ಕ್ರೀಡೆ

ಬಾಜ್’ಬಾಲ್ ಗೆ ಭಾರತದ ಹೊಸ ಅಸ್ತ್ರ: ದಾಖಲೆ ಬರೆದ ಟೀಂ ಇಂಡಿಯಾ

ಪೋರ್ಟ್ ಆಫ್ ಸ್ಪೇನ್: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಸಂಪೂರ್ಣ ಹಿಡಿತ ಸಾಧಿಸಿರುವ ಟೀಂ ಇಂಡಿಯಾ ಹೊಸ ಬ್ಯಾಟಿಂಗ್ ದಾಖಲೆ ಬರೆದಿದೆ.

ಎರಡನೇ ಇನ್ನಿಂಗ್ಸ್ ನಲ್ಲಿ ವೇಗವಾಗಿ ಬ್ಯಾಟಿಂಗ್ ಬೀಸಿದ ಭಾರತ ತಂಡ ಟೆಸ್ಟ್ ಕ್ರಿಕೆಟ್ ನಲ್ಲಿ ನೂತನ ಸಾಧನೆ ಮಾಡಿದೆ.ಕನಿಷ್ಠ 20 ಓವರ್‌ ಗಳ ಟೆಸ್ಟ್ ಇನ್ನಿಂಗ್ಸ್‌ ನಲ್ಲಿ ಅತಿ ಹೆಚ್ಚು ತಂಡದ ರನ್-ರೇಟ್ ಹೊಂದಿರುವ ತಂಡ ಎಂಬ ದಾಖಲೆಗೆ ಟೀಂ ಇಂಡಿಯಾ ಪಾತ್ರವಾಯಿತು.

ಕನಿಷ್ಠ 20 ಓವರ್‌ ಗಳ ಟೆಸ್ಟ್ ಇನ್ನಿಂಗ್ಸ್‌ ನಲ್ಲಿ ಅತಿ ಹೆಚ್ಚು ತಂಡದ ರನ್-ರೇಟ್ ಹೊಂದಿರುವ ತಂಡ ಎಂಬ ದಾಖಲೆಗೆ ಟೀಂ ಇಂಡಿಯಾ ಪಾತ್ರವಾಯಿತು.

ಆಕ್ರಮಣಕಾರಿ ಆಟದಿಂದ ಹೊಸ ‘ಬಾಜ್‌ಬಾಲ್’ ಕ್ರಿಕೆಟ್ ಆರಂಭಿಸಿರುವ ಇಂಗ್ಲೆಂಡ್ ಸದ್ಯ ಕ್ರಿಕೆಟ್ ಪ್ರಿಯರನ್ನು ಸೆಳೆಯುತ್ತಿದ್ದರೆ, ಭಾರತೀಯ ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ಅವರ ‘ದ್ರಾವ್‌ಬಾಲ್’ ನ ಮೊದಲ ಪ್ರದರ್ಶನ ಭಾರತೀಯ ಕ್ರಿಕೆಟ್ ಗೆ ಹೊಸ ಸಾಧ್ಯತೆಗಳನ್ನು ತೆರೆದಿದೆ.

ಎರಡನೇ ಇನ್ನಿಂಗ್ಸ್ ಆಟವನ್ನು ಟಿ20 ಮಾದರಿಯಲ್ಲಿ ಆಡಲಾರಂಭಿಸಿದ ಟೀಂ ಇಂಡಿಯಾ ಕೇವಲ 24 ಓವರ್ ಗಳಲ್ಲಿ 181 ರನ್ ಕಲೆಹಾಕಿ ಡಿಕ್ಲೇರ್ ಮಾಡಿತು. ಭಾರತವು 7.54 ರನ್ ರೇಟ್‌ ನಲ್ಲಿ ರನ್‌ ಗಳನ್ನು ಗಳಿಸಿತು. ಕನಿಷ್ಠ 20 ಓವರ್‌ ಗಳ ಇನ್ನಿಂಗ್ಸ್‌ ನಲ್ಲಿ ತಂಡವೊಂದು ಟೆಸ್ಟ್‌ ನಲ್ಲಿ ಗರಿಷ್ಠ ಮೊತ್ತವಾಗಿದೆ.

ಈ ವೇಳೆ ಭಾರತವು 2017 ರಲ್ಲಿ ಸಿಡ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಕೇವಲ 32 ಓವರ್‌ ಗಳಲ್ಲಿ 241/2 ಗಳಿಸಿದ್ದ ಆಸ್ಟ್ರೇಲಿಯಾದ ದಾಖಲೆಯನ್ನು ಮುರಿದರು. ಆಸೀಸ್ ಈ ರನ್‌ ಗಳನ್ನು 7.53 ರನ್ ರೇಟ್‌ನಲ್ಲಿ ಗಳಿಸಿತ್ತು.

ಗಮನಾರ್ಹವೆಂದರೆ, ಭಾರತ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ವೇಗದ ಶತಕ ಗಳಿಸಿತು. ಮೊದಲ ವಿಕೆಟ್ ಗೆ ನಾಯಕ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಕೇವಲ 71 ಎಸೆತಗಳಲ್ಲಿ 98 ರನ್ ಗಳಿಸಿದರು. ರೋಹಿತ್ ಔಟಾದ ನಂತರ ಭಾರತ ಕೇವಲ 12.2 ಓವರ್‌ಗಳಲ್ಲಿ 100 ರನ್‌ಗಳ ಗಡಿಯನ್ನು ತಲುಪಿತು, ಅಂದರೆ ಒಟ್ಟು 74 ಎಸೆತಗಳಲ್ಲಿ.

ಯಶಸ್ವಿ ಜೈಸ್ವಾಲ್ 38 ರನ್, ನಾಯಕ ರೋಹಿತ್ 57 ರನ್ ಮಾಡಿದರು. ಶುಭ್ಮನ್ ಗಿಲ್ 29 ರನ್ ಮತ್ತು ಇಶಾನ್ ಕಿಶನ್ ಕೇವಲ 34 ಎಸೆತದಲ್ಲಿ ಅಜೇಯ 52 ರನ್ ಮಾಡಿದರು.

andolanait

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

13 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

13 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

13 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

13 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

13 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

2 days ago