ಕ್ರೀಡೆ

ಇಂಡೋ-ವಿಂಡೀಸ್ ಟೆಸ್ಟ್: ಮೊದಲ ಟೆಸ್ಟ್ ನಲ್ಲಿ ದಾಖಲೆ ಬರೆದ ಆರ್ ಅಶ್ವಿನ್

ಡಾಮ್ನಿಕಾ: ವೆಸ್ಟ್‌ ಇಂಡೀಸ್‌ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್‌ ಕ್ರಿಕೆಟ್‌ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಭರ್ಜರಿ ಪ್ರದರ್ಶನ ತೋರಿದ ಭಾರತ ತಂಡದ ಆರ್ ಅಶ್ವಿನ್ ಟೆಸ್ಟ್ ಕ್ರಿಕೆಟ್ ನಲ್ಲಿ ಐತಿಹಾಸಿಕ ದಾಖಲೆ ಬರೆದಿದ್ದು, ಆ್ಯಂಡರ್‌ಸನ್ ದಾಖಲೆಯನ್ನು ಮುರಿದಿದ್ದಾರೆ.

ಹೌದು.. ವಿಂಡೀಸ್ ವಿರುದ್ಧ ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 60 ರನ್ ನೀಡಿ ಐದು ವಿಕೆಟ್ ಪಡೆದ ಆರ್ ಅಶ್ವಿನ್ ಆ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನ 33ನೇ ಬಾರಿ ಇನಿಂಗ್ಸ್‌ವೊಂದರಲ್ಲಿ 5 ವಿಕೆಟ್‌ ಗೊಂಚಲು ಪಡೆದರು. ಅಂತೆಯೇ ಆರ್‌.ಅಶ್ವಿನ್‌ ಅವರು ಇಂಗ್ಲೆಂಡ್‌ ವೇಗಿ ಜೇಮ್ಸ್ ಆ್ಯಂಡರ್ಸನ್‌ ಅವರ ದಾಖಲೆ ಮುರಿದಿದ್ದಾರೆ.

Most five-wicket hauls in India-West Indies Tests
6 – Malcolm Marshall
5 – Harbhajan Singh
5 – Ravichandran Ashwin

ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಬೌಲಿಂಗ್ ವಿಭಾಗದಲ್ಲಿ ಅಗ್ರ ಸ್ಥಾನದಲ್ಲಿರುವ ಅಶ್ವಿನ್‌ ಈವರೆಗೆ ಒಟ್ಟು 33 ಬಾರಿ ಇನಿಂಗ್ಸ್‌ವೊಂದರಲ್ಲಿ 5 ವಿಕೆಟ್‌ ಗೊಂಚಲು ಸಾಧನೆ ಮಾಡಿದ್ದಾರೆ. ಆ ಮೂಲಕ ಹೆಚ್ಚು ಸಲ ಒಂದೇ ಇನಿಂಗ್ಸ್‌ನಲ್ಲಿ 5 ವಿಕೆಟ್‌ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದ್ದಾರೆ.

32 ಸಲ ಈ ಸಾಧನೆ ಮಾಡಿರುವ ಇಂಗ್ಲೆಂಡ್‌ ವೇಗಿ ಜೇಮ್ಸ್‌ ಆ್ಯಂಡರ್‌ಸನ್‌ ಇದೀಗ 7ನೇ ಸ್ಥಾನಕ್ಕೆ ಕುಸಿದಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಅತೀ ಹೆಚ್ಚು ಬಾರಿ 5 ವಿಕೆಟ್ ಗೊಂಚಲು ಪಡೆದ ಬೌಲರ್ ಗಳ ಪಟ್ಟಿಯಲ್ಲಿ ಶ್ರೀಲಂಕಾದ ಸ್ಪಿನ್ ದಿಗ್ಗಜ ಮುತ್ತಯ್ಯ ಮುರಳೀಧರನ್ ಇದ್ದು ಅವರು ಒಟ್ಟು 67 ಬಾರಿ 5 ವಿಕೆಟ್ ಗಳ ಗೊಂಚಲು ಪಡೆದಿದ್ದಾರೆ. ನಂತರದ ಸ್ಥಾನದಲ್ಲಿ ಆಸ್ಟ್ರೇಲಿಯಾದ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ಇದ್ದು ಅವರು ಒಟ್ಟು 37 ಬಾರಿ ಈ ಸಾಧನೆ ಮಾಡಿದ್ದಾರೆ.

ಮೂರನೇ ಸ್ಥಾನದಲ್ಲಿ ನ್ಯೂಜಿಲೆಂಡ್ ನ ರಿಟರ್ಡ್ ಹಡ್ಲೀ ಇದ್ದು ಅವರು 36 ಬಾರಿ ಈ ಸಾಧನೆ ಮಾಡಿದ್ದಾರೆ. ನಂತರದ ಸ್ಥಾನದಲ್ಲಿ ಅನಿಲ್ ಕುಂಬ್ಳೆ ಇದ್ದು ಅವರು 35 ಬಾರಿ 5 ವಿಕೆಟ್ ಗೊಂಚಲು ಪಡೆದಿದ್ದಾರೆ. 5ನೇ ಸ್ಥಾನದಲ್ಲಿ ಶ್ರೀಲಂಕಾದ ರಂಗನಾ ಹೆರಾತ್ ಇದ್ದು ಅವರು 34 ಮತ್ತು ನಂತರದ ಸ್ಥಾನದಲ್ಲಿರುವ ಆರ್ ಅಶ್ವಿನ್ 33 ಬಾರಿ ಸಾಧನೆ ಮಾಡಿ 6ನೇ ಸ್ಥಾನಕ್ಕೇರಿದ್ದಾರೆ.

India bowlers with most Test five-fors in the West Indies
3 – Subhash Gupte
3 – Anil Kumble
3 – Harbhajan Singh
3 – Ishant Sharma
3 – Ravichandran Ashwin

ವಿಂಡೀಸ್ ವಿರುದ್ಧವೂ ದಾಖಲೆ
ಇನ್ನು ಭಾರತ-ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಸರಣಿಗಳಲ್ಲಿ ಅತೀ ಹೆಚ್ಚು ಬಾರಿ 5 ವಿಕೆಟ್ ಸಾಧನೆ ಮಾಡಿದ ಬೌಲರ್ ಗಳ ಪಟ್ಟಿಯಲ್ಲೂ ಅಶ್ವಿನ್ ಸ್ಥಾನ ಪಡೆದಿದ್ದು, 5 ಬಾರಿ ಈ ಸಾಧನೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ 6 ಬಾರಿ 5 ವಿಕೆಟ್ ಪಡೆದ ಮಾಲ್ಕಮ್ ಮಾರ್ಷಲ್ ಅಗ್ರಸ್ಥಾನದಲ್ಲಿದ್ದು, 5 ಬಾರಿ ಈ ಸಾಧನೆ ಮಾಡಿದ ಹರ್ಭಜನ್ ಸಿಂಗ್ ಮತ್ತು ಅಶ್ವಿನ್ ಜಂಟಿ 2ನೇ ಸ್ಥಾನದಲ್ಲಿದ್ದಾರೆ.

andolanait

Recent Posts

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…

50 mins ago

ಹನೂರು| ಆಕಸ್ಮಿಕ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…

54 mins ago

ಗಾಂಜಾ ಮಾರಾಟ, ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಬಂಧನ

ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

59 mins ago

ಹನೂರು| ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…

1 hour ago

ಟಿ.ನರಸೀಪುರ: ಕೆಎಸ್‌ಐಸಿ ಫ್ಯಾಕ್ಟರಿ ಆವರಣದಲ್ಲಿ ಸ್ಟೇಡಿಯಂ ನಿರ್ಮಿಸುವ ಪ್ರಸ್ತಾವನೆ: ಬೀದಿಗಿಳಿದ ಕಾರ್ಮಿಕರು

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…

2 hours ago

ಕೇರಳ ಇನ್ನು ಮುಂದೆ ಕೇರಳಂ: ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅಸ್ತು

ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…

2 hours ago