ಕ್ರೀಡೆ

ಇಂಡೋ-ವಿಂಡೀಸ್‌ ದ್ವಿತೀಯ ಟೆಸ್ಟ್‌: ಟಾಸ್‌ ಸೋತ ಭಾರತ ಮೊದಲು ಬ್ಯಾಟಿಂಗ್‌!

ಟ್ರಿನಿಡಾಡ್‌ (ವೆಸ್ಟ್ ಇಂಡೀಸ್‌): ಇಲ್ಲಿನ ಕ್ವೀನ್ಸ್‌ ಪಾರ್ಕ್‌ ಓವಲ್ ಮೈದಾನದಲ್ಲಿ ಇಂದಿನಿಂದ ಆರಂಭವಾದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ವೆಸ್ಟ್ ಇಂಡೀಸ್‌ ತಂಡ ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ರೋಹಿತ್‌ ಶರ್ಮಾ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟ್‌ ಮಾಡಲಿದೆ.

ವೇಗದ ಬೌಲಿಂಗ್‌ ಆಲ್‌ರೌಂಡರ್ ಶಾರ್ದುಲ್‌ ಠಾಕೂರ್‌ ಅವರು ಸಂಪೂರ್ಣ ಫಿಟ್‌ ಇಲ್ಲದ ಕಾರಣ ಅವರ ಬದಲು ಟ್ರಿನಿಡಾಡ್‌ ಟೆಸ್ಟ್‌ ಪಂದ್ಯಕ್ಕೆ ಮುಖೇಶ್‌ ಕುಮಾರ್‌ಗೆ ಅವಕಾಶ ನೀಡಲಾಗಿದೆ. ಇನ್ನುಳಿದಂತೆ ಮೊದಲನೇ ಪಂದ್ಯವಾಡಿದ್ದ ಅದೇ ಆಟಗಾರನನ್ನು ಎರಡನೇ ಪಂದ್ಯಕ್ಕೆ ಉಳಿಸಿಕೊಳ್ಳಲಾಗಿದೆ. ಇನ್ನು ವೆಸ್ಟ್ ಇಂಡೀಸ್‌ ತಂಡಕ್ಕೆ ಶೆನನ್‌ ಗ್ಯಾಬ್ರಿಯಲ್‌ ಮರಳಿದ್ದು, ಕಿರ್ಕ್‌ ಮೆಕೆಂಜಿ ಅವರಿಗೆ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ.

ಇನ್ನು ಮೊದಲನೃ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಇನಿಂಗ್ಸ್ ಹಾಗೂ 141 ರನ್‌ಗಳಿಂದ ಗೆಲುವು ಪಡೆದಿತ್ತು. ಇದೀಗ ಅದೇ ಲಯವನ್ನು ಮುಂದುವರಿಸಲು ಟೀಮ್‌ ಇಂಡಿಯಾ ಎದುರು ನೋಡುತ್ತಿದೆ. ಆದರೆ, ಮೊದಲನೇ ಪಂದ್ಯದ ಹೀನಾಯ ಸೋಲಿನಿಂದ ಎಚ್ಚೆತ್ತುಕೊಂಡಿರುವ ಆತಿಥೇಯ ವೆಸ್ಟ್ ಇಂಡೀಸ್‌ ತಂಡ, ಎರಡನೇ ಟೆಸ್ಟ್‌ ಗೆದ್ದು ಟೆಸ್ಟ್‌ ಸರಣಿಯನ್ನು ಡ್ರಾ ಮಾಡಿಕೊಳ್ಳಲು ಎದುರು ನೋಡುತ್ತಿದೆ.

ವಿರಾಟ್‌ ದಾಖಲೆ:  ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಈಗಾಗಲೇ ಹಲವು ದಾಖಲೆಗಳನ್ನು ಬರೆದು ಕಿಂಗ್‌ ಎನಿಸಿಕೊಂಡಿರುವ ಭಾರತ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಇದೀಗ ಮತ್ತೊಂದು ದಾಖಲೆಯ ಸನಿಹದಲ್ಲಿದ್ದಾರೆ. ವೆಸ್ಟ್ ಇಂಡೀಸ್‌ ವಿರುದ್ಧ ಎರಡನೇ ಟೆಸ್ಟ್‌ನಲ್ಲಿ ಕಣಕ್ಕೆ ಇಳಿಯುವ ಮೂಲಕ ರನ್ ಮಷೀನ್‌ ಖ್ಯಾತಿಯ ವಿರಾಟ್‌ ಕೊಹ್ಲಿ ಭಾರತದ ಪರ 500 ಅಂತಾರಾಷ್ಟ್ರೀಯ ಪಂದ್ಯಗಳನ್ನು ಪೂರ್ಣಗೊಳಿಸಲಿದ್ದಾರೆ.

ಎಲೈಟ್‌ ಪಟ್ಟಿಗೆ ಸೇರ್ಪಡೆಯಾಗಲಿದ್ದಾರೆ ಕೊಹ್ಲಿ

ವೆಸ್ಟ್ ಇಂಡೀಸ್‌ ವಿರುದ್ಧ ಎರಡನೇ ಟೆಸ್ಟ್‌ನಲ್ಲಿ ಕಣಕ್ಕೆ ಇಳಿಯುವ ಮೂಲಕ ವಿರಾಟ್‌ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 500 ಪಂದ್ಯಗಳನ್ನು ಪೂರ್ಣಗೊಳಿಸಲಿದ್ದಾರೆ. ಆ ಮೂಲಕ ಈ ಸಾಧನೆ ಮಾಡಿದ ಕ್ರಿಕೆಟ್‌ ದಿಗ್ಗಜರಾದ ಸಚಿನ್‌ ತೆಂಡೂಲ್ಕರ್‌, ಎಂಎಸ್‌ ಧೋನಿ ಹಾಗೂ ರಾಹುಲ್‌ ದ್ರಾವಿಡ್‌ ಅವರನ್ನೊಳಗೊಂಡ ಎಲೈಟ್‌ ಪಟ್ಟಿಗೆ ವಿರಾಟ್‌ ಕೊಹ್ಲಿ ಸೇರ್ಪಡೆಯಾಗಲಿದ್ದಾರೆ.

ಭಾರತದ ಪರ ಅತಿ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳಾಡಿದ ಆಟಗಾರರು

ಸಚಿನ್‌ ತೆಂಡೂಲ್ಕರ್‌-664
ಎಂಎಸ್‌ ಧೋನಿ-535
ರಾಹುಲ್‌ ದ್ರಾವಿಡ್‌-504
ವಿರಾಟ್‌ ಕೊಹ್ಲಿ-499
ರೋಹಿತ್‌ ಶರ್ಮಾ-442

ಭಾರತ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಇಶಾನ್ ಕಿಶನ್(ವಿ.ಕೀ), ರವಿಚಂದ್ರನ್ ಅಶ್ವಿನ್, ಜಯದೇವ್ ಉನದ್ಕಟ್‌, ಮುಖೇಶ್ ಕುಮಾರ್, ಮೊಹಮ್ಮದ್ ಸಿರಾಜ್

andolanait

Recent Posts

ಯತೀಂದ್ರ ಸಿದ್ಧರಾಮಯ್ಯ ಅವಹೇಳನ ಪ್ರಕರಣ: ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್ ವಿರುದ್ಧ ದೂರು ದಾಖಲು

ಮೈಸೂರು: ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್‌ ಮಾಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಹಾಗೂ ಬಿಜೆಪಿ ಐಟಿ…

2 hours ago

ಫೆಬ್ರವರಿ.13ರಿಂದ ಹಂಪಿ ಉತ್ಸವ-2026

ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ…

2 hours ago

ಹನೂರು ಕ್ಷೇತ್ರದಲ್ಲಿ 15 ವರ್ಷಗಳಿಂದ ಆಗದೇ ಇದ್ದ ಅಭಿವೃದ್ಧಿ ಕಾರ್ಯ ನಾನು ಮಾಡಿ ತೋರಿಸಿದ್ದೇನೆ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ…

2 hours ago

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 3.39 ಕೋಟಿ ಮೌಲ್ಯದ ಗಾಂಜಾ ಸೀಜ್‌

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ…

3 hours ago

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಮ್ಯಾಚ್‌ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಮ್ಯಾಚ್‌ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…

3 hours ago

ಹೋಗೇನಕಲ್‌ ಫಾಲ್ಸ್‌ಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ 50 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…

4 hours ago