ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಅಶಿಸ್ತು ಪ್ರದರ್ಶಿಸಿದ ಭಾರತದ ಕುಸ್ತಿಪಟು ಅಂತಿಮ್ ಪಂಘಲ್ ಅವರಿಗೆ ಭಾರತೀಯ ಒಲಿಂಪಿಕ್ಸ್ ಸಂಸ್ಥೆ(ಐಒಎ) ಮೂರು ವರ್ಷಗಳ ಕಾಲ ನಿಷೇಧ ಹೇರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಗೇಮ್ ವಿಲೇಜ್ಗೆ ಪ್ರವೇಶಿಸಲು ಅಂತಿಮ್ ಪಂಘಾಲ್ ಅವರ ಅಧಿಕೃತ ಕಾರ್ಡ್ನ್ನು ಅವರ ಸಹೋದರಿ ನಿಶಾ ಬಳಸಿ ಸಿಕ್ಕಿಬಿದ್ದಿದ್ದಾರೆ. ಈ ಕಾರ್ಡ್ ಆಟಗಾರರಲ್ಲದವರು ಬಳಸುವಂತಿಲ್ಲ ಎಂಬ ನಿಯಮವಿದೆ. ಭಾರತೀಯ ತಂಡ ಪ್ಯಾರಿಸ್ನಲ್ಲಿ ನಿಯಮ ಮುರಿದ ಮುಜುಗರಕ್ಕೆ ಒಳಗಾದ ಹಿನ್ನೆಲೆ ಐಒಎ ಕ್ರಮ ಕೈಗೊಳ್ಳಲಿದೆ ಎಂದು ಮೂಲಗಳು ಹೇಳಿವೆ.
ಬುಧುವಾರ(ಆ.8) ನಡೆದ ಮಹಿಳೆಯರ ಕುಸ್ತಿ 53 ಕೆ.ಜಿ ವಿಭಾಗದ ಆರಂಭಿಕದಲ್ಲೇ ಸೋತಾ ಅಂತಿಮ್ ಕ್ರೀಡಾಕೂಟದಿಂದ ನಿರ್ಗಮಿಸಿದ್ದರು. ಇದೀಗ ಅಂತಿಮ್ ಅವರು ಭಾರತಕಕೆ ಆಗಮಿಸಿದ ಬಳಿಕ ನಿಷೇಧಸ ಕುರಿತಂತೆ ಅಧಿಕೃತ ಆದೇಶ ಹೊರಬೀಳಲಿದೆ ಎನ್ನಲಾಗಿದೆ.
ಕ್ರೀಡಾಕೂಟದಿಂದ ಸೋತ ಬಳಿಕ ಅಂತಿಮ್ ಪಂಘಲ್ ಅವರು ಅಥ್ಲೇಟ್ಸ್ ವಿಲೇಜ್ಗೆ ತೆರಳದೆ ಕೋಚ್ಗಳಿದ್ದ ಹೋಟೆಲ್ಗೆ ಬಂದಿದ್ದರು. ಈ ವೇಳೆ ತಮ್ಮ ಸಹೋದರಿಗೆ ಕಾರ್ಡ್ ನೀಡಿ ಅಥ್ಲೆಟ್ ವಿಲೇಜ್ನಿಂದ ತಮ್ಮ ವಸ್ತುಗಳನ್ನು ತರುವಂತೆ ಹೇಳಿ ಕಳುಹಿಸಿದ್ದರು. ಅವರ ಸಹೋದರಿಯನ್ನು ಪ್ರವೇಶ ಮಾಡಿದ ಸಮಯದಲ್ಲಿ ತಡೆಹಿಡಿದ ಭದ್ರತಾ ಸಿಬ್ಬಂದಿ ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ದು ಹೇಳಿಕೆ ದಾಖಲಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…
ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…