ಕ್ರೀಡೆ

ಭಾರತದ ಸ್ಟಾರ್ ಜಿಮ್ನಾಸ್ಟ್ ದೀಪಾ ಕರ್ಮಾಕರ್‌ಗೆ 21 ತಿಂಗಳ ಕಾಲ ನಿಷೇಧ

ನವದೆಹಲಿ: ಉದ್ಧೀಪನ ಮದ್ದು ಪರೀಕ್ಷೆಯಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಭಾರತದ ಸ್ಟಾರ್ ಜಿಮ್ನಾಸ್ಟ್ ದೀಪಾ ಕರ್ಮಾಕರ್ ಅವರಿಗೆ 21 ತಿಂಗಳ ಕಾಲ ನಿಷೇಧ ಹೇರಲಾಗಿದೆ.

ಕಳೆದ ವರ್ಷ ಮಾಡಲಾಗಿದ್ದ ಅವರ ಅಮಾನತು, ಉದ್ಧೀಪನ ಮದ್ದು ಅಪರಾಧಕ್ಕೆ ಸಂಬಂಧಿಸಿದ್ದಲ್ಲ ಎಂದು ಭಾರತೀಯ ಅಧಿಕಾರಿಗಳು ನೀಡಿದ್ದ ಹೇಳಿಕೆಗಳಿಗೆ ಈ ಆದೇಶ ವ್ಯತಿರಿಕ್ತವಾಗಿದೆ.

ಅಂತರರಾಷ್ಟ್ರೀಯ ಜಿಮ್ನಾಸ್ಟಿಕ್ಸ್ ಫೆಡರೇಶನ್ (ಎಫ್‌ಐಜಿ)ನ ಡೋಪಿಂಗ್ ವಿರೋಧಿ ಚಟುವಟಿಕೆಗಳನ್ನು ನಿರ್ವಹಿಸುವ ಸ್ವತಂತ್ರ ಸಂಸ್ಥೆ ಅಂತರರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಐಟಿಎ) ಸಂಗ್ರಹಿಸಿದ್ದ, ಕರ್ಮಾಕರ್ ಅವರ ಪ್ರಯೋಗಾಲಯ ಮಾದರಿಯಲ್ಲಿ ಕಂಡುಬಂದಿರುವ ‘ಹೈಜೆನಾಮೈನ್’ ಅಂಶವು ವಿಶ್ವ ಉದ್ದೀಪನ ವಿರೋಧಿ ಸಂಸ್ಥೆಯ ನೀಯಮಗಳ ಅಡಿಯಲ್ಲಿ ನಿಷೇಧಿಸಲ್ಪಟ್ಟಿರುವುದಾಗಿದೆ.

ದೀಪಾ ಅವರ ನಿಷೇಧದ ಅವಧಿಯು ಇದೇ ವರ್ಷ ಜುಲೈ 10ಕ್ಕೆ ಮುಕ್ತಾಯಗೊಳ್ಳಲಿದೆ. ಉದ್ದೀಪನ ಮದ್ದು ಪರೀಕ್ಷೆ ಮಾದರಿ ಸಂಗ್ರಹಿಸಿದ ದಿನದಿಂದ ನಿಷೇಧವನ್ನು ಅನ್ವಯಿಸಲಾಗಿದೆ.

‘ದೀಪಾ ಅವರ ಉದ್ದೀಪನ ಮದ್ದು ಪರೀಕ್ಷೆಯಲ್ಲಿ ಹೈಜೆನಾಮೈನ್ ಪತ್ತೆಯಾಗಿರುವ ಕಾರಣ ಅವರನ್ನು 21 ತಿಂಗಳ ಅವಧಿಗೆ ಅಮಾನತುಗೊಳಿಸಲಾಗಿದೆ ಎಂದು ಐಟಿಎ ದೃಢಪಡಿಸುತ್ತದೆ, ಇದು 10 ಜುಲೈ 2023ರವರೆಗೆ ಅನ್ವಯವಾಗುತ್ತದೆ’ಎಂದು ಐಟಿಎ ಶುಕ್ರವಾರ ತಡರಾತ್ರಿ ಹೇಳಿಕೆಯಲ್ಲಿ ತಿಳಿಸಿದೆ.

ಸ್ವಿಟ್ಜರ್‌ಲೆಂಡ್ ಮೂಲದ ಐಟಿಎ, ಆದಾಯ ರಹಿತ ಸಂಘಟನೆಯಾಗಿದ್ದು, ವಾಡಾ ಮತ್ತು ಅಂತರರಾಷ್ಟ್ರೀಯ ಒಲಿಪಿಂಕ್ ಸಮಿತಿಯ ಕಣ್ಗಾವಲಿನಲ್ಲಿ ವಿವಿಧ ಅಂತರರಾಷ್ಟ್ರೀಯ ಕ್ರೀಡಾ ಫೆಡರೇಶನ್‌ಗಳಿಗೆ ಉದ್ಧಿಪನಾ ಮದ್ದು ವಿರೋಧಿ ಕಾರ್ಯಕ್ರಮಗಳ ಜಾರಿಗಾಗಿ ಕೆಲಸ ಮಾಡುತ್ತದೆ.

andolanait

Recent Posts

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

2 mins ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

11 mins ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

1 hour ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

2 hours ago

ಭಾರತ-ನ್ಯೂಜಿಲೆಂಡ್‌ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ : 1.88 ಲಕ್ಷ ಕೋಟಿ ಹೂಡಿಕೆ

ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…

2 hours ago

ಕಾಂಗ್ರೆಸ್ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ…

3 hours ago