ಕ್ರೀಡೆ

ಇಂಡೋ-ವಿಂಡೀಸ್ ಟೆಸ್ಟ್: ಮೊದಲ ಟೆಸ್ಟ್ ನಲ್ಲಿ ದಾಖಲೆ ಬರೆದ ಆರ್ ಅಶ್ವಿನ್

ಡಾಮ್ನಿಕಾ: ವೆಸ್ಟ್‌ ಇಂಡೀಸ್‌ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್‌ ಕ್ರಿಕೆಟ್‌ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಭರ್ಜರಿ ಪ್ರದರ್ಶನ ತೋರಿದ ಭಾರತ ತಂಡದ ಆರ್ ಅಶ್ವಿನ್ ಟೆಸ್ಟ್ ಕ್ರಿಕೆಟ್ ನಲ್ಲಿ ಐತಿಹಾಸಿಕ ದಾಖಲೆ ಬರೆದಿದ್ದು, ಆ್ಯಂಡರ್‌ಸನ್ ದಾಖಲೆಯನ್ನು ಮುರಿದಿದ್ದಾರೆ.

ಹೌದು.. ವಿಂಡೀಸ್ ವಿರುದ್ಧ ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 60 ರನ್ ನೀಡಿ ಐದು ವಿಕೆಟ್ ಪಡೆದ ಆರ್ ಅಶ್ವಿನ್ ಆ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನ 33ನೇ ಬಾರಿ ಇನಿಂಗ್ಸ್‌ವೊಂದರಲ್ಲಿ 5 ವಿಕೆಟ್‌ ಗೊಂಚಲು ಪಡೆದರು. ಅಂತೆಯೇ ಆರ್‌.ಅಶ್ವಿನ್‌ ಅವರು ಇಂಗ್ಲೆಂಡ್‌ ವೇಗಿ ಜೇಮ್ಸ್ ಆ್ಯಂಡರ್ಸನ್‌ ಅವರ ದಾಖಲೆ ಮುರಿದಿದ್ದಾರೆ.

Most five-wicket hauls in India-West Indies Tests
6 – Malcolm Marshall
5 – Harbhajan Singh
5 – Ravichandran Ashwin

ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಬೌಲಿಂಗ್ ವಿಭಾಗದಲ್ಲಿ ಅಗ್ರ ಸ್ಥಾನದಲ್ಲಿರುವ ಅಶ್ವಿನ್‌ ಈವರೆಗೆ ಒಟ್ಟು 33 ಬಾರಿ ಇನಿಂಗ್ಸ್‌ವೊಂದರಲ್ಲಿ 5 ವಿಕೆಟ್‌ ಗೊಂಚಲು ಸಾಧನೆ ಮಾಡಿದ್ದಾರೆ. ಆ ಮೂಲಕ ಹೆಚ್ಚು ಸಲ ಒಂದೇ ಇನಿಂಗ್ಸ್‌ನಲ್ಲಿ 5 ವಿಕೆಟ್‌ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದ್ದಾರೆ.

32 ಸಲ ಈ ಸಾಧನೆ ಮಾಡಿರುವ ಇಂಗ್ಲೆಂಡ್‌ ವೇಗಿ ಜೇಮ್ಸ್‌ ಆ್ಯಂಡರ್‌ಸನ್‌ ಇದೀಗ 7ನೇ ಸ್ಥಾನಕ್ಕೆ ಕುಸಿದಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಅತೀ ಹೆಚ್ಚು ಬಾರಿ 5 ವಿಕೆಟ್ ಗೊಂಚಲು ಪಡೆದ ಬೌಲರ್ ಗಳ ಪಟ್ಟಿಯಲ್ಲಿ ಶ್ರೀಲಂಕಾದ ಸ್ಪಿನ್ ದಿಗ್ಗಜ ಮುತ್ತಯ್ಯ ಮುರಳೀಧರನ್ ಇದ್ದು ಅವರು ಒಟ್ಟು 67 ಬಾರಿ 5 ವಿಕೆಟ್ ಗಳ ಗೊಂಚಲು ಪಡೆದಿದ್ದಾರೆ. ನಂತರದ ಸ್ಥಾನದಲ್ಲಿ ಆಸ್ಟ್ರೇಲಿಯಾದ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ಇದ್ದು ಅವರು ಒಟ್ಟು 37 ಬಾರಿ ಈ ಸಾಧನೆ ಮಾಡಿದ್ದಾರೆ.

ಮೂರನೇ ಸ್ಥಾನದಲ್ಲಿ ನ್ಯೂಜಿಲೆಂಡ್ ನ ರಿಟರ್ಡ್ ಹಡ್ಲೀ ಇದ್ದು ಅವರು 36 ಬಾರಿ ಈ ಸಾಧನೆ ಮಾಡಿದ್ದಾರೆ. ನಂತರದ ಸ್ಥಾನದಲ್ಲಿ ಅನಿಲ್ ಕುಂಬ್ಳೆ ಇದ್ದು ಅವರು 35 ಬಾರಿ 5 ವಿಕೆಟ್ ಗೊಂಚಲು ಪಡೆದಿದ್ದಾರೆ. 5ನೇ ಸ್ಥಾನದಲ್ಲಿ ಶ್ರೀಲಂಕಾದ ರಂಗನಾ ಹೆರಾತ್ ಇದ್ದು ಅವರು 34 ಮತ್ತು ನಂತರದ ಸ್ಥಾನದಲ್ಲಿರುವ ಆರ್ ಅಶ್ವಿನ್ 33 ಬಾರಿ ಸಾಧನೆ ಮಾಡಿ 6ನೇ ಸ್ಥಾನಕ್ಕೇರಿದ್ದಾರೆ.

India bowlers with most Test five-fors in the West Indies
3 – Subhash Gupte
3 – Anil Kumble
3 – Harbhajan Singh
3 – Ishant Sharma
3 – Ravichandran Ashwin

ವಿಂಡೀಸ್ ವಿರುದ್ಧವೂ ದಾಖಲೆ
ಇನ್ನು ಭಾರತ-ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಸರಣಿಗಳಲ್ಲಿ ಅತೀ ಹೆಚ್ಚು ಬಾರಿ 5 ವಿಕೆಟ್ ಸಾಧನೆ ಮಾಡಿದ ಬೌಲರ್ ಗಳ ಪಟ್ಟಿಯಲ್ಲೂ ಅಶ್ವಿನ್ ಸ್ಥಾನ ಪಡೆದಿದ್ದು, 5 ಬಾರಿ ಈ ಸಾಧನೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ 6 ಬಾರಿ 5 ವಿಕೆಟ್ ಪಡೆದ ಮಾಲ್ಕಮ್ ಮಾರ್ಷಲ್ ಅಗ್ರಸ್ಥಾನದಲ್ಲಿದ್ದು, 5 ಬಾರಿ ಈ ಸಾಧನೆ ಮಾಡಿದ ಹರ್ಭಜನ್ ಸಿಂಗ್ ಮತ್ತು ಅಶ್ವಿನ್ ಜಂಟಿ 2ನೇ ಸ್ಥಾನದಲ್ಲಿದ್ದಾರೆ.

andolanait

Recent Posts

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

6 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

7 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

7 hours ago

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

7 hours ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

7 hours ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

7 hours ago