ಕೇವಲ 24 ಓವರ್ ಗಳಲ್ಲಿ 181 ರನ್ ಕಲೆಹಾಕಿ ಡಿಕ್ಲೇರ್ ಮಾಡಿತು. ಭಾರತವು 7.54 ರನ್ ರೇಟ್‌ ನಲ್ಲಿ ರನ್‌ ಗಳನ್ನು ಗಳಿಸಿತು. ಕನಿಷ್ಠ 20 ಓವರ್‌ ಗಳ ಇನ್ನಿಂಗ್ಸ್‌ ನಲ್ಲಿ ತಂಡವೊಂದು ಟೆಸ್ಟ್‌ ನಲ್ಲಿ ಗರಿಷ್ಠ ಮೊತ್ತವಾಗಿದೆ.

ಈ ವೇಳೆ ಭಾರತವು 2017 ರಲ್ಲಿ ಸಿಡ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಕೇವಲ 32 ಓವರ್‌ ಗಳಲ್ಲಿ 241/2 ಗಳಿಸಿದ್ದ ಆಸ್ಟ್ರೇಲಿಯಾದ ದಾಖಲೆಯನ್ನು ಮುರಿದರು. ಆಸೀಸ್ ಈ ರನ್‌ ಗಳನ್ನು 7.53 ರನ್ ರೇಟ್‌ನಲ್ಲಿ ಗಳಿಸಿತ್ತು.

ಗಮನಾರ್ಹವೆಂದರೆ, ಭಾರತ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ವೇಗದ ಶತಕ ಗಳಿಸಿತು. ಮೊದಲ ವಿಕೆಟ್ ಗೆ ನಾಯಕ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಕೇವಲ 71 ಎಸೆತಗಳಲ್ಲಿ 98 ರನ್ ಗಳಿಸಿದರು. ರೋಹಿತ್ ಔಟಾದ ನಂತರ ಭಾರತ ಕೇವಲ 12.2 ಓವರ್‌ಗಳಲ್ಲಿ 100 ರನ್‌ಗಳ ಗಡಿಯನ್ನು ತಲುಪಿತು, ಅಂದರೆ ಒಟ್ಟು 74 ಎಸೆತಗಳಲ್ಲಿ.

ಯಶಸ್ವಿ ಜೈಸ್ವಾಲ್ 38 ರನ್, ನಾಯಕ ರೋಹಿತ್ 57 ರನ್ ಮಾಡಿದರು. ಶುಭ್ಮನ್ ಗಿಲ್ 29 ರನ್ ಮತ್ತು ಇಶಾನ್ ಕಿಶನ್ ಕೇವಲ 34 ಎಸೆತದಲ್ಲಿ ಅಜೇಯ 52 ರನ್ ಮಾಡಿದರು.

andolanait

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

2 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

2 hours ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

2 hours ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

2 hours ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

2 hours ago