ಕ್ರೀಡೆ

ಒಲಿಂಪಿಕ್ಸ್‌ನಲ್ಲಿ ಅಶಿಸ್ತು ನಡೆ: ಕುಸ್ತಿಪಟು ಅಂತಿಮ್‌ ಪಂಘಲ್‌ಗೆ 3 ವರ್ಷ ನಿಷೇಧ ಸಾಧ್ಯತೆ

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಅಶಿಸ್ತು ಪ್ರದರ್ಶಿಸಿದ ಭಾರತದ ಕುಸ್ತಿಪಟು ಅಂತಿಮ್‌ ಪಂಘಲ್‌ ಅವರಿಗೆ ಭಾರತೀಯ ಒಲಿಂಪಿಕ್ಸ್‌ ಸಂಸ್ಥೆ(ಐಒಎ) ಮೂರು ವರ್ಷಗಳ ಕಾಲ ನಿಷೇಧ ಹೇರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಗೇಮ್‌ ವಿಲೇಜ್‌ಗೆ ಪ್ರವೇಶಿಸಲು ಅಂತಿಮ್‌ ಪಂಘಾಲ್‌ ಅವರ ಅಧಿಕೃತ ಕಾರ್ಡ್‌ನ್ನು ಅವರ ಸಹೋದರಿ ನಿಶಾ ಬಳಸಿ ಸಿಕ್ಕಿಬಿದ್ದಿದ್ದಾರೆ. ಈ ಕಾರ್ಡ್‌ ಆಟಗಾರರಲ್ಲದವರು ಬಳಸುವಂತಿಲ್ಲ ಎಂಬ ನಿಯಮವಿದೆ. ಭಾರತೀಯ ತಂಡ ಪ್ಯಾರಿಸ್‌ನಲ್ಲಿ ನಿಯಮ ಮುರಿದ ಮುಜುಗರಕ್ಕೆ ಒಳಗಾದ ಹಿನ್ನೆಲೆ ಐಒಎ ಕ್ರಮ ಕೈಗೊಳ್ಳಲಿದೆ ಎಂದು ಮೂಲಗಳು ಹೇಳಿವೆ.

ಬುಧುವಾರ(ಆ.8) ನಡೆದ ಮಹಿಳೆಯರ ಕುಸ್ತಿ 53 ಕೆ.ಜಿ ವಿಭಾಗದ ಆರಂಭಿಕದಲ್ಲೇ ಸೋತಾ ಅಂತಿಮ್‌ ಕ್ರೀಡಾಕೂಟದಿಂದ ನಿರ್ಗಮಿಸಿದ್ದರು. ಇದೀಗ ಅಂತಿಮ್‌ ಅವರು ಭಾರತಕಕೆ ಆಗಮಿಸಿದ ಬಳಿಕ ನಿಷೇಧಸ ಕುರಿತಂತೆ ಅಧಿಕೃತ ಆದೇಶ ಹೊರಬೀಳಲಿದೆ ಎನ್ನಲಾಗಿದೆ.

ಕ್ರೀಡಾಕೂಟದಿಂದ ಸೋತ ಬಳಿಕ ಅಂತಿಮ್‌ ಪಂಘಲ್‌ ಅವರು ಅಥ್ಲೇಟ್ಸ್‌ ವಿಲೇಜ್‌ಗೆ ತೆರಳದೆ ಕೋಚ್‌ಗಳಿದ್ದ ಹೋಟೆಲ್‌ಗೆ ಬಂದಿದ್ದರು. ಈ ವೇಳೆ ತಮ್ಮ ಸಹೋದರಿಗೆ ಕಾರ್ಡ್‌ ನೀಡಿ ಅಥ್ಲೆಟ್‌ ವಿಲೇಜ್‌ನಿಂದ ತಮ್ಮ ವಸ್ತುಗಳನ್ನು ತರುವಂತೆ ಹೇಳಿ ಕಳುಹಿಸಿದ್ದರು. ಅವರ ಸಹೋದರಿಯನ್ನು ಪ್ರವೇಶ ಮಾಡಿದ ಸಮಯದಲ್ಲಿ ತಡೆಹಿಡಿದ ಭದ್ರತಾ ಸಿಬ್ಬಂದಿ ಸ್ಥಳೀಯ ಪೊಲೀಸ್‌ ಠಾಣೆಗೆ ಕರೆದೊಯ್ದು ಹೇಳಿಕೆ ದಾಖಲಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

32 mins ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

2 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

3 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

5 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

5 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

5 hours ago