ಕ್ರೀಡೆ

ಭಾರತದ ಸ್ಟಾರ್ ಜಿಮ್ನಾಸ್ಟ್ ದೀಪಾ ಕರ್ಮಾಕರ್‌ಗೆ 21 ತಿಂಗಳ ಕಾಲ ನಿಷೇಧ

ನವದೆಹಲಿ: ಉದ್ಧೀಪನ ಮದ್ದು ಪರೀಕ್ಷೆಯಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಭಾರತದ ಸ್ಟಾರ್ ಜಿಮ್ನಾಸ್ಟ್ ದೀಪಾ ಕರ್ಮಾಕರ್ ಅವರಿಗೆ 21 ತಿಂಗಳ ಕಾಲ ನಿಷೇಧ ಹೇರಲಾಗಿದೆ.

ಕಳೆದ ವರ್ಷ ಮಾಡಲಾಗಿದ್ದ ಅವರ ಅಮಾನತು, ಉದ್ಧೀಪನ ಮದ್ದು ಅಪರಾಧಕ್ಕೆ ಸಂಬಂಧಿಸಿದ್ದಲ್ಲ ಎಂದು ಭಾರತೀಯ ಅಧಿಕಾರಿಗಳು ನೀಡಿದ್ದ ಹೇಳಿಕೆಗಳಿಗೆ ಈ ಆದೇಶ ವ್ಯತಿರಿಕ್ತವಾಗಿದೆ.

ಅಂತರರಾಷ್ಟ್ರೀಯ ಜಿಮ್ನಾಸ್ಟಿಕ್ಸ್ ಫೆಡರೇಶನ್ (ಎಫ್‌ಐಜಿ)ನ ಡೋಪಿಂಗ್ ವಿರೋಧಿ ಚಟುವಟಿಕೆಗಳನ್ನು ನಿರ್ವಹಿಸುವ ಸ್ವತಂತ್ರ ಸಂಸ್ಥೆ ಅಂತರರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಐಟಿಎ) ಸಂಗ್ರಹಿಸಿದ್ದ, ಕರ್ಮಾಕರ್ ಅವರ ಪ್ರಯೋಗಾಲಯ ಮಾದರಿಯಲ್ಲಿ ಕಂಡುಬಂದಿರುವ ‘ಹೈಜೆನಾಮೈನ್’ ಅಂಶವು ವಿಶ್ವ ಉದ್ದೀಪನ ವಿರೋಧಿ ಸಂಸ್ಥೆಯ ನೀಯಮಗಳ ಅಡಿಯಲ್ಲಿ ನಿಷೇಧಿಸಲ್ಪಟ್ಟಿರುವುದಾಗಿದೆ.

ದೀಪಾ ಅವರ ನಿಷೇಧದ ಅವಧಿಯು ಇದೇ ವರ್ಷ ಜುಲೈ 10ಕ್ಕೆ ಮುಕ್ತಾಯಗೊಳ್ಳಲಿದೆ. ಉದ್ದೀಪನ ಮದ್ದು ಪರೀಕ್ಷೆ ಮಾದರಿ ಸಂಗ್ರಹಿಸಿದ ದಿನದಿಂದ ನಿಷೇಧವನ್ನು ಅನ್ವಯಿಸಲಾಗಿದೆ.

‘ದೀಪಾ ಅವರ ಉದ್ದೀಪನ ಮದ್ದು ಪರೀಕ್ಷೆಯಲ್ಲಿ ಹೈಜೆನಾಮೈನ್ ಪತ್ತೆಯಾಗಿರುವ ಕಾರಣ ಅವರನ್ನು 21 ತಿಂಗಳ ಅವಧಿಗೆ ಅಮಾನತುಗೊಳಿಸಲಾಗಿದೆ ಎಂದು ಐಟಿಎ ದೃಢಪಡಿಸುತ್ತದೆ, ಇದು 10 ಜುಲೈ 2023ರವರೆಗೆ ಅನ್ವಯವಾಗುತ್ತದೆ’ಎಂದು ಐಟಿಎ ಶುಕ್ರವಾರ ತಡರಾತ್ರಿ ಹೇಳಿಕೆಯಲ್ಲಿ ತಿಳಿಸಿದೆ.

ಸ್ವಿಟ್ಜರ್‌ಲೆಂಡ್ ಮೂಲದ ಐಟಿಎ, ಆದಾಯ ರಹಿತ ಸಂಘಟನೆಯಾಗಿದ್ದು, ವಾಡಾ ಮತ್ತು ಅಂತರರಾಷ್ಟ್ರೀಯ ಒಲಿಪಿಂಕ್ ಸಮಿತಿಯ ಕಣ್ಗಾವಲಿನಲ್ಲಿ ವಿವಿಧ ಅಂತರರಾಷ್ಟ್ರೀಯ ಕ್ರೀಡಾ ಫೆಡರೇಶನ್‌ಗಳಿಗೆ ಉದ್ಧಿಪನಾ ಮದ್ದು ವಿರೋಧಿ ಕಾರ್ಯಕ್ರಮಗಳ ಜಾರಿಗಾಗಿ ಕೆಲಸ ಮಾಡುತ್ತದೆ.

andolanait

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

2 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

2 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

2 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

2 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

2 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

2 hours ago