ನವದೆಹಲಿ: ಉದ್ಧೀಪನ ಮದ್ದು ಪರೀಕ್ಷೆಯಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಭಾರತದ ಸ್ಟಾರ್ ಜಿಮ್ನಾಸ್ಟ್ ದೀಪಾ ಕರ್ಮಾಕರ್ ಅವರಿಗೆ 21 ತಿಂಗಳ ಕಾಲ ನಿಷೇಧ ಹೇರಲಾಗಿದೆ.
ಕಳೆದ ವರ್ಷ ಮಾಡಲಾಗಿದ್ದ ಅವರ ಅಮಾನತು, ಉದ್ಧೀಪನ ಮದ್ದು ಅಪರಾಧಕ್ಕೆ ಸಂಬಂಧಿಸಿದ್ದಲ್ಲ ಎಂದು ಭಾರತೀಯ ಅಧಿಕಾರಿಗಳು ನೀಡಿದ್ದ ಹೇಳಿಕೆಗಳಿಗೆ ಈ ಆದೇಶ ವ್ಯತಿರಿಕ್ತವಾಗಿದೆ.
ಅಂತರರಾಷ್ಟ್ರೀಯ ಜಿಮ್ನಾಸ್ಟಿಕ್ಸ್ ಫೆಡರೇಶನ್ (ಎಫ್ಐಜಿ)ನ ಡೋಪಿಂಗ್ ವಿರೋಧಿ ಚಟುವಟಿಕೆಗಳನ್ನು ನಿರ್ವಹಿಸುವ ಸ್ವತಂತ್ರ ಸಂಸ್ಥೆ ಅಂತರರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಐಟಿಎ) ಸಂಗ್ರಹಿಸಿದ್ದ, ಕರ್ಮಾಕರ್ ಅವರ ಪ್ರಯೋಗಾಲಯ ಮಾದರಿಯಲ್ಲಿ ಕಂಡುಬಂದಿರುವ ‘ಹೈಜೆನಾಮೈನ್’ ಅಂಶವು ವಿಶ್ವ ಉದ್ದೀಪನ ವಿರೋಧಿ ಸಂಸ್ಥೆಯ ನೀಯಮಗಳ ಅಡಿಯಲ್ಲಿ ನಿಷೇಧಿಸಲ್ಪಟ್ಟಿರುವುದಾಗಿದೆ.
ದೀಪಾ ಅವರ ನಿಷೇಧದ ಅವಧಿಯು ಇದೇ ವರ್ಷ ಜುಲೈ 10ಕ್ಕೆ ಮುಕ್ತಾಯಗೊಳ್ಳಲಿದೆ. ಉದ್ದೀಪನ ಮದ್ದು ಪರೀಕ್ಷೆ ಮಾದರಿ ಸಂಗ್ರಹಿಸಿದ ದಿನದಿಂದ ನಿಷೇಧವನ್ನು ಅನ್ವಯಿಸಲಾಗಿದೆ.
‘ದೀಪಾ ಅವರ ಉದ್ದೀಪನ ಮದ್ದು ಪರೀಕ್ಷೆಯಲ್ಲಿ ಹೈಜೆನಾಮೈನ್ ಪತ್ತೆಯಾಗಿರುವ ಕಾರಣ ಅವರನ್ನು 21 ತಿಂಗಳ ಅವಧಿಗೆ ಅಮಾನತುಗೊಳಿಸಲಾಗಿದೆ ಎಂದು ಐಟಿಎ ದೃಢಪಡಿಸುತ್ತದೆ, ಇದು 10 ಜುಲೈ 2023ರವರೆಗೆ ಅನ್ವಯವಾಗುತ್ತದೆ’ಎಂದು ಐಟಿಎ ಶುಕ್ರವಾರ ತಡರಾತ್ರಿ ಹೇಳಿಕೆಯಲ್ಲಿ ತಿಳಿಸಿದೆ.
ಸ್ವಿಟ್ಜರ್ಲೆಂಡ್ ಮೂಲದ ಐಟಿಎ, ಆದಾಯ ರಹಿತ ಸಂಘಟನೆಯಾಗಿದ್ದು, ವಾಡಾ ಮತ್ತು ಅಂತರರಾಷ್ಟ್ರೀಯ ಒಲಿಪಿಂಕ್ ಸಮಿತಿಯ ಕಣ್ಗಾವಲಿನಲ್ಲಿ ವಿವಿಧ ಅಂತರರಾಷ್ಟ್ರೀಯ ಕ್ರೀಡಾ ಫೆಡರೇಶನ್ಗಳಿಗೆ ಉದ್ಧಿಪನಾ ಮದ್ದು ವಿರೋಧಿ ಕಾರ್ಯಕ್ರಮಗಳ ಜಾರಿಗಾಗಿ ಕೆಲಸ ಮಾಡುತ್ತದೆ.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…