ನವದೆಹಲಿ: ಉದ್ಧೀಪನ ಮದ್ದು ಪರೀಕ್ಷೆಯಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಭಾರತದ ಸ್ಟಾರ್ ಜಿಮ್ನಾಸ್ಟ್ ದೀಪಾ ಕರ್ಮಾಕರ್ ಅವರಿಗೆ 21 ತಿಂಗಳ ಕಾಲ ನಿಷೇಧ ಹೇರಲಾಗಿದೆ.
ಕಳೆದ ವರ್ಷ ಮಾಡಲಾಗಿದ್ದ ಅವರ ಅಮಾನತು, ಉದ್ಧೀಪನ ಮದ್ದು ಅಪರಾಧಕ್ಕೆ ಸಂಬಂಧಿಸಿದ್ದಲ್ಲ ಎಂದು ಭಾರತೀಯ ಅಧಿಕಾರಿಗಳು ನೀಡಿದ್ದ ಹೇಳಿಕೆಗಳಿಗೆ ಈ ಆದೇಶ ವ್ಯತಿರಿಕ್ತವಾಗಿದೆ.
ಅಂತರರಾಷ್ಟ್ರೀಯ ಜಿಮ್ನಾಸ್ಟಿಕ್ಸ್ ಫೆಡರೇಶನ್ (ಎಫ್ಐಜಿ)ನ ಡೋಪಿಂಗ್ ವಿರೋಧಿ ಚಟುವಟಿಕೆಗಳನ್ನು ನಿರ್ವಹಿಸುವ ಸ್ವತಂತ್ರ ಸಂಸ್ಥೆ ಅಂತರರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಐಟಿಎ) ಸಂಗ್ರಹಿಸಿದ್ದ, ಕರ್ಮಾಕರ್ ಅವರ ಪ್ರಯೋಗಾಲಯ ಮಾದರಿಯಲ್ಲಿ ಕಂಡುಬಂದಿರುವ ‘ಹೈಜೆನಾಮೈನ್’ ಅಂಶವು ವಿಶ್ವ ಉದ್ದೀಪನ ವಿರೋಧಿ ಸಂಸ್ಥೆಯ ನೀಯಮಗಳ ಅಡಿಯಲ್ಲಿ ನಿಷೇಧಿಸಲ್ಪಟ್ಟಿರುವುದಾಗಿದೆ.
ದೀಪಾ ಅವರ ನಿಷೇಧದ ಅವಧಿಯು ಇದೇ ವರ್ಷ ಜುಲೈ 10ಕ್ಕೆ ಮುಕ್ತಾಯಗೊಳ್ಳಲಿದೆ. ಉದ್ದೀಪನ ಮದ್ದು ಪರೀಕ್ಷೆ ಮಾದರಿ ಸಂಗ್ರಹಿಸಿದ ದಿನದಿಂದ ನಿಷೇಧವನ್ನು ಅನ್ವಯಿಸಲಾಗಿದೆ.
‘ದೀಪಾ ಅವರ ಉದ್ದೀಪನ ಮದ್ದು ಪರೀಕ್ಷೆಯಲ್ಲಿ ಹೈಜೆನಾಮೈನ್ ಪತ್ತೆಯಾಗಿರುವ ಕಾರಣ ಅವರನ್ನು 21 ತಿಂಗಳ ಅವಧಿಗೆ ಅಮಾನತುಗೊಳಿಸಲಾಗಿದೆ ಎಂದು ಐಟಿಎ ದೃಢಪಡಿಸುತ್ತದೆ, ಇದು 10 ಜುಲೈ 2023ರವರೆಗೆ ಅನ್ವಯವಾಗುತ್ತದೆ’ಎಂದು ಐಟಿಎ ಶುಕ್ರವಾರ ತಡರಾತ್ರಿ ಹೇಳಿಕೆಯಲ್ಲಿ ತಿಳಿಸಿದೆ.
ಸ್ವಿಟ್ಜರ್ಲೆಂಡ್ ಮೂಲದ ಐಟಿಎ, ಆದಾಯ ರಹಿತ ಸಂಘಟನೆಯಾಗಿದ್ದು, ವಾಡಾ ಮತ್ತು ಅಂತರರಾಷ್ಟ್ರೀಯ ಒಲಿಪಿಂಕ್ ಸಮಿತಿಯ ಕಣ್ಗಾವಲಿನಲ್ಲಿ ವಿವಿಧ ಅಂತರರಾಷ್ಟ್ರೀಯ ಕ್ರೀಡಾ ಫೆಡರೇಶನ್ಗಳಿಗೆ ಉದ್ಧಿಪನಾ ಮದ್ದು ವಿರೋಧಿ ಕಾರ್ಯಕ್ರಮಗಳ ಜಾರಿಗಾಗಿ ಕೆಲಸ ಮಾಡುತ್ತದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…