ಪೋರ್ಟ್ ಆಫ್ ಸ್ಪೇನ್: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಸಂಪೂರ್ಣ ಹಿಡಿತ ಸಾಧಿಸಿರುವ ಟೀಂ ಇಂಡಿಯಾ ಹೊಸ ಬ್ಯಾಟಿಂಗ್ ದಾಖಲೆ ಬರೆದಿದೆ.
ಎರಡನೇ ಇನ್ನಿಂಗ್ಸ್ ನಲ್ಲಿ ವೇಗವಾಗಿ ಬ್ಯಾಟಿಂಗ್ ಬೀಸಿದ ಭಾರತ ತಂಡ ಟೆಸ್ಟ್ ಕ್ರಿಕೆಟ್ ನಲ್ಲಿ ನೂತನ ಸಾಧನೆ ಮಾಡಿದೆ.ಕನಿಷ್ಠ 20 ಓವರ್ ಗಳ ಟೆಸ್ಟ್ ಇನ್ನಿಂಗ್ಸ್ ನಲ್ಲಿ ಅತಿ ಹೆಚ್ಚು ತಂಡದ ರನ್-ರೇಟ್ ಹೊಂದಿರುವ ತಂಡ ಎಂಬ ದಾಖಲೆಗೆ ಟೀಂ ಇಂಡಿಯಾ ಪಾತ್ರವಾಯಿತು.
ಕನಿಷ್ಠ 20 ಓವರ್ ಗಳ ಟೆಸ್ಟ್ ಇನ್ನಿಂಗ್ಸ್ ನಲ್ಲಿ ಅತಿ ಹೆಚ್ಚು ತಂಡದ ರನ್-ರೇಟ್ ಹೊಂದಿರುವ ತಂಡ ಎಂಬ ದಾಖಲೆಗೆ ಟೀಂ ಇಂಡಿಯಾ ಪಾತ್ರವಾಯಿತು.
ಆಕ್ರಮಣಕಾರಿ ಆಟದಿಂದ ಹೊಸ ‘ಬಾಜ್ಬಾಲ್’ ಕ್ರಿಕೆಟ್ ಆರಂಭಿಸಿರುವ ಇಂಗ್ಲೆಂಡ್ ಸದ್ಯ ಕ್ರಿಕೆಟ್ ಪ್ರಿಯರನ್ನು ಸೆಳೆಯುತ್ತಿದ್ದರೆ, ಭಾರತೀಯ ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ಅವರ ‘ದ್ರಾವ್ಬಾಲ್’ ನ ಮೊದಲ ಪ್ರದರ್ಶನ ಭಾರತೀಯ ಕ್ರಿಕೆಟ್ ಗೆ ಹೊಸ ಸಾಧ್ಯತೆಗಳನ್ನು ತೆರೆದಿದೆ.
ಎರಡನೇ ಇನ್ನಿಂಗ್ಸ್ ಆಟವನ್ನು ಟಿ20 ಮಾದರಿಯಲ್ಲಿ ಆಡಲಾರಂಭಿಸಿದ ಟೀಂ ಇಂಡಿಯಾ ಕೇವಲ 24 ಓವರ್ ಗಳಲ್ಲಿ 181 ರನ್ ಕಲೆಹಾಕಿ ಡಿಕ್ಲೇರ್ ಮಾಡಿತು. ಭಾರತವು 7.54 ರನ್ ರೇಟ್ ನಲ್ಲಿ ರನ್ ಗಳನ್ನು ಗಳಿಸಿತು. ಕನಿಷ್ಠ 20 ಓವರ್ ಗಳ ಇನ್ನಿಂಗ್ಸ್ ನಲ್ಲಿ ತಂಡವೊಂದು ಟೆಸ್ಟ್ ನಲ್ಲಿ ಗರಿಷ್ಠ ಮೊತ್ತವಾಗಿದೆ.
ಈ ವೇಳೆ ಭಾರತವು 2017 ರಲ್ಲಿ ಸಿಡ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಕೇವಲ 32 ಓವರ್ ಗಳಲ್ಲಿ 241/2 ಗಳಿಸಿದ್ದ ಆಸ್ಟ್ರೇಲಿಯಾದ ದಾಖಲೆಯನ್ನು ಮುರಿದರು. ಆಸೀಸ್ ಈ ರನ್ ಗಳನ್ನು 7.53 ರನ್ ರೇಟ್ನಲ್ಲಿ ಗಳಿಸಿತ್ತು.
ಗಮನಾರ್ಹವೆಂದರೆ, ಭಾರತ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ವೇಗದ ಶತಕ ಗಳಿಸಿತು. ಮೊದಲ ವಿಕೆಟ್ ಗೆ ನಾಯಕ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಕೇವಲ 71 ಎಸೆತಗಳಲ್ಲಿ 98 ರನ್ ಗಳಿಸಿದರು. ರೋಹಿತ್ ಔಟಾದ ನಂತರ ಭಾರತ ಕೇವಲ 12.2 ಓವರ್ಗಳಲ್ಲಿ 100 ರನ್ಗಳ ಗಡಿಯನ್ನು ತಲುಪಿತು, ಅಂದರೆ ಒಟ್ಟು 74 ಎಸೆತಗಳಲ್ಲಿ.
ಯಶಸ್ವಿ ಜೈಸ್ವಾಲ್ 38 ರನ್, ನಾಯಕ ರೋಹಿತ್ 57 ರನ್ ಮಾಡಿದರು. ಶುಭ್ಮನ್ ಗಿಲ್ 29 ರನ್ ಮತ್ತು ಇಶಾನ್ ಕಿಶನ್ ಕೇವಲ 34 ಎಸೆತದಲ್ಲಿ ಅಜೇಯ 52 ರನ್ ಮಾಡಿದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…