ಕ್ರೀಡೆ

ಒಲಿಂಪಿಕ್ಸ್‌ನಲ್ಲಿ ಅಶಿಸ್ತು ನಡೆ: ಕುಸ್ತಿಪಟು ಅಂತಿಮ್‌ ಪಂಘಲ್‌ಗೆ 3 ವರ್ಷ ನಿಷೇಧ ಸಾಧ್ಯತೆ

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಅಶಿಸ್ತು ಪ್ರದರ್ಶಿಸಿದ ಭಾರತದ ಕುಸ್ತಿಪಟು ಅಂತಿಮ್‌ ಪಂಘಲ್‌ ಅವರಿಗೆ ಭಾರತೀಯ ಒಲಿಂಪಿಕ್ಸ್‌ ಸಂಸ್ಥೆ(ಐಒಎ) ಮೂರು ವರ್ಷಗಳ ಕಾಲ ನಿಷೇಧ ಹೇರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಗೇಮ್‌ ವಿಲೇಜ್‌ಗೆ ಪ್ರವೇಶಿಸಲು ಅಂತಿಮ್‌ ಪಂಘಾಲ್‌ ಅವರ ಅಧಿಕೃತ ಕಾರ್ಡ್‌ನ್ನು ಅವರ ಸಹೋದರಿ ನಿಶಾ ಬಳಸಿ ಸಿಕ್ಕಿಬಿದ್ದಿದ್ದಾರೆ. ಈ ಕಾರ್ಡ್‌ ಆಟಗಾರರಲ್ಲದವರು ಬಳಸುವಂತಿಲ್ಲ ಎಂಬ ನಿಯಮವಿದೆ. ಭಾರತೀಯ ತಂಡ ಪ್ಯಾರಿಸ್‌ನಲ್ಲಿ ನಿಯಮ ಮುರಿದ ಮುಜುಗರಕ್ಕೆ ಒಳಗಾದ ಹಿನ್ನೆಲೆ ಐಒಎ ಕ್ರಮ ಕೈಗೊಳ್ಳಲಿದೆ ಎಂದು ಮೂಲಗಳು ಹೇಳಿವೆ.

ಬುಧುವಾರ(ಆ.8) ನಡೆದ ಮಹಿಳೆಯರ ಕುಸ್ತಿ 53 ಕೆ.ಜಿ ವಿಭಾಗದ ಆರಂಭಿಕದಲ್ಲೇ ಸೋತಾ ಅಂತಿಮ್‌ ಕ್ರೀಡಾಕೂಟದಿಂದ ನಿರ್ಗಮಿಸಿದ್ದರು. ಇದೀಗ ಅಂತಿಮ್‌ ಅವರು ಭಾರತಕಕೆ ಆಗಮಿಸಿದ ಬಳಿಕ ನಿಷೇಧಸ ಕುರಿತಂತೆ ಅಧಿಕೃತ ಆದೇಶ ಹೊರಬೀಳಲಿದೆ ಎನ್ನಲಾಗಿದೆ.

ಕ್ರೀಡಾಕೂಟದಿಂದ ಸೋತ ಬಳಿಕ ಅಂತಿಮ್‌ ಪಂಘಲ್‌ ಅವರು ಅಥ್ಲೇಟ್ಸ್‌ ವಿಲೇಜ್‌ಗೆ ತೆರಳದೆ ಕೋಚ್‌ಗಳಿದ್ದ ಹೋಟೆಲ್‌ಗೆ ಬಂದಿದ್ದರು. ಈ ವೇಳೆ ತಮ್ಮ ಸಹೋದರಿಗೆ ಕಾರ್ಡ್‌ ನೀಡಿ ಅಥ್ಲೆಟ್‌ ವಿಲೇಜ್‌ನಿಂದ ತಮ್ಮ ವಸ್ತುಗಳನ್ನು ತರುವಂತೆ ಹೇಳಿ ಕಳುಹಿಸಿದ್ದರು. ಅವರ ಸಹೋದರಿಯನ್ನು ಪ್ರವೇಶ ಮಾಡಿದ ಸಮಯದಲ್ಲಿ ತಡೆಹಿಡಿದ ಭದ್ರತಾ ಸಿಬ್ಬಂದಿ ಸ್ಥಳೀಯ ಪೊಲೀಸ್‌ ಠಾಣೆಗೆ ಕರೆದೊಯ್ದು ಹೇಳಿಕೆ ದಾಖಲಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

12 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

12 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

12 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

12 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

12 hours ago