ಕ್ರೀಡೆ

ಬಾಜ್’ಬಾಲ್ ಗೆ ಭಾರತದ ಹೊಸ ಅಸ್ತ್ರ: ದಾಖಲೆ ಬರೆದ ಟೀಂ ಇಂಡಿಯಾ

ಪೋರ್ಟ್ ಆಫ್ ಸ್ಪೇನ್: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಸಂಪೂರ್ಣ ಹಿಡಿತ ಸಾಧಿಸಿರುವ ಟೀಂ ಇಂಡಿಯಾ ಹೊಸ ಬ್ಯಾಟಿಂಗ್ ದಾಖಲೆ ಬರೆದಿದೆ.

ಎರಡನೇ ಇನ್ನಿಂಗ್ಸ್ ನಲ್ಲಿ ವೇಗವಾಗಿ ಬ್ಯಾಟಿಂಗ್ ಬೀಸಿದ ಭಾರತ ತಂಡ ಟೆಸ್ಟ್ ಕ್ರಿಕೆಟ್ ನಲ್ಲಿ ನೂತನ ಸಾಧನೆ ಮಾಡಿದೆ.ಕನಿಷ್ಠ 20 ಓವರ್‌ ಗಳ ಟೆಸ್ಟ್ ಇನ್ನಿಂಗ್ಸ್‌ ನಲ್ಲಿ ಅತಿ ಹೆಚ್ಚು ತಂಡದ ರನ್-ರೇಟ್ ಹೊಂದಿರುವ ತಂಡ ಎಂಬ ದಾಖಲೆಗೆ ಟೀಂ ಇಂಡಿಯಾ ಪಾತ್ರವಾಯಿತು.

ಕನಿಷ್ಠ 20 ಓವರ್‌ ಗಳ ಟೆಸ್ಟ್ ಇನ್ನಿಂಗ್ಸ್‌ ನಲ್ಲಿ ಅತಿ ಹೆಚ್ಚು ತಂಡದ ರನ್-ರೇಟ್ ಹೊಂದಿರುವ ತಂಡ ಎಂಬ ದಾಖಲೆಗೆ ಟೀಂ ಇಂಡಿಯಾ ಪಾತ್ರವಾಯಿತು.

ಆಕ್ರಮಣಕಾರಿ ಆಟದಿಂದ ಹೊಸ ‘ಬಾಜ್‌ಬಾಲ್’ ಕ್ರಿಕೆಟ್ ಆರಂಭಿಸಿರುವ ಇಂಗ್ಲೆಂಡ್ ಸದ್ಯ ಕ್ರಿಕೆಟ್ ಪ್ರಿಯರನ್ನು ಸೆಳೆಯುತ್ತಿದ್ದರೆ, ಭಾರತೀಯ ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ಅವರ ‘ದ್ರಾವ್‌ಬಾಲ್’ ನ ಮೊದಲ ಪ್ರದರ್ಶನ ಭಾರತೀಯ ಕ್ರಿಕೆಟ್ ಗೆ ಹೊಸ ಸಾಧ್ಯತೆಗಳನ್ನು ತೆರೆದಿದೆ.

ಎರಡನೇ ಇನ್ನಿಂಗ್ಸ್ ಆಟವನ್ನು ಟಿ20 ಮಾದರಿಯಲ್ಲಿ ಆಡಲಾರಂಭಿಸಿದ ಟೀಂ ಇಂಡಿಯಾ ಕೇವಲ 24 ಓವರ್ ಗಳಲ್ಲಿ 181 ರನ್ ಕಲೆಹಾಕಿ ಡಿಕ್ಲೇರ್ ಮಾಡಿತು. ಭಾರತವು 7.54 ರನ್ ರೇಟ್‌ ನಲ್ಲಿ ರನ್‌ ಗಳನ್ನು ಗಳಿಸಿತು. ಕನಿಷ್ಠ 20 ಓವರ್‌ ಗಳ ಇನ್ನಿಂಗ್ಸ್‌ ನಲ್ಲಿ ತಂಡವೊಂದು ಟೆಸ್ಟ್‌ ನಲ್ಲಿ ಗರಿಷ್ಠ ಮೊತ್ತವಾಗಿದೆ.

ಈ ವೇಳೆ ಭಾರತವು 2017 ರಲ್ಲಿ ಸಿಡ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಕೇವಲ 32 ಓವರ್‌ ಗಳಲ್ಲಿ 241/2 ಗಳಿಸಿದ್ದ ಆಸ್ಟ್ರೇಲಿಯಾದ ದಾಖಲೆಯನ್ನು ಮುರಿದರು. ಆಸೀಸ್ ಈ ರನ್‌ ಗಳನ್ನು 7.53 ರನ್ ರೇಟ್‌ನಲ್ಲಿ ಗಳಿಸಿತ್ತು.

ಗಮನಾರ್ಹವೆಂದರೆ, ಭಾರತ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ವೇಗದ ಶತಕ ಗಳಿಸಿತು. ಮೊದಲ ವಿಕೆಟ್ ಗೆ ನಾಯಕ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಕೇವಲ 71 ಎಸೆತಗಳಲ್ಲಿ 98 ರನ್ ಗಳಿಸಿದರು. ರೋಹಿತ್ ಔಟಾದ ನಂತರ ಭಾರತ ಕೇವಲ 12.2 ಓವರ್‌ಗಳಲ್ಲಿ 100 ರನ್‌ಗಳ ಗಡಿಯನ್ನು ತಲುಪಿತು, ಅಂದರೆ ಒಟ್ಟು 74 ಎಸೆತಗಳಲ್ಲಿ.

ಯಶಸ್ವಿ ಜೈಸ್ವಾಲ್ 38 ರನ್, ನಾಯಕ ರೋಹಿತ್ 57 ರನ್ ಮಾಡಿದರು. ಶುಭ್ಮನ್ ಗಿಲ್ 29 ರನ್ ಮತ್ತು ಇಶಾನ್ ಕಿಶನ್ ಕೇವಲ 34 ಎಸೆತದಲ್ಲಿ ಅಜೇಯ 52 ರನ್ ಮಾಡಿದರು.

andolanait

Recent Posts

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

9 mins ago

ಮೈಸೂರಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಕಳ್ಳನನ್ನು ಹಿಡಿಯಲು ಹೋದ ಜನರಿಗೆ ಚಾಕು ತೋರಿಸಿ ಪರಾರಿಯಾಗಿರುವ ಘಟನೆ…

29 mins ago

ವಿನಯ್‌ ಕುಲಕರ್ಣಿ ಮೇಲ್ಮನವಿ ಅರ್ಜಿ ವಿಚಾರಣೆ ಸ್ವೀಕರಿಸಿದ ಹೈಕೋರ್ಟ್‌

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಶಾಸಕ…

47 mins ago

ಬೆಂಗಳೂರಿನ ಶ್ವಾಸತಾಣಗಳ ಸಂರಕ್ಷಣೆ, ಸಂವರ್ಧನೆಗೆ ಕ್ರಮ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪರಿಣಾಮ ತಗ್ಗಿಸಲು ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ ರೂಪಿಸಲಾಗಿದ್ದು, ಇದರ…

55 mins ago

ಹನೂರು: ಪಿ.ಜಿ.ಪಾಳ್ಯ ಸಫಾರಿ ವೇಳೆ ಅಪರೂಪದ ಕರಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರು ಫುಲ್‌ ಖುಷ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ವನ್ಯಧಾಮದ ಪಿ.ಜಿ.ಪಾಳ್ಯ ವಲಯ ವ್ಯಾಪ್ತಿಯಲ್ಲಿ ಸಫಾರಿ ವೇಳೆ…

1 hour ago

ಪಹಲ್ಗಾಮ್‌ ಮಾದರಿ ದಾಳಿ: ಇಬ್ಬರು ಹಿಂದೂಗಳಿಗೆ ಚಾಕು ಇರಿದ ದುಷ್ಕರ್ಮಿ

ಮುಂಬೈ: ನಿಮ್ಮ ಧರ್ಮ ಯಾವುದು ಎಂದು ಕೇಳಿ ಇಬ್ಬರು ಭದ್ರತಾ ಸಿಬ್ಬಂದಿಗಳಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ದೇಶದ ವಾಣಿಜ್ಯ…

2 hours ago