ಕ್ರೀಡೆ

ಒಲಿಂಪಿಕ್ಸ್‌ನಲ್ಲಿ ಅಶಿಸ್ತು ನಡೆ: ಕುಸ್ತಿಪಟು ಅಂತಿಮ್‌ ಪಂಘಲ್‌ಗೆ 3 ವರ್ಷ ನಿಷೇಧ ಸಾಧ್ಯತೆ

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಅಶಿಸ್ತು ಪ್ರದರ್ಶಿಸಿದ ಭಾರತದ ಕುಸ್ತಿಪಟು ಅಂತಿಮ್‌ ಪಂಘಲ್‌ ಅವರಿಗೆ ಭಾರತೀಯ ಒಲಿಂಪಿಕ್ಸ್‌ ಸಂಸ್ಥೆ(ಐಒಎ) ಮೂರು ವರ್ಷಗಳ ಕಾಲ ನಿಷೇಧ ಹೇರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಗೇಮ್‌ ವಿಲೇಜ್‌ಗೆ ಪ್ರವೇಶಿಸಲು ಅಂತಿಮ್‌ ಪಂಘಾಲ್‌ ಅವರ ಅಧಿಕೃತ ಕಾರ್ಡ್‌ನ್ನು ಅವರ ಸಹೋದರಿ ನಿಶಾ ಬಳಸಿ ಸಿಕ್ಕಿಬಿದ್ದಿದ್ದಾರೆ. ಈ ಕಾರ್ಡ್‌ ಆಟಗಾರರಲ್ಲದವರು ಬಳಸುವಂತಿಲ್ಲ ಎಂಬ ನಿಯಮವಿದೆ. ಭಾರತೀಯ ತಂಡ ಪ್ಯಾರಿಸ್‌ನಲ್ಲಿ ನಿಯಮ ಮುರಿದ ಮುಜುಗರಕ್ಕೆ ಒಳಗಾದ ಹಿನ್ನೆಲೆ ಐಒಎ ಕ್ರಮ ಕೈಗೊಳ್ಳಲಿದೆ ಎಂದು ಮೂಲಗಳು ಹೇಳಿವೆ.

ಬುಧುವಾರ(ಆ.8) ನಡೆದ ಮಹಿಳೆಯರ ಕುಸ್ತಿ 53 ಕೆ.ಜಿ ವಿಭಾಗದ ಆರಂಭಿಕದಲ್ಲೇ ಸೋತಾ ಅಂತಿಮ್‌ ಕ್ರೀಡಾಕೂಟದಿಂದ ನಿರ್ಗಮಿಸಿದ್ದರು. ಇದೀಗ ಅಂತಿಮ್‌ ಅವರು ಭಾರತಕಕೆ ಆಗಮಿಸಿದ ಬಳಿಕ ನಿಷೇಧಸ ಕುರಿತಂತೆ ಅಧಿಕೃತ ಆದೇಶ ಹೊರಬೀಳಲಿದೆ ಎನ್ನಲಾಗಿದೆ.

ಕ್ರೀಡಾಕೂಟದಿಂದ ಸೋತ ಬಳಿಕ ಅಂತಿಮ್‌ ಪಂಘಲ್‌ ಅವರು ಅಥ್ಲೇಟ್ಸ್‌ ವಿಲೇಜ್‌ಗೆ ತೆರಳದೆ ಕೋಚ್‌ಗಳಿದ್ದ ಹೋಟೆಲ್‌ಗೆ ಬಂದಿದ್ದರು. ಈ ವೇಳೆ ತಮ್ಮ ಸಹೋದರಿಗೆ ಕಾರ್ಡ್‌ ನೀಡಿ ಅಥ್ಲೆಟ್‌ ವಿಲೇಜ್‌ನಿಂದ ತಮ್ಮ ವಸ್ತುಗಳನ್ನು ತರುವಂತೆ ಹೇಳಿ ಕಳುಹಿಸಿದ್ದರು. ಅವರ ಸಹೋದರಿಯನ್ನು ಪ್ರವೇಶ ಮಾಡಿದ ಸಮಯದಲ್ಲಿ ತಡೆಹಿಡಿದ ಭದ್ರತಾ ಸಿಬ್ಬಂದಿ ಸ್ಥಳೀಯ ಪೊಲೀಸ್‌ ಠಾಣೆಗೆ ಕರೆದೊಯ್ದು ಹೇಳಿಕೆ ದಾಖಲಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

1 hour ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

1 hour ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

1 hour ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

1 hour ago

ಓದುಗರ ಪತ್ರ: ರಥೋತ್ಸವ: ಮುನ್ನೆಚ್ಚರಿಕೆ ಅಗತ್ಯ

ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…

1 hour ago

ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರಿಗೆ ಸಂಕಷ್ಟ

ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…

1 hour ago