ಕ್ರೀಡೆ

ಭಾರತದ ಸ್ಟಾರ್ ಜಿಮ್ನಾಸ್ಟ್ ದೀಪಾ ಕರ್ಮಾಕರ್‌ಗೆ 21 ತಿಂಗಳ ಕಾಲ ನಿಷೇಧ

ನವದೆಹಲಿ: ಉದ್ಧೀಪನ ಮದ್ದು ಪರೀಕ್ಷೆಯಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಭಾರತದ ಸ್ಟಾರ್ ಜಿಮ್ನಾಸ್ಟ್ ದೀಪಾ ಕರ್ಮಾಕರ್ ಅವರಿಗೆ 21 ತಿಂಗಳ ಕಾಲ ನಿಷೇಧ ಹೇರಲಾಗಿದೆ.

ಕಳೆದ ವರ್ಷ ಮಾಡಲಾಗಿದ್ದ ಅವರ ಅಮಾನತು, ಉದ್ಧೀಪನ ಮದ್ದು ಅಪರಾಧಕ್ಕೆ ಸಂಬಂಧಿಸಿದ್ದಲ್ಲ ಎಂದು ಭಾರತೀಯ ಅಧಿಕಾರಿಗಳು ನೀಡಿದ್ದ ಹೇಳಿಕೆಗಳಿಗೆ ಈ ಆದೇಶ ವ್ಯತಿರಿಕ್ತವಾಗಿದೆ.

ಅಂತರರಾಷ್ಟ್ರೀಯ ಜಿಮ್ನಾಸ್ಟಿಕ್ಸ್ ಫೆಡರೇಶನ್ (ಎಫ್‌ಐಜಿ)ನ ಡೋಪಿಂಗ್ ವಿರೋಧಿ ಚಟುವಟಿಕೆಗಳನ್ನು ನಿರ್ವಹಿಸುವ ಸ್ವತಂತ್ರ ಸಂಸ್ಥೆ ಅಂತರರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಐಟಿಎ) ಸಂಗ್ರಹಿಸಿದ್ದ, ಕರ್ಮಾಕರ್ ಅವರ ಪ್ರಯೋಗಾಲಯ ಮಾದರಿಯಲ್ಲಿ ಕಂಡುಬಂದಿರುವ ‘ಹೈಜೆನಾಮೈನ್’ ಅಂಶವು ವಿಶ್ವ ಉದ್ದೀಪನ ವಿರೋಧಿ ಸಂಸ್ಥೆಯ ನೀಯಮಗಳ ಅಡಿಯಲ್ಲಿ ನಿಷೇಧಿಸಲ್ಪಟ್ಟಿರುವುದಾಗಿದೆ.

ದೀಪಾ ಅವರ ನಿಷೇಧದ ಅವಧಿಯು ಇದೇ ವರ್ಷ ಜುಲೈ 10ಕ್ಕೆ ಮುಕ್ತಾಯಗೊಳ್ಳಲಿದೆ. ಉದ್ದೀಪನ ಮದ್ದು ಪರೀಕ್ಷೆ ಮಾದರಿ ಸಂಗ್ರಹಿಸಿದ ದಿನದಿಂದ ನಿಷೇಧವನ್ನು ಅನ್ವಯಿಸಲಾಗಿದೆ.

‘ದೀಪಾ ಅವರ ಉದ್ದೀಪನ ಮದ್ದು ಪರೀಕ್ಷೆಯಲ್ಲಿ ಹೈಜೆನಾಮೈನ್ ಪತ್ತೆಯಾಗಿರುವ ಕಾರಣ ಅವರನ್ನು 21 ತಿಂಗಳ ಅವಧಿಗೆ ಅಮಾನತುಗೊಳಿಸಲಾಗಿದೆ ಎಂದು ಐಟಿಎ ದೃಢಪಡಿಸುತ್ತದೆ, ಇದು 10 ಜುಲೈ 2023ರವರೆಗೆ ಅನ್ವಯವಾಗುತ್ತದೆ’ಎಂದು ಐಟಿಎ ಶುಕ್ರವಾರ ತಡರಾತ್ರಿ ಹೇಳಿಕೆಯಲ್ಲಿ ತಿಳಿಸಿದೆ.

ಸ್ವಿಟ್ಜರ್‌ಲೆಂಡ್ ಮೂಲದ ಐಟಿಎ, ಆದಾಯ ರಹಿತ ಸಂಘಟನೆಯಾಗಿದ್ದು, ವಾಡಾ ಮತ್ತು ಅಂತರರಾಷ್ಟ್ರೀಯ ಒಲಿಪಿಂಕ್ ಸಮಿತಿಯ ಕಣ್ಗಾವಲಿನಲ್ಲಿ ವಿವಿಧ ಅಂತರರಾಷ್ಟ್ರೀಯ ಕ್ರೀಡಾ ಫೆಡರೇಶನ್‌ಗಳಿಗೆ ಉದ್ಧಿಪನಾ ಮದ್ದು ವಿರೋಧಿ ಕಾರ್ಯಕ್ರಮಗಳ ಜಾರಿಗಾಗಿ ಕೆಲಸ ಮಾಡುತ್ತದೆ.

andolanait

Recent Posts

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

3 mins ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

12 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

4 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

4 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

4 hours ago

ಜೂ.28ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…

5 hours ago